ರಾಮನಗರ: ಮೇಕೆ ಮೇಲೆ ಅತ್ಯಾಚಾರ, ರೋಹಿದ್ ಎನ್ನುವ ಕಾಮುಕನ ವಿರುದ್ಧ ಪ್ರಕರಣ ದಾಖಲು

ನಿತ್ಯ ಬೆಳಗಾದರೆ ಒಂದಲ್ಲ ಒಂದು ಕಡೆಯಿಂದ ಅತ್ಯಾಚಾರದ ಸುದ್ದಿ ವರದಿಯಾಗುತ್ತಿರುತ್ತವೆ. ಚಿಕ್ಕ ಮಗುವಿನಿಂದ ಹಿಡಿದು ವೃದ್ಧೆಯರವರೆಗೆ, ಶವಗಳನ್ನು ಸಾಲದಕ್ಕೆ ಕೊನೆಗೆ ಮೂಕ ಪ್ರಾಣಿಗಳನ್ನು ಕಾಮುಕರು ಬಿಡುತ್ತಿಲ್ಲ. ಮೂಕ ಪ್ರಾಣಿಗಳ ಮೇಲೆ ಅತ್ಯಾಚಾರ ಮಾಡಿದ ಘಟನೆಗಳಲ್ಲಿ ಮನುಷ್ಯನ ವಿಕೃತ ಮನಸ್ಥಿತಿ ಸ್ಪಷ್ಟವಾಗಿ ಕಾಣಬಹುದು. ಈಗ ಇಂಥದ್ದೇ ಘಟನೆಯೊಂದು ನಮ್ಮ ಕರ್ನಾಟಕದ ರಾಮನಗರ ಜಿಲ್ಲೆಯಲ್ಲಿ ನಡೆದಿದೆ,

ರಾಮನಗರ: ಮೇಕೆ ಮೇಲೆ ಅತ್ಯಾಚಾರ, ರೋಹಿದ್ ಎನ್ನುವ ಕಾಮುಕನ ವಿರುದ್ಧ ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರ
Follow us
| Edited By: ರಮೇಶ್ ಬಿ. ಜವಳಗೇರಾ

Updated on: Sep 03, 2023 | 5:22 PM

ರಾಮನಗರ, (ಸೆಪ್ಟೆಂಬರ್ 03): ಅತ್ಯಾಚಾರ(Rape) ಎನ್ನುವುದು ಹೆಣ್ಣಿನ ಮೇಲಷ್ಟೇ ಅಲ್ಲ. ಈಗ ಕಾಮುಕರು ಪ್ರಾಣಿಗಳನ್ನೂ ಬಿಡುತ್ತಿಲ್ಲ. ಶವ, ಆಡು, ನಾಯಿ, ದನದ ಮೇಲೆ ಅತ್ಯಾಚಾರ ಮಾಡಿದಂತಹ ಬಹಳಷ್ಟು ಘಟನೆಗಳು ವರದಿಯಾಗುತ್ತಲೇ ಇರುತ್ತವೆ. ಪ್ರಾಣಿಗಳ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಘಟನೆಗಳ ಕುರಿತೂ ನಾವು ಕೇಳಿದ್ದೇವೆ. ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಗರ್ಭಿಣಿ ಮೇಕೆಯ (Pregnant Goat) ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿ (Rape) ಕೊಂದು ಹಾಕಿರುವ ದಾರುಣ ಘಟನೆ ಬೆಳಕಿಗೆ ಬಂದಿತ್ತು. ಇಂಥದ್ದೇ ಘಟನೆಯೊಂದು ರಾಮನಗರ(Ramanagara) ಜಿಲ್ಲೆಯಲ್ಲಿ ನಡೆದಿದ್ದು, ಕಾಮುಕನೊಬ್ಬ ಮೇಕೆ ಮೇಲೆ ಅತ್ಯಾಚಾರ ಎಸಗಿ ತನ್ನ ತೀಟೆ ತೀರಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ರೋಹಿದ್ ಎನ್ನುವಾತ ಮೇಕೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣದ ಇಂದಿರಾ ಕಾಟೇಜ್‌ನಲ್ಲಿ ನಡೆದಿದ್ದು, ಇದೀಗ ರೋಹಿದ್ ವಿರುದ್ಧ ಜಮೀರ್ ಖಾನ್​ ಚನ್ನಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ರೋಹಿದ್ ಪ್ರತಿದಿನ ಬಂದು ಮೇಕೆ ಕೊಂಡೊಯ್ದು ಅತ್ಯಾಚಾರ ಎಸಗುತ್ತಾನೆ ಎಂದು ಜಮೀರ್ ಖಾನ್ ಆರೋಪಿಸಿದ್ದಾರೆ.

ಇದನ್ನೂ ಓದಿ: Shocking News: ಗರ್ಭಿಣಿ ಮೇಕೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ; ಕಾಸರಗೋಡಿನಲ್ಲೊಂದು ಆಘಾತಕಾರಿ ಘಟನೆ

ಹೀಗೆ ಒಂದು ದಿನ ಅಂದರೆ ಸೆಪ್ಟೆಂಬರ್​ 01ರಂದು ರೋಹಿದ್​ನನ್ನು ಹಿಂಬಾಲಿಸಿಕೊಂಡು ಹೋದಾಗ ಕೃತ್ಯ ನೋಡಿರುವುದಾಗಿ ಜಮೀರ್​ ದೂರಿನಲ್ಲಿ ಉಲ್ಲೇಖಿಸಿದ್ದಾನೆ. ಅಂದು 12 ಗಂಟೆಯಿಂದ 1 ಗಂಟೆವರೆಗೂ ರೋಹಿದ್ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿದ್ದು, ಮೇಕೆ ಮೇಲೆ ಅತ್ಯಾಚಾರ ಮಾಡುತ್ತಿರುವ ವಿಡಿಯೋ ಸೆರೆ ಹಿಡಿದಿದ್ದಾನೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿ
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ವಿಡಿಯೋ ಇಲ್ಲಿದೆ
ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ವಿಡಿಯೋ ಇಲ್ಲಿದೆ
ಬಿಗ್ ಬಾಸ್​ನಲ್ಲಿ ಹದಗೆಟ್ಟಿತು ವರ್ತೂರು ಸಂತೋಷ್​-ತನಿಷಾ ಫ್ರೆಂಡ್​ಶಿಪ್
ಬಿಗ್ ಬಾಸ್​ನಲ್ಲಿ ಹದಗೆಟ್ಟಿತು ವರ್ತೂರು ಸಂತೋಷ್​-ತನಿಷಾ ಫ್ರೆಂಡ್​ಶಿಪ್
ಯಡಿಯೂರಪ್ಪರನ್ನು ಟೀಕಿಸುವ ನೈತಿಕತೆ ಬಸನಗೌಡ ಪಾಟೀಲ್ ಗಿಲ್ಲ: ರೇಣುಕಾಚಾರ್ಯ
ಯಡಿಯೂರಪ್ಪರನ್ನು ಟೀಕಿಸುವ ನೈತಿಕತೆ ಬಸನಗೌಡ ಪಾಟೀಲ್ ಗಿಲ್ಲ: ರೇಣುಕಾಚಾರ್ಯ
ಸಚಿವ ಭೈರತಿ ಸುರೇಶ್ ಮತ್ತು ಬಸನಗೌಡ ಯತ್ನಾಳ್ ನಡುವಿನ ಚರ್ಚೆ ಗಮನ ಸೆಳೆಯಿತು
ಸಚಿವ ಭೈರತಿ ಸುರೇಶ್ ಮತ್ತು ಬಸನಗೌಡ ಯತ್ನಾಳ್ ನಡುವಿನ ಚರ್ಚೆ ಗಮನ ಸೆಳೆಯಿತು
ಅಶೋಕ ಮತ್ತು ವಿಶ್ವನಾಥ್ ನಡುವೆ ಭಿನ್ನಾಭಿಪ್ರಾಯವಿಲ್ಲ: ಎಸ್ ಟಿ ಸೋಮಶೇಖರ್
ಅಶೋಕ ಮತ್ತು ವಿಶ್ವನಾಥ್ ನಡುವೆ ಭಿನ್ನಾಭಿಪ್ರಾಯವಿಲ್ಲ: ಎಸ್ ಟಿ ಸೋಮಶೇಖರ್
ನಿತಿನ್ ಗಡ್ಕರಿ ಜೊತೆ ಪೋಟೋದಿಂದ ತನ್ವೀರ್ ಪೀರಾ ಪಾಪಮುಕ್ತನಾಗಲಾರ: ಯತ್ನಾಳ್
ನಿತಿನ್ ಗಡ್ಕರಿ ಜೊತೆ ಪೋಟೋದಿಂದ ತನ್ವೀರ್ ಪೀರಾ ಪಾಪಮುಕ್ತನಾಗಲಾರ: ಯತ್ನಾಳ್