AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ವರ್ಷಗಳು ಕಳೆಯುತ್ತ ಬಂದರೂ ಪೂರ್ಣಗೊಳ್ಳದ ರಾಮನಗರ ಹೈಟಕ್ ಜಿಲ್ಲಾಸ್ಪತ್ರೆ ಕಾಮಗಾರಿ; ಚಿಕಿತ್ಸೆಗಾಗಿ ರೋಗಿಗಳ ಪರದಾಟ

ರಾಮನಗರ ಜಿಲ್ಲೆ ಸಿಲಿಕಾನ್ ಸಿಟಿ ಬೆಂಗಳೂರಿನ ಪಕ್ಕದಲ್ಲಿ ಇದ್ದರೂ ಸುಸಜ್ಜಿತವಾದ ಜಿಲ್ಲಾಸ್ಪತ್ರೆ ಇಲ್ಲ. ಹೀಗಾಗಿ ಸರ್ಕಾರ ನೂರಾರು ಕೋಟಿ ರೂ ವೆಚ್ಚದಲ್ಲಿ ಹೈಟಕ್ ಜಿಲ್ಲಾಸ್ಪತ್ರೆ ನಿರ್ಮಾಣಕ್ಕೆ ಮುಂದಾಗಿದೆ. ಆದರೆ ಕಾಮಗಾರಿ ಆರಂಭಗೊಂಡು ಮೂರು ವರ್ಷಗಳು ಕಳೆಯುತ್ತ ಬಂದರೂ ಇದುವರೆಗೂ ಕಾಮಗಾರಿ ಮಾತ್ರ ಪೂರ್ಣಗೊಂಡಿಲ್ಲ.

ಮೂರು ವರ್ಷಗಳು ಕಳೆಯುತ್ತ ಬಂದರೂ ಪೂರ್ಣಗೊಳ್ಳದ ರಾಮನಗರ ಹೈಟಕ್ ಜಿಲ್ಲಾಸ್ಪತ್ರೆ ಕಾಮಗಾರಿ; ಚಿಕಿತ್ಸೆಗಾಗಿ ರೋಗಿಗಳ ಪರದಾಟ
ಪೂರ್ಣಗೊಳ್ಳದ ರಾಮನಗರ ಹೈಟಕ್ ಜಿಲ್ಲಾಸ್ಪತ್ರೆ ಕಾಮಗಾರಿ
TV9 Web
| Edited By: |

Updated on: Nov 10, 2022 | 11:25 AM

Share

ರಾಮನಗರ: ಸಿಲಿಕಾನ್ ಸಿಟಿ ಬೆಂಗಳೂರಿನ ಪಕ್ಕದಲ್ಲೇ ಇರುವ ರೇಷ್ಮೆನಗರಿ ರಾಮನಗರದ ಜಿಲ್ಲಾಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ಸಿಗದೇ ರೋಗಿಗಳು ಪರದಾಡುತ್ತಿದ್ದಾರೆ. ಮತ್ತೊಂದೆಡೆ ಸುಮಾರು ನೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಹೈಟಕ್ ಜಿಲ್ಲಾಸ್ಪತ್ರೆ ಇದುವರೆಗೂ ಉದ್ಘಾಟನಾ ಭಾಗ್ಯ ಕಂಡಿಲ್ಲ. ತಾಲೂಕು ಆಸ್ಪತ್ರೆಯನ್ನೇ ಜಿಲ್ಲಾ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿತ್ತು. ಆದರೆ ಜಿಲ್ಲಾಸ್ಪತ್ರೆಯಲ್ಲಿ ಸಿಗಬೇಕಾದ ಯಾವುದೇ ಚಿಕಿತ್ಸೆಗಳು ರೋಗಿಗಳಿಗೆ ಸಿಗುತ್ತಿಲ್ಲ. ಸಣ್ಣ ಪುಟ್ಟ ಚಿಕಿತ್ಸೆಗಳು ಬಿಟ್ಟರೆ ಬೇರೆ ಯಾವುದೇ ಚಿಕಿತ್ಸೆಗಳು ರೋಗಿಗಳಿಗೆ ಸಿಗುತ್ತಿಲ್ಲ. ಆಸ್ಪತ್ರೆಯಲ್ಲಿ ನುರಿತ ವೈದ್ಯರ ಕೊರತೆಯೂ ಇದೆ. ತುರ್ತು ಚಿಕಿತ್ಸೆ ಎಂದು ಹೋದರೆ ಜಿಲ್ಲಾಸ್ಪತ್ರೆ ವೈದ್ಯರು ಪ್ರತಿಯೊಂದಕ್ಕೂ ಬೆಂಗಳೂರು, ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ. ಹೀಗಾಗಿ ಸಾರ್ವಜನಿಕರು ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದಾರೆ. ಸರ್ಕಾರ ನೂತನವಾದ ಜಿಲ್ಲಾಸ್ಪತ್ರೆಯ ಕಾಮಗಾರಿ ಆರಂಭಿಸಿ ಸುಮಾರು ಮೂರು ವರ್ಷ ಆಗುತ್ತಾ ಬಂದರೂ ಕಾಮಗಾರಿ ಮಾತ್ರ ಪೂರ್ಣಗೊಂಡಿಲ್ಲ. ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಶ್ವತ್ಥ ನಾರಾಯಣ್, ನವೆಂಬರ್ ಕೊನೆಯ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ನಂತರ ಉದ್ಘಾಟನೆ ಮಾಡಲಾಗುವುದು ಎಂದು ಹೇಳುತ್ತಿದ್ದಾರೆ.

ರಾಮನಗರ ಜಿಲ್ಲೆಯ ರೋಗಿಗಳ ಸಮಸ್ಯೆಗಳನ್ನ ಮನಗಂಡು ನೂತನ ಹೈಟಕ್ ಜಿಲ್ಲಾಸ್ಪತ್ರೆಗೆ ಸರ್ಕಾರ ಅಸ್ತು ಎಂದ ನಂತರ ಸುಮಾರು 100 ಕೋಟಿ ರೂ ವೆಚ್ಚದಲ್ಲಿ ಹೊಸ ಹೈಟಕ್ ಜಿಲ್ಲಾಸ್ಪತ್ರೆಯನ್ನ ನಿರ್ಮಾಣ ಮಾಡಲಾಗುತ್ತಿದೆ. ಆದರೆ ಇದುವರೆಗೂ ಉದ್ಘಾಟನಾ ಭಾಗ್ಯ ಕಂಡಿಲ್ಲ. ಮೂರನೇ ಮಹಡಿಯ ನಿರ್ಮಾಣ ಕಾರ್ಯ ಕೂಡ ಮುಗಿದಿಲ್ಲ. ಜಿಲ್ಲಾಸ್ಪತ್ರೆ ಕಾಮಗಾರಿ ವೀಕ್ಷಣೆಯನ್ನ ಮಾಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಶ್ವತ್ಥ್ ನಾರಾಯಣ್, ಸೆಪ್ಟೆಂಬರ್ ತಿಂಗಳ ಅಂತ್ಯಕ್ಕೆ ಉದ್ಘಾಟನೆ ಮಾಡುತ್ತೇವೆ ಎಂದು ಬಡಾಯಿ ಕೂಡ ಕೊಚ್ಚಿಕೊಂಡಿದ್ದರು. ಆದರೆ ಆ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ.

ಮಂದಗತಿಯಲ್ಲಿ ಸಾಗುತ್ತಿರುವ ಕಾಮಗಾರಿಗೆ ವೇಗ ನೀಡಬೇಕಾಗಿದೆ. ಕೂಡಲೇ ಕಾಮಗಾರಿ ಮುಗಿಸಿ ಆಸ್ಪತ್ರೆ ಉದ್ಗಾಟನೆ ಮಾಡಿ ರೋಗಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ರಾಮನಗರ ನಿವಾಸಿಗಳು ಆಗ್ರಹಿಸುತ್ತಿದ್ದಾರೆ. ಒಟ್ಟಾರೆ ನೂರಾರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಹೈಟಕ್ ಜಿಲ್ಲಾಸ್ಪತ್ರೆ ಕಾಮಗಾರಿಗೆ ಗ್ರಹಣ ಹಿಡಿದಿದ್ದು, ಉದ್ಗಾಟನಾ ಭಾಗ್ಯ ಕಾಣುತ್ತಿಲ್ಲ. ಇನ್ನಾದ್ರು ಕಾಮಗಾರಿ ಪೂರ್ಣಗೊಂಡು ರೋಗಿಗಳಿಗೆ ಅನುಕೂಲವಾಗುತ್ತಾ ಕಾದು ನೋಡಬೇಕಿದೆ.

ವರದಿ: ಪ್ರಶಾಂತ್ ಹುಲಿಕೆರೆ, ಟಿವಿ9 ರಾಮನಗರ

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್