AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನಕಪುರದಲ್ಲಿ ರಕ್ತದೋಕುಳಿ: ಮಹಿಳೆಯರು ಸೇರಿದಂತೆ‌ 7 ಜನರ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮಾಳಗಾಳು ಗ್ರಾಮದ ಎನ್.ಕೆ.ಕಾಲೋನಿಯಲ್ಲಿ ಮಹಿಳೆ ಸೇರಿದಂತೆ 7 ಜನರ ಮೇಲೆ ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ಮಾಡಿರುವಂತಹ ಘಟನೆ ನಡೆದಿದೆ. ಸಿಕ್ಕ ಸಿಕ್ಕವರ ಮೇಲೆ ಗಡಿಪಾರಾದ ರೌಡಿಶೀಟರ್ ಹರ್ಷ ಮತ್ತು ಗ್ಯಾಂಗ್​ನಿಂದ ಹಲ್ಲೆ ಆರೋಪ ಮಾಡಲಾಗಿದೆ. ಸದ್ಯ ಸ್ಥಳದಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಕನಕಪುರದಲ್ಲಿ ರಕ್ತದೋಕುಳಿ: ಮಹಿಳೆಯರು ಸೇರಿದಂತೆ‌ 7 ಜನರ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ
ಕನಕಪುರದಲ್ಲಿ ರಕ್ತದೋಕುಳಿ: ಮಹಿಳೆಯರು ಸೇರಿದಂತೆ‌ 7 ಜನರ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ | Edited By: |

Updated on:Jul 22, 2024 | 11:10 PM

Share

ರಾಮನಗರ, ಜುಲೈ 22: ಮಾರಕಾಸ್ತ್ರಗಳಿಂದ ಮಹಿಳೆಯರು ಸೇರಿದಂತೆ‌ 7 ಜನರ ಮೇಲೆ ಹಲ್ಲೆ (attacked) ನಡೆದಿರುವಂತಹ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಮಾಳಗಾಳು ಗ್ರಾಮದ ಎನ್.ಕೆ.ಕಾಲೋನಿಯಲ್ಲಿ ನಡೆದಿದೆ. ಗಡಿಪಾರು ರೌಡಿಶೀಟರ್ (rowdy sheeter) ಹರ್ಷ ಆ್ಯಂಡ್​ ಗ್ಯಾಂಗ್​ನಿಂದ ಕೃತ್ಯ ಆರೋಪ ಮಾಡಲಾಗಿದೆ. ದಾರಿಗೆ ಅಡ್ಡವಾಗಿ ನಿಂತಿದ್ದಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದಿದೆ. ಘಟನೆ ಸಂಬಂಧ ಕೆಲವರನ್ನ ವಶಕ್ಕೆ ಪಡೆಯಲಾಗಿದ್ದು, ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಗಲಾಟೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷನ ಕೈ ಕಟ್ ಆಗಿದೆ. ಘಟನಾ ಸ್ಥಳಕ್ಕೆ ರಾಮನಗರ ಎಸ್​ಪಿ ಕಾರ್ತಿಕ್ ರೆಡ್ಡಿ ಭೇಟಿ ಪರಿಶೀಲನೆ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಡಿಸಿಗೆ ಮನವಿ ಮಾಡಲಾಗಿದೆ. ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ನಡೆದ ಕಾರಣ ಇಡಿ ಬಡಾವಣೆಯಲ್ಲಿ ಆತಂಕ ಶುರುವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿಬಿದ್ದು ಓರ್ವನಿಗೆ ಗಾಯ

ಶಿವಮೊಗ್ಗ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿಬಿದ್ದು ಓರ್ವನಿಗೆ ಗಾಯವಾಗಿರುವಂತಹ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಅಂಬಾರಗೋಡ್ಲು ಗ್ರಾಮ ಬಳಿ ನಡೆದಿದೆ. ಕಾರಿನ ಮೇಲೆ ಮರ ಉರುಳಿಬಿದ್ದ ಬಳಿಕ ಕಂಬವೂ ನೆಲಕ್ಕುರುಳಿದೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಧರ್ಮಾಧಿಕಾರಿಯ ಹೊಟ್ಟೆ ಬಗೆದ ದುಷ್ಕರ್ಮಿಗಳು: ಕೊಲೆಗೆ ಕಾರಣವಾಯ್ತಾ ಮಾಟ, ಮಂತ್ರ?

ವಿದ್ಯುತ್ ಕಂಬ ನೇರವಾಗಿ ಬಿದ್ದಿದ್ದರೆ ದೊಡ್ಡ ಅನಾಹುತ ಸಂಭವಿಸುತ್ತಿತ್ತು. ಸಿಗಂಧೂರು ಚೌಡೇಶ್ವರಿದೇವಿ ದರ್ಶನ ಪಡೆದು ಕುಟುಂಬ ಹಿಂದಿರುಗುತ್ತಿತ್ತು. ಕಾರು ಚಾಲಕನಿಗೆ ಗಂಭೀರ ಗಾಯವಾಗಿದ್ದು, ಇನ್ನುಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ಸ್ಥಳೀಯರು ತೆರವುಗೊಳಿಸಿದ್ದಾರೆ.

ಜಾಗದ ವಿಚಾರಕ್ಕೆ ಗಲಾಟೆ: ಮಹಿಳೆಯರ ಮೇಲೆ ಹಲ್ಲೆ ಆರೋಪ

ಮೈಸೂರು: ಸಾಲಿಗ್ರಾಮ ತಾಲೂಕಿನ ಬಾಚಳ್ಳಿ ಗ್ರಾಮದಲ್ಲಿ ಜಾಗದ ವಿಚಾರಕ್ಕೆ ದೇವಿರಮ್ಮ ಮತ್ತು ನಾಗೇಶ್​​ ಕುಟುಂಬಗಳ ಮಧ್ಯೆ ಗಲಾಟೆ ಉಂಟಾಗಿದ್ದು, ಮಹಿಳೆಯರ ಮೇಲೆ ಹಲ್ಲೆ ಆರೋಪ ಮಾಡಲಾಗಿದೆ. ನಾಗೇಶ್, ಚಂದ್ರಹಾಸ, ಪ್ರಕಾಶ್, ರೂಪಾ, ಚೇತನ್ ವಿರುದ್ಧ ಹಲ್ಲೆ ಆರೋಪ ಕೇಳಿಬಂದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:57 pm, Mon, 22 July 24

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ