ರಾಮನಗರ: ಮೇಕೆ ಮೇಲೆ ಅತ್ಯಾಚಾರ, ರೋಹಿದ್ ಎನ್ನುವ ಕಾಮುಕನ ವಿರುದ್ಧ ಪ್ರಕರಣ ದಾಖಲು

ನಿತ್ಯ ಬೆಳಗಾದರೆ ಒಂದಲ್ಲ ಒಂದು ಕಡೆಯಿಂದ ಅತ್ಯಾಚಾರದ ಸುದ್ದಿ ವರದಿಯಾಗುತ್ತಿರುತ್ತವೆ. ಚಿಕ್ಕ ಮಗುವಿನಿಂದ ಹಿಡಿದು ವೃದ್ಧೆಯರವರೆಗೆ, ಶವಗಳನ್ನು ಸಾಲದಕ್ಕೆ ಕೊನೆಗೆ ಮೂಕ ಪ್ರಾಣಿಗಳನ್ನು ಕಾಮುಕರು ಬಿಡುತ್ತಿಲ್ಲ. ಮೂಕ ಪ್ರಾಣಿಗಳ ಮೇಲೆ ಅತ್ಯಾಚಾರ ಮಾಡಿದ ಘಟನೆಗಳಲ್ಲಿ ಮನುಷ್ಯನ ವಿಕೃತ ಮನಸ್ಥಿತಿ ಸ್ಪಷ್ಟವಾಗಿ ಕಾಣಬಹುದು. ಈಗ ಇಂಥದ್ದೇ ಘಟನೆಯೊಂದು ನಮ್ಮ ಕರ್ನಾಟಕದ ರಾಮನಗರ ಜಿಲ್ಲೆಯಲ್ಲಿ ನಡೆದಿದೆ,

ರಾಮನಗರ: ಮೇಕೆ ಮೇಲೆ ಅತ್ಯಾಚಾರ, ರೋಹಿದ್ ಎನ್ನುವ ಕಾಮುಕನ ವಿರುದ್ಧ ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರ
Edited By:

Updated on: Sep 03, 2023 | 5:22 PM

ರಾಮನಗರ, (ಸೆಪ್ಟೆಂಬರ್ 03): ಅತ್ಯಾಚಾರ(Rape) ಎನ್ನುವುದು ಹೆಣ್ಣಿನ ಮೇಲಷ್ಟೇ ಅಲ್ಲ. ಈಗ ಕಾಮುಕರು ಪ್ರಾಣಿಗಳನ್ನೂ ಬಿಡುತ್ತಿಲ್ಲ. ಶವ, ಆಡು, ನಾಯಿ, ದನದ ಮೇಲೆ ಅತ್ಯಾಚಾರ ಮಾಡಿದಂತಹ ಬಹಳಷ್ಟು ಘಟನೆಗಳು ವರದಿಯಾಗುತ್ತಲೇ ಇರುತ್ತವೆ. ಪ್ರಾಣಿಗಳ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಘಟನೆಗಳ ಕುರಿತೂ ನಾವು ಕೇಳಿದ್ದೇವೆ. ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಗರ್ಭಿಣಿ ಮೇಕೆಯ (Pregnant Goat) ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿ (Rape) ಕೊಂದು ಹಾಕಿರುವ ದಾರುಣ ಘಟನೆ ಬೆಳಕಿಗೆ ಬಂದಿತ್ತು. ಇಂಥದ್ದೇ ಘಟನೆಯೊಂದು ರಾಮನಗರ(Ramanagara) ಜಿಲ್ಲೆಯಲ್ಲಿ ನಡೆದಿದ್ದು, ಕಾಮುಕನೊಬ್ಬ ಮೇಕೆ ಮೇಲೆ ಅತ್ಯಾಚಾರ ಎಸಗಿ ತನ್ನ ತೀಟೆ ತೀರಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ರೋಹಿದ್ ಎನ್ನುವಾತ ಮೇಕೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣದ ಇಂದಿರಾ ಕಾಟೇಜ್‌ನಲ್ಲಿ ನಡೆದಿದ್ದು, ಇದೀಗ ರೋಹಿದ್ ವಿರುದ್ಧ ಜಮೀರ್ ಖಾನ್​ ಚನ್ನಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ರೋಹಿದ್ ಪ್ರತಿದಿನ ಬಂದು ಮೇಕೆ ಕೊಂಡೊಯ್ದು ಅತ್ಯಾಚಾರ ಎಸಗುತ್ತಾನೆ ಎಂದು ಜಮೀರ್ ಖಾನ್ ಆರೋಪಿಸಿದ್ದಾರೆ.

ಇದನ್ನೂ ಓದಿ: Shocking News: ಗರ್ಭಿಣಿ ಮೇಕೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ; ಕಾಸರಗೋಡಿನಲ್ಲೊಂದು ಆಘಾತಕಾರಿ ಘಟನೆ

ಹೀಗೆ ಒಂದು ದಿನ ಅಂದರೆ ಸೆಪ್ಟೆಂಬರ್​ 01ರಂದು ರೋಹಿದ್​ನನ್ನು ಹಿಂಬಾಲಿಸಿಕೊಂಡು ಹೋದಾಗ ಕೃತ್ಯ ನೋಡಿರುವುದಾಗಿ ಜಮೀರ್​ ದೂರಿನಲ್ಲಿ ಉಲ್ಲೇಖಿಸಿದ್ದಾನೆ. ಅಂದು 12 ಗಂಟೆಯಿಂದ 1 ಗಂಟೆವರೆಗೂ ರೋಹಿದ್ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿದ್ದು, ಮೇಕೆ ಮೇಲೆ ಅತ್ಯಾಚಾರ ಮಾಡುತ್ತಿರುವ ವಿಡಿಯೋ ಸೆರೆ ಹಿಡಿದಿದ್ದಾನೆ ಎಂದು ತಿಳಿದುಬಂದಿದೆ.

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us