AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರೇಮಗಳೂರು ಕಣ್ಣನ್​​ಗೆ ನೀಡಿರುವ ನೋಟಿಸ್ ಹಿಂಪಡೆಯಲು ಸೂಚಿಸುವೆ: ಸಚಿವ ರಾಮಲಿಂಗಾರೆಡ್ಡಿ

ಕನ್ನಡದಲ್ಲೇ ರಾಮನಿಗೆ ಅರ್ಚನೆ ಮಾಡುವ ಚಿಕ್ಕಮಗಳೂರಿನ ಹಿರೇಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಿರೇಮಗಳೂರು ಕಣ್ಣನ್ ಅವರ ವೇತನ ವಾಪಸ್ ಕೇಳುವ ಮೂಲಕ ಸಿದ್ದರಾಮಯ್ಯ ಸರ್ಕಾರ ತೀವ್ರ ಆಕ್ರೋಶಕ್ಕೆ ಗುರಿಯಾಯಿತು. ಆದರೆ ಇದೀಗ ತಕ್ಷಣ ಎಚ್ಚೆತ್ತುಕೊಂಡಿದೆ. ಏನಿದರ ವೃತ್ತಾಂತ? ಇಲ್ಲಿದೆ ವಿವರ.

ಹಿರೇಮಗಳೂರು ಕಣ್ಣನ್​​ಗೆ ನೀಡಿರುವ ನೋಟಿಸ್ ಹಿಂಪಡೆಯಲು ಸೂಚಿಸುವೆ: ಸಚಿವ ರಾಮಲಿಂಗಾರೆಡ್ಡಿ
ರಾಮಲಿಂಗಾರೆಡ್ಡಿ & ಹಿರೇಮಗಳೂರು ಕಣ್ಣನ್
ಪ್ರಸನ್ನ ಗಾಂವ್ಕರ್​
| Edited By: |

Updated on: Jan 23, 2024 | 2:20 PM

Share

ಬೆಂಗಳೂರು, ಜನವರಿ 23: ಕನ್ನಡದಲ್ಲೇ ರಾಮನ ಅರ್ಚನೆ ಮಾಡುವ ಚಿಕ್ಕಮಗಳೂರಿನ (Chikkamagalur) ಹಿರೇಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಿರೇಮಗಳೂರು ಕಣ್ಣನ್ (Hiremagaluru Kannan) ಅವರ ವೇತನ ವಾಪಸ್ ಕೇಳುವ ಮೂಲಕ ಆಕ್ರೋಶಕ್ಕೆ ಗುರಿಯಾಗಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇದೀಗ ಎಚ್ಚೆತ್ತುಕೊಂಡಿದೆ. ಹಿರೇಮಗಳೂರು ಕಣ್ಣನ್ ಅವರಿಗೆ ನೀಡಿರುವ ನೋಟಿಸ್‌ ಹಿಂಪಡೆಯಲು ಮುಜರಾಯಿ ಇಲಾಖೆ ಆಯುಕ್ತರಿಗೆ ಸೂಚನೆ ನೀಡುವುದಾಗಿ ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸ್ಥಳೀಯ ತಹಶೀಲ್ದಾರ್‌ ತಪ್ಪು ತೀರ್ಮಾನದಿಂದ ನೋಟಿಸ್ ಜಾರಿಯಾಗಿದೆ. ಅದನ್ನು ಹಿಂಪಡೆಯುತ್ತೇವೆ ಎಂದರು.

ಕನ್ನಡದಲ್ಲೇ ಮಂತ್ರ ಪಠಣ ಮಾಡಿ ಅರ್ಚನೆ ಮಾಡುವ ಮೂಲಕ ರಾಜ್ಯದ ಜನರ ಗಮನ ಸೆಳೆದಿದ್ದ ಹಿರೇಮಗಳೂರು ಕಣ್ಣನ್ ಅವರಿಗೆ ಜಿಲ್ಲಾಡಳಿತ ವೇತನ ವಾಪಸ್ ಕೇಳಿ ನೋಟಿಸ್ ಜಾರಿ ಮಾಡಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಲು ಆರಂಭವಾಗಿತ್ತು. ವಿಷಯ ಗಮನಕ್ಕೆ ಬಂದಕೂಡಲೇ ರಾಮಲಿಂಗಾರೆಡ್ಡಿ ಆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಆದಾಯ ಕಡಿಮೆಯ ಕಾರಣ ನೀಡಿ ವೇತನ ವಾಪಸ್ ಕೇಳಿದ್ದ ಸರ್ಕಾರ

ಹಿರೇಮಗಳೂರು ಕಣ್ಣನ್ ಅವರು ಕಳೆದ 44 ವರ್ಷಗಳಿಂದ ಕಲ್ಯಾಣ ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು 7500 ರೂ. ವೇತನ ನೀಡುತ್ತಿತ್ತು. ಆದರೆ, ಇದೀಗ ದೇವಾಲಯದ ಆದಾಯ ಕಡಿಮೆ‌ ಇದೆ ಎಂಬ ಕಾರಣ ನೀಡಿ ಈ ಹಿಂದೆ ನೀಡಿದ್ದ 7500 ರೂ. ವೇತನದಲ್ಲಿ 4500 ರೂ. ಅನ್ನು ವಾಪಸ್ ನೀಡುವಂತೆ ಸೂಚಿಸಲಾಗಿತ್ತು. 4500 ರೂಪಾಯಿಯಂತೆ 10 ವರ್ಷದ 4,74,000 ರೂ. ಹಣವನ್ನು ವಾಪಸ್ ನೀಡುವಂತೆ ನೋಟಿಸ್​ನಲ್ಲಿ ಉಲ್ಲೇಖಿಸಲಾಗಿತ್ತು. ಜತೆಗೆ, ಡಿಸೆಂಬರ್ ತಿಂಗಳ ವೇತನವನ್ನು ತಡೆ ಹಿಡಿದು 2023ರ ಡಿಸೆಂಬರ್​ 2ರಂದು ತಹಶಿಲ್ದಾರ್ ಸುಮಂತ್ ನೋಟಿಸ್​ ನೀಡಿದ್ದರು.

ಹಿರೇಮಗಳೂರು ಕಣ್ಣನ್ ಬೇಸರ

44 ವರ್ಷಗಳಿಂದ ದೇವಾಲಯದಲ್ಲಿ ಅರ್ಚಕನಾಗಿ ಕೆಲಸ ಮಾಡಿದ್ದೇನೆ. ದೇವಾಲಯಕ್ಕೆ ಆದಾಯ ಇಲ್ಲ ಎಂದು ಸಂಬಳ ತಡೆಹಿಡಿದು, ಅರ್ಚಕರಿಗೆ ನೀಡಿದ ವೇತನ ವಾಪಸ್ ಕೇಳುವುದು ಸರಿಯಲ್ಲ. ದೇವಾಲಯಗಳಲ್ಲಿ ಅರ್ಚಕರ ಕೊರತೆ ಇದೆ. ಬಡ ಅರ್ಚಕರ ವೇತನವನ್ನು ವಾಪಸ್ ಕೇಳುವುದು ಎಷ್ಟು ಸರಿ? ಜಿಲ್ಲಾಡಳಿತದ ಈ ನಡೆ ಅಚ್ಚರಿ ಮೂಡಿಸಿದೆ ಎಂದು ಹಿರೇಮಗಳೂರು ಕಣ್ಣನ್ ಚಿಕ್ಕಮಗಳೂರಿನಲ್ಲಿ ‘ಟಿವಿ9’ಗೆ ಬೇಸರದಿಂದ ಪ್ರತಿಕ್ರಿಯಿಸಿದ್ದರು.

ಇದನ್ನೂ ಓದಿ: ಅರ್ಚಕರ ವೇತನ ವಾಪಸ್​ ಕೇಳಿದ ಸರ್ಕಾರ: ಹಿರೇಮಗಳೂರು ಕಣ್ಣನ್​​ಗೆ ನೋಟಿಸ್

ಮುಜರಾಯಿ ಇಲಾಖೆಯ ಮೂಲಕ ದೇವಾಲಯಗಳನ್ನು ಸಂರಕ್ಷಿಸಬೇಕು. ದೇವಾಲಯಕ್ಕೆ ಆದಾಯ ಇಲ್ಲ ಎಂದು ಅರ್ಚಕರ ಸಂಬಳ ತಡೆಹಿಡಿದು ನೀಡಿದ ಹಣ ವಾಪಸ್ ಕೇಳುವುದು ಸರಿಯಲ್ಲ ಎಂದು ಅವರು ಅಸಮಾಧಾನ ತೋಡಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ