AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಬರಿಮಲೆಯಿಂದ ಹಿಂದಿರುಗುತ್ತಿದ್ದ ಕರ್ನಾಟಕ ಭಕ್ತರ ವಾಹನಕ್ಕೆ ಲಾರಿ ಡಿಕ್ಕಿ, 23 ಜನರಿಗೆ ಗಾಯ, ಇಬ್ಬರ ಸ್ಥತಿ ಗಂಭೀರ

ಇಟ್ಟಿಗೆ ತುಂಬಿಕೊಂಡು ಬರುತ್ತಿದ್ದ ಲಾರಿಗೆ ಶಬರಿಮಲೆಗೆ ತೆರಳಿದ್ದ ರಾಜ್ಯದ ಭಕ್ತರ ಬಸ್​​ ಡಿಕ್ಕಿ ಹೊಡೆದ ಪರಿಣಾಮ 23 ಭಕ್ತರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

ಶಬರಿಮಲೆಯಿಂದ ಹಿಂದಿರುಗುತ್ತಿದ್ದ ಕರ್ನಾಟಕ ಭಕ್ತರ ವಾಹನಕ್ಕೆ ಲಾರಿ ಡಿಕ್ಕಿ, 23 ಜನರಿಗೆ ಗಾಯ, ಇಬ್ಬರ ಸ್ಥತಿ ಗಂಭೀರ
ಶಬರಿಮಲೆಗೆ ತೆರಳಿದ್ದ ರಾಜ್ಯದ ಭಕ್ತರ ವಾಹನಕ್ಕೆ ಲಾರಿ ಡಿಕ್ಕಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Nov 25, 2022 | 4:09 PM

ರಾಮನಗರ: ಶಬರಿಮಲೆಗೆ ತೆರಳಿದ್ದ ರಾಜ್ಯದ ಭಕ್ತರ ಬಸ್​ಗೆ ಲಾರಿ​​ ಡಿಕ್ಕಿ ಹೊಡೆದ ಪರಿಣಾಮ 23 ಭಕ್ತರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಕೇರಳದ ಕಣ್ಣೂರಿನ ಪೊನ್ನೂರು ಬಳಿ ಅಪಘಾತ ನಡೆದಿದೆ. ಶಬರಿಮಲೆಯಿಂದ ರಾಮನಗರ ತಾಲೂಕಿನ ಪೇಟೆಕುರುಬರಹಳ್ಳಿಯ ಭಕ್ತರು ಹಿಂದಿರುಗುತ್ತಿದ್ದರು. ಈ ವೇಳೆ ಇಟ್ಟಿಗೆ ತುಂಬಿಕೊಂಡು ಬರುತ್ತಿದ್ದ ಲಾರಿಗೆ ಮಿನಿ ಬಸ್​ ಡಿಕ್ಕಿ ಹೊಡೆದಿದೆ. ಗಾಯಾಳು ಭಕ್ತರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮಿನಿ ಬಸ್​ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ನವೆಂಬರ್ 20 ರ ರಾತ್ರಿ ಶಬರಿಮಲೆ ದರ್ಶನಕ್ಕೆಂದು ಮಾಲೆ ಧರಿಸಿ ತೆರಳಿದ್ದರು. ಶಬರಿಮಲೆ ದರ್ಶನ ಮುಗಿಸಿಕೊಂಡು ಧರ್ಮಸ್ಥಳಕ್ಕೆ ಬರುವಾಗ ಅವಘಡ ಸಂಭವಿಸಿದ್ದು, ಅವಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮರವೇರಿ ಆತ್ಮಹತ್ಯೆಗೆ ಮುಂದಾದ ರೈತ 

ಬೆಂಗಳೂರು: ನೀಲಗಿರಿಯ ಬೃಹತ್ ಮರದಿಂದ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮೈಸೂರಿನ ರೈತ ಎಚ್ಚರಿಕೆ ನೀಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮಹಾರಾಣಿ ಕಾಲೇಜಿನ ಆವರಣದಲ್ಲಿರುವ ಮರವನ್ನು ರೈತ ರೇವಣ್ಣ ಎರಿದ್ದಾರೆ. ರೈತ ಸಂಘಟನೆ ಒಕ್ಕೂಟದಿಂದ ಕಬ್ಬಿನ ಎಫ್ಆರ್ಫಿ ದರವನ್ನು ಹೆಚ್ಚಿಸುವಂತೆ ಫ್ರೀಡಂ ಪಾರ್ಕ್​ನಲ್ಲಿ ರೈತರ ಪ್ರತಿಭಟನೆ ನಡೆಯುತ್ತಿದೆ. ಮರದ ಮೇಲೆ ಕುಳಿತು ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ನಾನು ಕೆಳಗೆ ಬೀಳುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮಹಾನ್ ವಂಚಕ ಪತಿ-ಪತ್ನಿ ಪೊಲೀಸರಿಗೆ ಲಾಕ್

ಏರ್ಪೋರ್ಟ್​ನಲ್ಲಿ ಸೀಜ್ ಆದ ಚಿನ್ನಾಭರಣ ಕಡಿಮೆ ಬೆಲೆಗೆ ಕೊಡಿಸುವುದಾಗಿ ಲಕ್ಷ ಲಕ್ಷ ವಂಚನೆ ಮಾಡಿದ್ದ ದಾರ್ಬಿನ್ ದಾಸ್ ಅಲಿಯಾಸ್ ಮೋಹನ್ ದಾಸ್ ಹಾಗೂ ಧನುಷ್ಯ ಅಲಿಯಾಸ್ ರಾಚೆಲ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ದಾರ್ಬಿನ್ ದಾಸ್ ಕಸ್ಟಮ್ಸ್ ಅಧಿಕಾರಿ ಎಂದು ಹೇಳಿಕೊಂಡು ವಂಚನೆ ಮಾಡುತ್ತಿದ್ದ.

ಏರ್ಪೊರ್ಟ್ ನಲ್ಲಿ ಸೀಜ್ ಆದ ಚಿನ್ನಾಭರಣ ಕಡಿಮೆ ಬೆಲೆಗೆ ಕೊಡಿಸೊದಾಗಿ ಇಂದಿರಾನಗರ ನಿವಾಸಿಯೊಬ್ಬರಿಂದ 68 ಲಕ್ಷ ಹಣ ಪಡೆದು ವಂಚನೆ ಮಾಡಿದ್ದ. ಕೆಲವರಿಗೆ ಏರ್ಪೊರ್ಟ್ ನಲ್ಲಿ ಕೆಲಸ ಕೊಡಿಸೊದಾಗಿ ಸಾವಿರಾರು ರೂ. ಹಣ ಪಡೆದಿದ್ದ. ದೇವನಹಳ್ಳಿಯ ಶಿಕ್ಷಕಿಯಿಂದ 97,750 ರೂ ಹಣ ಪಡೆದು ವಂಚನೆ ಮಾಡಿದ್ದ. ಮತ್ತೊಂದಿಷ್ಟು ಜನರಿಗೆ ಗ್ಯಾಜೆಟ್, ಎಲೆಕ್ಟ್ರಿಕ್ ಉಪಕರಣಗಳನ್ನು ಕಡಿಮೆ ಬೆಲೆಗೆ ಕೊಡಿಸೊದಾಗಿ ಹಣ ಪಡೆದಿದ್ದ. ಹೀಗೆ ಸಾಲು ಸಾಲು ವಂಚನೆ ಮಾಡಿ ಊರು ಬಿಟ್ಟಿದ್ದ ವಂಚಕ ದಂಪತಿಯನ್ನು ಪೊಲೀಸರು ಉಡುಪಿಯಲ್ಲಿ ಬಂಧಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:52 pm, Fri, 25 November 22

ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಬಿಜೆಪಿ ಪ್ರಚಾರಕ್ಕಾಗಿ ಎಮರ್ಜೆನ್ಸಿ ವಿಚಾರ ಬಳಸಿಕೊಳ್ಳುತ್ತಿದೆ: ಶಿವಕುಮಾರ್
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ಕೇವಲ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಲ್ಲಿ ಮಳೆಯಾಗುತ್ತಿದೆ: ಜಾರಕಿಹೊಳಿ
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ದೈವ ನುಡಿದಂತೆ ಮನೆಗೆ ಬಂದ ಅಣ್ಣ: ತಮ್ಮ ಹೇಳಿದ್ದಿಷ್ಟು
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ
ಚಿಕ್ಕಮಗಳೂರು: ಹಾಲಿನ ಟ್ಯಾಂಕರ್ ಪಲ್ಟಿ, ಹರಿಯಿತು ಹಾಲಿನ ಹೊಳೆ