AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಥಯಾತ್ರೆ ವಾಹನದಿಂದ ಬಿದ್ದು ಪೂಜಾ ಕುಣಿತದ ಕಲಾವಿದ ಸಾವು

ಮೃತ್ತಿಕೆ ಸಂಗ್ರಹದ ರಥಯಾತ್ರೆ ವಾಹನದಿಂದ ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಕೆಂಪೇಗೌಡ ಪ್ರತಿಮೆ ಅನಾವರಣ ಹಿನ್ನೆಲೆ ರಾಜ್ಯಾದ್ಯಂತ ನಡೆಸಲಾಗುತ್ತಿರುವ ಮೃತ್ತಿಕೆ ಸಂಗ್ರಹದ ರಥಯಾತ್ರೆ ಇದಾಗಿದೆ.

ರಥಯಾತ್ರೆ ವಾಹನದಿಂದ ಬಿದ್ದು ಪೂಜಾ ಕುಣಿತದ ಕಲಾವಿದ ಸಾವು
ಮೃತ್ತಿಕೆ ಸಂಗ್ರಹದ ರಥಯಾತ್ರೆ ವಾಹನದಿಂದ ಬಿದ್ದು ಪೂಜಾ ಕುಣಿತದ ಕಲಾವಿದ ಸಾವು
TV9 Web
| Edited By: |

Updated on:Nov 03, 2022 | 3:40 PM

Share

ರಾಮನಗರ: ಕೆಂಪೇಗೌಡ ಪ್ರತಿಮೆ ಅನಾವರಣ ಹಿನ್ನೆಲೆ ಆಯೋಜಿಸಿದ ಮೃತ್ತಿಕೆ ಸಂಗ್ರಹದ ರಥಯಾತ್ರೆ ವೇಳೆ ಅವಘಡ ಸಂಭವಿಸಿದೆ. ಮೃತ್ತಿಕೆ ಸಂಗ್ರಹದ ರಥಯಾತ್ರೆ ವಾಹನದಿಂದ ಬಿದ್ದು ಪೂಜಾ ಕುಣಿತದ ಕಲಾವಿದರೊಬ್ಬರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಮರೂರು ಗ್ರಾಮದಲ್ಲಿ ನಡೆದಿದೆ. ಪೂಜಾ ಕುಣಿತದ ಕಲಾವಿದರೂ ಆಗಿರುವ ಮಾಗಡಿ ತಾಲೂಕಿನ ಬ್ಯಾಡರಹಳ್ಳಿ ನಿವಾಸಿ ಶ್ರೀನಿವಾಸ್(21) ಮೃತ ದುರ್ದೈವಿಯಾಗಿದ್ದಾರೆ.

ನ.11ರಂದು ಕೆಐಎಬಿ ಮುಂದೆ ಕೆಂಪೇಗೌಡರ ಪ್ರತಿಮೆ ಅನಾವರಣ ಹಿನ್ನೆಲೆ ರಾಜ್ಯಾದ್ಯಂತ ರಥಗಳ ಮೂಲಕ ಮೃತ್ತಿಕೆ ಸಂಗ್ರಹ ಅಭಿಯಾನ ಮಾಡಲಾಗುತ್ತಿದೆ. ಅದರಂತೆ ಮಾಗಡಿ ತಾಲ್ಲೂಕಿನ ಗ್ರಾಮದಲ್ಲಿ ಮೃತ್ತಿಕೆ ಸಂಗ್ರಹ ಮಾಡುತ್ತಿದ್ದಾಗ ರಥದಿಂದ ಬಿದ್ದು‌ ಶ್ರೀನಿವಾಸ್ ಸಾವನ್ನಪ್ಪಿದ್ದಾರೆ.

ನ.11ರಂದು ಕೆಂಪೇಗೌಡ ವಿಮಾನ ನಿಲ್ದಾಣದ ಮುಂದೆ ಕೆಂಪೇಗೌಡರ ಪ್ರತಿಮೆ ಅನಾವರಣ ಹಿನ್ನೆಲೆ ರಾಜ್ಯಾದ್ಯಂತ ಮೃತ್ತಿಕೆ ಸಂಗ್ರಹ ಅಭಿಯಾನದ ರಥಗಳಿಗೆ ಅಕ್ಟೋಬರ್​ 21ರಂದು ವಿಧಾನಸೌಧದ ಮುಂಭಾಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದ್ದರು. ಅಭಿಯಾನ ಯಶಸ್ವಿ ಆಗುವಂತೆ ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಅಭಿಯಾನದ ಯಶಸ್ಸಿಗೆ ಎಲ್ಲರೂ ಸೂಕ್ತ ವ್ಯವಸ್ಥೆ ಮಾಡಬೇಕೆಂದು ಸೂಚನೆ ನೀಡಿದ್ದರು.

108 ಅಡಿ ಎತ್ತರದ ಪ್ರತಿಮೆ

ಕೆಂಪೇಗೌಡರು ಕಟ್ಟಿದ ಬೆಂಗಳೂರಿನಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದ್ದು, ನವೆಂಬರ್ 11ರಂದು ಉದ್ಘಾಟನೆಗೊಳ್ಳಲಿದೆ. ಈ ಪ್ರತಿಮೆ ನಿರ್ಮಾಣದ ಮೂಲಕ ಬೆಂಗಳೂರು ಇಂದು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಅವರಿಗಿದ್ದ ದೂರದೃಷ್ಟಿಯನ್ನು ಗೌರವಿಸಿ, 108 ಅಡಿ ಎತ್ತರದ ಪ್ರತಿಮೆಗೆ ‘ಪ್ರಗತಿ ಪ್ರತಿಮೆ’ ಎಂದು ನಾಮಕರಣ ಮಾಡಲಾಗಿದೆ. ಜಗತ್ತಿನ ಯಾವ ನಗರದ ವಿಮಾನ ನಿಲ್ದಾಣದಲ್ಲೂ ಅಲ್ಲಿಯ ಸಂಸ್ಥಾಪಕರ ಪ್ರತಿಮೆ ಇಲ್ಲ. ಇನ್ನುಮುಂದೆ, ಬೆಂಗಳೂರು ವಿಮಾನ ನಿಲ್ದಾಣ ಸಮುಚ್ಚಯದಲ್ಲಿ ಕೆಂಪೇಗೌಡರ ಪ್ರತಿಮೆ ಆಕರ್ಷಣೆಯ ಕೇಂದ್ರವಾಗಲಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:40 pm, Thu, 3 November 22

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ