AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ: ಒಂದೇ ಕುಟುಂಬದ ಐವರು ದುರ್ಮರಣ

ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಗುಡೆಮಾರನಹಳ್ಳಿ ಬಳಿ ಅತಿವೇಗವಾಗಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ವ್ಯಕ್ತಿಗಳು ದುರ್ಮರಣ ಹೊಂದಿದ್ದಾರೆ. ಮೃತರು ತುಮಕೂರು ಜಿಲ್ಲೆಯ ಕುಣಿಗಲ್ ಮೂಲದವರೆಂಬ ಮಾಹಿತಿ ಇದೆ. ಕಾರಿನಲ್ಲಿದ್ದ ನಾಯಿ ಮರಿ ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದೆ.

ರಾಮನಗರ: ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ: ಒಂದೇ ಕುಟುಂಬದ ಐವರು ದುರ್ಮರಣ
ರಾಮನಗರ: ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ: ಒಂದೇ ಕುಟುಂಬದ ಐವರು ದುರ್ಮರಣ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Sep 17, 2024 | 6:19 PM

Share

ರಾಮನಗರ, ಸೆಪ್ಟೆಂಬರ್​ 17: ಅತಿವೇಗವಾಗಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ (Accident) ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ವ್ಯಕ್ತಿಗಳು ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಗುಡೆಮಾರನಹಳ್ಳಿ ಬಳಿ ದುರಂತ ಸಂಭವಿಸಿದೆ. ಮೃತರು ತುಮಕೂರು ಜಿಲ್ಲೆಯ ಕುಣಿಗಲ್ ಮೂಲದವರೆಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ.

ನಾಯಿ ಮರಿ ಹೊರತುಪಡಿಸಿ ಉಳಿದವರೆಲ್ಲರೂ ಸಾವು

ಸಂಬಂಧಿಕರ ತಿಥಿ ಕಾರ್ಯ ಮುಗಿಸಿ ದೇವಸ್ಥಾನಕ್ಕೆ ತೆರಳುತ್ತಿದ್ದರು. ಕುಣಿಗಲ್​ನಿಂದ ಬೆಂಗಳೂರು ಕಡೆ ಅತಿವೇಗವಾಗಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಮಾರುತಿ ಸುಜುಕಿ ಎರ್ಟಿಗಾ ಕಾರಿನ ಏರ್​ಬ್ಯಾಗ್ ಓಪನ್ ಆದರೂ ಕಾರಿನಲ್ಲಿದ್ದ ನಾಯಿ ಮರಿ ಹೊರತುಪಡಿಸಿ ಉಳಿದವರೆಲ್ಲರೂ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮೆಟ್ರೋ ಟ್ರ್ಯಾಕ್​ಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ: ಪ್ರಾಣಾಪಾಯದಿಂದ ಪಾರು

ಗಾಯಗೊಂಡಿರುವ ನಾಯಿ ಮರಿಗೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅಪಘಾತ ಸ್ಥಳಕ್ಕೆ ಕುದೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಚಲಿಸುತ್ತಿದ್ದ ಬಸ್​ನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ: ಸಾವು

ಧಾರವಾಡ: ಕೆಎಸ್‌ಆರ್‌ಟಿಸಿ ಬಸ್​ನಲ್ಲಿ ಪ್ರಯಾಣ ಮಾಡುತ್ತಿದ್ದ ಓರ್ವ ಪ್ರಯಾಣಿಕರಿಗೆ ಮಾರ್ಗ ಮಧ್ಯದಲ್ಲಿಯೇ ಹೃದಯಾಘಾತ ಸಂಭವಿರುವಂತಹ ಘಟನೆ ನಡೆದಿದೆ. ತಕ್ಷಣವೇ ಬಸ್​ನ್ನು ಚಾಲಕ ಧಾರವಾಡ ಜಿಲ್ಲಾಸ್ಪತ್ರೆಗೆ ತಂದಿದ್ದಾರೆ. ಆದರೆ ಅಷ್ಟರಲ್ಲಿ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಶೀಲ ಶಂಕಿಸಿ ಹೆಂಡತಿಯ ಕೊಲೆ; ಅಪರಾಧಿಗೆ ಜೀವಾವಧಿ ಶಿಕ್ಷೆ ಪ್ರಕಟ

ದಾಂಡೇಲಿಯಿಂದ ಧಾರವಾಡಕ್ಕೆ ಬಸ್​ ಆಗಮಿಸುತ್ತಿತ್ತು. ಹಳಿಯಾಳದಲ್ಲಿ ಬಸ್ ಏರಿದ್ದ ವ್ಯಕ್ತಿಗೆ ಹಳಿಯಾಳ-ಧಾರವಾಡ ಮಾರ್ಗ ಮಧ್ಯದಲ್ಲಿ ಹೃದಯಾಘಾತ ಸಂಭವಿಸಿದೆ. ವ್ಯಕ್ತಿಯ ಬಳಿ ಯಾವುದೇ ಗುರುತಿನ ಚೀಟಿ ಇರಲಿಲ್ಲಿ ಹೀಗಾಗಿ ಮೃತನ ಹೆಸರು ತಿಳಿದು ಬಂದಿಲ್ಲ. ಜಿಲ್ಲಾಸ್ಪತ್ರೆಗೆ ಪೊಲೀಸರು ಭೇಟಿ ನೀಡಿದ್ದು, ಮೃತರ ಸಂಬಂಧಿಗಳ ಪತ್ತೆ ಕಾರ್ಯ ಮಾಡುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:33 pm, Tue, 17 September 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್