AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಅಲೆಯನ್ನ ಡಿಕೆ ಬ್ರದರ್ಸ್​ 2 ತಾಸಿನಲ್ಲಿ ಬದಲಿಸ್ತಾರೆ, ಅದಕ್ಕೆ ನಾನು ಆ 2 ದಿನ ಮಲಗುವುದಿಲ್ಲ: ನಿಖಿಲ್

ಬೆಂಗಳೂರು ಗ್ರಾಮಾಂತರ ಲೋಕಸಭೆ ಚುನಾವಣೆ ವಿಚಾರವಾಗಿ ರಾಮನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜೆಡಿಎಸ್​ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ, ಬಿಜೆಪಿ ಅಲೆ ಡಿಕೆ ಬ್ರದರ್ಸ್​ 2 ತಾಸಿನಲ್ಲಿ ಬದಲಿಸುತ್ತಾರೆ. ಅದಕ್ಕೆ ಈ ಬಾರಿ ನಾನು ಆ ಎರಡು ದಿನ ಮಲಗುವುದಿಲ್ಲ ಎಂದು ಹೇಳಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್​ ಮೈತ್ರಿಗಳು ಸಾಕಷ್ಟು ಬಲಿಷ್ಠವಾಗಿದೆ. ಎರಡು ಪಕ್ಷಗಳ ಕಾರ್ಯಕರ್ತರು ಪರಸ್ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ.

ಬಿಜೆಪಿ ಅಲೆಯನ್ನ ಡಿಕೆ ಬ್ರದರ್ಸ್​ 2 ತಾಸಿನಲ್ಲಿ ಬದಲಿಸ್ತಾರೆ, ಅದಕ್ಕೆ ನಾನು ಆ 2 ದಿನ ಮಲಗುವುದಿಲ್ಲ: ನಿಖಿಲ್
ನಿಖಿಲ್ ಕುಮಾರಸ್ವಾಮಿ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Apr 18, 2024 | 12:53 PM

Share

ರಾಮನಗರ, ಏಪ್ರಿಲ್ 18: ಕಳೆದ ಬಾರಿ ಗಿಫ್ಟ್ ಹಂಚಿರೋದು ನಮಗೆ ಗೊತ್ತಿದೆ. ಈ ಬಾರಿ ಆ ಇತಿಹಾಸ ಮರುಕಳಿಸಲ್ಲ. ಬಿಜೆಪಿ ಅಲೆ ಡಿಕೆ ಬ್ರದರ್ಸ್​ 2 ತಾಸಿನಲ್ಲಿ ಬದಲಿಸುತ್ತಾರೆ. ಅದಕ್ಕೆ ಈ ಬಾರಿ ನಾನು ಆ ಎರಡು ದಿನ ಮಲಗುವುದಿಲ್ಲ ಎಂದು JDS ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಚುನಾವಣೆ ವಿಚಾರವಾಗಿ ರಾಮನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾತ್ರಿ 2‌ರಿಂದ ಬೆಳಗ್ಗೆ 4ರವರೆಗೆ ನಾನು‌ ನಿದ್ದೆ ಮಾಡಲ್ಲ. ಕಳೆದ ಬಾರಿ ಗಿಫ್ಟ್ ಹಂಚಿಕೆ ತರಹ ಮತ್ತೆ ಆಗೋದಕ್ಕೆ ನಾವ್ಯಾರು ಬಿಡಲ್ಲ.​ ಈ ಬಾರಿ ಅವರ ಸೋಲು ಖಚಿತ ಎಂದಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಒಂದಷ್ಟು ಜನ ಹೋಗುವುದು, ಮತ್ತೊಂದಷ್ಟು ಜನ ಬರುತ್ತಾರೆ. ಅದಕ್ಕೆ ಪ್ರಾಮುಖ್ಯತೆ ಕೊಡುವುದ ಬೇಡ. ಬಿಜೆಪಿ ಮತ್ತು ಜೆಡಿಎಸ್​ ಮೈತ್ರಿಗಳು ಸಾಕಷ್ಟು ಬಲಿಷ್ಠವಾಗಿದೆ. ಎರಡು ಪಕ್ಷಗಳ ಕಾರ್ಯಕರ್ತರು ಪರಸ್ಪರವಾಗಿ ಕೆಲಸ ಮಾಡುತ್ತಿದ್ದಾರೆ. ಎಲ್ಲದಕ್ಕಿಂತ ಮುಖ್ಯವಾಗಿ ಮತದಾರರು ತಿರ್ಮಾನ ಮಾಡಿದ್ದಾರೆ ಖಂಡಿತವಾಗಿಯೂ ಡಾ. ಸಿಎನ್​ ಮಂಜುನಾಥ್​ ಅವರಿಗೆ ಗೆಲುವು ಸಾಧಿಸುತ್ತಾರೆ  ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಂಜುನಾಥ್​ರನ್ನು ಜಯದೇವ ಡೈರೆಕ್ಟರ್ ಹುದ್ದೆಯಿಂದ ತೆಗೆಸಲು ಎಸ್​ಎಂ ಕೃಷ್ಣಗೆ ಚೀಟಿ‌ ಕೊಟ್ಟಿದ್ರು: ಡಿಕೆಶಿ ವಿರುದ್ಧ ಗಂಭೀರ ಆರೋಪ

ರಾಜ್ಯದಲ್ಲೇ‌ ಹೈವೋಲ್ಟೇಜ್ ಪಡೆದಿರುವ ಬೆಂಗಳೂರು ಗ್ರಾಮಾಂತರ ಲೋಕಸಭೆ ಚುನಾವಣೆಗೆ ನಾಮಪತ್ತ ಸಲ್ಲಿಸುವ ಕೊನೆ ದಿನ ಆಗಿತ್ತು.‌ ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ‌ಡಾ.ಸಿ ಎನ್ ಮಂಜುನಾಥ್ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಸ್ಪರ್ಧೆಗೆ ಒಟ್ಟು 31 ನಾಮಿನೇಷನ್ ಸಲ್ಲಿಕೆ ಆಗಿದ್ದು ಇವತ್ತು ಎಲ್ಲಾ ನಾಮಿನೇಷನ್ ಗಳ ಪರಿಶೀಲನೆ ಆಗಲಿದೆ. ಅದ್ರಲ್ಲಿ ವಿಶೇಷ ಅಂದ್ರೆ ಐದು ಜನ ಅಭ್ಯರ್ಥಿ ಗಳು ಮಂಜುನಾಥ್ ಹೆಸರಲ್ಲಿದ್ದು, ಮೂವರು ಅಭ್ಯರ್ಥಿಗಳು ಸುರೇಶ್ ಹೆಸರಲ್ಲಿದ್ದಾರೆ.

ಇದನ್ನೂ ಓದಿ: ಹತಾಶೆಯಿಂದ ಹೀಗೆ ಮಾಡುತ್ತಿದ್ದಾರೆ: ಪ್ರಚಾರಕ್ಕೆ ತೆರಳಿದವರ ಮೇಲಿನ ಹಲ್ಲೆ ಖಂಡಿಸಿದ ಡಾ. ಸಿಎನ್ ಮಂಜುನಾಥ್

ನಾಮಪತ್ರ ಸಲ್ಲಿಕೆ ಮೊದಲ ದಿನ‌ 28 ನೇ ತಾರೀಕು ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. ಅದೇ ಹೆಸರಿನಲ್ಲಿ ಕರುನಾಡು ಪಾರ್ಟಿಯಿಂದ ಆನೇಕಲ್ ತಾಲ್ಲೂಕಿನ ಮುತ್ತಾನಲ್ಲೂರಿನ ಸುರೇಶ್ ಎಸ್. ಹಾಗೂ ಕನಕಪುರ ತಾಲ್ಲೂಕಿನ ಮರಳೆ ಗ್ರಾಮದ ಸುರೇಶ್ ಎಂ.ಎನ್ ಎಂಬುವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:51 pm, Thu, 18 April 24

ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು