AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramadan: ರಂಜಾನ್ ಆಚರಣೆಗೆ ರಾಜ್ಯ ಸರ್ಕಾರದಿಂದ ಗೈಡ್​ಲೈನ್ಸ್ ಬಿಡುಗಡೆ

ದೈಹಿಕ ಅಂತರ ಪಾಲಿಸುವುದಕ್ಕಾಗಿ 3 ಪಾಳಿಯಲ್ಲಿ ಸಮಯವನ್ನು ರಾಜ್ಯ ಸರ್ಕಾರ ನಿಗದಿ ಮಾಡಿದೆ. ಮಧ್ಯಾಹ್ನ 12.45 ರಿಂದ 1.45ರ ವರೆಗೆ ನಮಾಜ್ ಮಾಡಲು ಅವಕಾಶವಿರುತ್ತದೆ. ನಂತರ ಮಧ್ಯಾಹ್ನ 1.30 ರಿಂದ 2 ಗಂಟೆಯವರೆಗೆ ಮತ್ತು 2.30 ರಿಂದ 3 ಗಂಟೆಯವರೆಗೆ ನಮಾಜ್ ಮಾಡುವುದಕ್ಕೆ ರಾಜ್ಯ ಸರ್ಕಾರ ಅವಕಾಶವನ್ನು ನೀಡಿದೆ.

Ramadan: ರಂಜಾನ್ ಆಚರಣೆಗೆ ರಾಜ್ಯ ಸರ್ಕಾರದಿಂದ ಗೈಡ್​ಲೈನ್ಸ್ ಬಿಡುಗಡೆ
ಪ್ರಾರ್ಥನೆ (ಸಾಂದರ್ಭಿಕ ಚಿತ್ರ)
sandhya thejappa
| Updated By: guruganesh bhat|

Updated on: Apr 13, 2021 | 4:23 PM

Share

ಬೆಂಗಳೂರು: ಮುಸ್ಲಿಂ ಧರ್ಮದ ಪವಿತ್ರ ಹಬ್ಬಗಳಲ್ಲಿ ರಂಜಾನ್ ಕೂಡಾ ಒಂದು. ಈ ಹಬ್ಬದಲ್ಲಿ ಉಪವಾಸ ಇರುವುದೇ ವಿಶೇಷತೆ. ರಾಜ್ಯದ ಮುಸ್ಲಿಂಮರು ಕೆಲವು ಕಡೆ ಇಂದಿನಿಂದ ಉಪವಾಸವಿದ್ದರೆ, ಇನ್ನು ಕೆಲವು ಕಡೆ ನಾಳೆಯಿಂದ ಉಪವಾಸವಿರುತ್ತಾರೆ. ಮಹಾಮಾರಿ ಕೊರೊನಾ ನಡುವೆಯೂ ರಾಜ್ಯದಲ್ಲಿ ಉಪವಾಸವನ್ನು ಆಚರಿಸುವ ಮುಸ್ಲಿಂಮರಿಗೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ.

ಮಾರ್ಗಸೂಚಿಗಳು ಹೀಗಿವೆ * ಕಂಟೇನ್ಮೆಂಟ್ ಜೋನ್ಗಳಲ್ಲಿರುವ ಮಸೀದಿಗಳು ಬಂದ್ ಮಾಡಿರಬೇಕು. ಮುಂದಿನ ಆದೇಶದವರೆಗೆ ಬಂದ್ ಮಾಡಿರಬೇಕು. ಉಳಿದ ಮಸೀದಿಗಳಲ್ಲಿ ನಮಾಜ್  ಮಾಡಲು ಅವಕಾಶ ನೀಡಲಾಗಿದೆ. * ಉಪವಾಸ ಬಿಡುವಾಗ ಮಸೀದಿಗೆ ಆಹಾರ ತರಬಾರದು. * ಉಪವಾಸವನ್ನು ಮನೆಯಲ್ಲಿಯೇ ಬಿಡಬೇಕು. * ಸಾಮೂಹಿಕ ಪ್ರಾರ್ಥನೆಯಲ್ಲಿ ದೈಹಿಕ ಅಂತರ ಕಡ್ಡಾಯ * ಪ್ರಾರ್ಥನೆಗೂ ಮೊದಲು ಮಾಡುವ ಸ್ವಚ್ಛತೆಗೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕು. * ಮನೆಯಲ್ಲಿಯೇ ವುಲೂಹ್ ಮಾಡಿಕೊಂಡು ಬರಬೇಕು. * ನಮಾಜ್ ವೇಳೆ ಒಂದೇ ಕಾರ್ಪೆಟ್ ಬಳಸುವಂತಿಲ್ಲ. ವೈಯಕ್ತಿಕವಾಗಿ ಕಾರ್ಪೆಟ್ ಬಳಸಬೇಕು. * ಪ್ರಾರ್ಥನೆಗೆ 5 ನಿಮಿಷ ಮುಂಚಿತವಾಗಿ ಮಸೀದಿ ತೆರೆಯಬೇಕೆಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಮಸೀದಿಗಳಲ್ಲಿ ನಮಾಜ್ ಮಾಡುವುದಕ್ಕೆ ಸಮಯ ನಿಗದಿ ದೈಹಿಕ ಅಂತರ ಪಾಲಿಸುವುದಕ್ಕಾಗಿ 3 ಪಾಳಿಯ ಸಮಯವನ್ನು ರಾಜ್ಯ ಸರ್ಕಾರ ನಿಗದಿ ಮಾಡಿದೆ. ಮಧ್ಯಾಹ್ನ 12.45 ರಿಂದ 1.45ರ ವರೆಗೆ ನಮಾಜ್ ಮಾಡಲು ಅವಕಾಶವಿರುತ್ತದೆ. ನಂತರ ಮಧ್ಯಾಹ್ನ 1.30 ರಿಂದ 2 ಗಂಟೆಯವರೆಗೆ ಮತ್ತು 2.30 ರಿಂದ 3 ಗಂಟೆಯವರೆಗೆ ನಮಾಜ್ ಮಾಡುವುದಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಿದೆ.

ದಾವಣಗೆರೆಯಲ್ಲಿ ಸಂಜೆ 7 ಗಂಟೆ ನಂತರ ಕೊವಿಡ್ ಲಸಿಕೆ ನೀಡಿಕೆ ದಾವಣಗೆರೆ: ರಂಜಾನ್ ಉಪವಾಸ ಹಿನ್ನೆಲೆ ನಾಳೆಯಿಂದ ಮುಸ್ಲಿಂಮರಿಗೆ ಸಂಜೆ 7 ಗಂಟೆ ನಂತರ ಕೊವಿಡ್ ಲಸಿಕೆ ನೀಡಲು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ನಿರ್ಧರಿಸಿದ್ದಾರೆ. ಮುಸ್ಲಿಂ ಧರ್ಮಗುರುಗಳ ಸಭೆಯಲ್ಲಿ ವೈದ್ಯಾಧಿಕಾರಿಗಳ ಜೊತೆ ಚರ್ಚಿಸಿ ಜಿಲ್ಲಾಧಿಕಾರಿ ಅಂತಿಮ ತೀರ್ಮಾನ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ

Ramadan Time Table 2021: ಪವಿತ್ರ ಕುರಾನ್ ಸ್ವರ್ಗದಿಂದ ಭೂಮಿಗೆ ಬಂದಿದ್ದು ಇದೇ ರಂಜಾನ್ ತಿಂಗಳಲ್ಲಿ.. ರಂಜಾನ್ ಉಪವಾಸದ ವಿವರ ಇಲ್ಲಿದೆ

Ramadan 2021: ರಂಜಾನ್ ಹಬ್ಬದ ಪ್ರಾಮುಖ್ಯತೆ, ಉಪವಾಸದ ಆರಂಭ.. ಇವೆಲ್ಲದರ ಡಿಟೇಲ್ಸ್ ಇಲ್ಲಿದೆ

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?