AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಸಮಾವೇಶಕ್ಕೆ ಸಾರಿಗೆ ಬಸ್​ ಬಳಕೆ; ಬಸ್​ಗಳಿಲ್ಲದೆ ಪರೀಕ್ಷೆಗೆ ಹೋಗಲು ದ್ವಿತೀಯ ಪಿಯು ವಿದ್ಯಾರ್ಥಿಗಳ ಪರದಾಟ

ಕುಣಿಗಲ್​ನಲ್ಲಿ ಇಂದು ಕಾಂಗ್ರೆಸ್ ಸಮಾವೇಶ ಆಯೋಜಿಸಲಾಗಿದೆ. ಹೀಗಾಗಿ ಕಾರ್ಯಕರ್ತರು ಹಾಗೂ ಜನರು ಸಮಾವೇಶಕ್ಕೆ ಬರಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೆಎಸ್​ಆರ್​ಟಿಸಿ ಬಸ್​ಗಳನ್ನು ವಿವಿಧ ಜಿಲ್ಲೆಗಳಿಗೆ ಕಳುಹಿಸಲಾಗಿದೆ. ಇತ್ತ, ಇಂದು ದ್ವಿತೀಯ ಪಿಯು ಪರೀಕ್ಷೆ ಬರೆಯಲು ಹೊರಟಿರುವ ವಿದ್ಯಾರ್ಥಿಗಳು ಬಸ್​ಗಳಿಲ್ಲದೆ ಪರದಾಟ ನಡೆಸುವಂತಾಗಿದೆ.

ಕಾಂಗ್ರೆಸ್ ಸಮಾವೇಶಕ್ಕೆ ಸಾರಿಗೆ ಬಸ್​ ಬಳಕೆ; ಬಸ್​ಗಳಿಲ್ಲದೆ ಪರೀಕ್ಷೆಗೆ ಹೋಗಲು ದ್ವಿತೀಯ ಪಿಯು ವಿದ್ಯಾರ್ಥಿಗಳ ಪರದಾಟ
ಕಾಂಗ್ರೆಸ್ ಸಮಾವೇಶಕ್ಕೆ ಸಾರಿಗೆ ಬಸ್​ ಬಳಕೆ; ಬಸ್​ಗಳಿಲ್ಲದೆ ಪರೀಕ್ಷೆಗೆ ಹೋಗಲು ದ್ವಿತೀಯ ಪಿಯು ವಿದ್ಯಾರ್ಥಿಗಳ ಪರದಾಟ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ | Edited By: Rakesh Nayak Manchi|

Updated on: Mar 01, 2024 | 10:15 AM

Share

ರಾಮನಗರ, ಮಾ.1: ಕುಣಿಗಲ್​ನಲ್ಲಿ ಇಂದು ಕಾಂಗ್ರೆಸ್ ಸಮಾವೇಶ (Congress Convention) ಆಯೋಜಿಸಲಾಗಿದೆ. ಹೀಗಾಗಿ ಕಾರ್ಯಕರ್ತರು ಹಾಗೂ ಜನರು ಸಮಾವೇಶಕ್ಕೆ ಬರಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೆಎಸ್​ಆರ್​ಟಿಸಿ (KSRTC) ಬಸ್​ಗಳನ್ನು ವಿವಿಧ ಜಿಲ್ಲೆಗಳಿಗೆ ಕಳುಹಿಸಲಾಗಿದೆ. ಇತ್ತ, ಇಂದು ದ್ವಿತೀಯ ಪಿಯು ಪರೀಕ್ಷೆ (2nd PU Exam) ಬರೆಯಲು ಹೊರಟಿರುವ ವಿದ್ಯಾರ್ಥಿಗಳು ಬಸ್​ಗಳಿಲ್ಲದೆ ಪರದಾಟ ನಡೆಸುವಂತಾಗಿದೆ.

ಕುಣಿಗಲ್​ಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶಕ್ಕೆ ರಾಮನಗರ ಡಿಪೋನಿಂದ ಬಸ್​ಗಳನ್ನು ನಿಯೋಜನೆ ಮಾಡಲಾಗಿದೆ. ಇದಕ್ಕಾಗಿ ಸಾರಿಗೆ ಅಧಿಕಾರಿಗಳು ನಿನ್ನೆ ಗ್ರಾಮೀಣ ಪ್ರದೇಶಕ್ಕೆ ತೆರಳಿದ್ದ ಬಸ್​ಗಳನ್ನು ರಾತ್ರೋರಾತ್ರಿ ಘಟಕಕ್ಕೆ ವಾಪಸ್ ಕರೆಸಿಕೊಂಡಿದ್ದಾರೆ. ಸಮಾವೇಶಕ್ಕೆ ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ವಿವಿಧ ಜಿಲ್ಲೆಯಿಂದ 300ಕ್ಕೂ ಅಧಿಕ ಬಸ್​ಗಳನ್ನ ಒಪ್ಪಂದದ ಮೇರೆಗೆ ಸರ್ಕಾರ ಪಡೆದುಕೊಂಡಿದೆ.

ಇದನ್ನೂ ಓದಿ: 2nd PUC Exam 2024: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ, ವಿದ್ಯಾರ್ಥಿಗಳಿಗೆ ಆಲ್​ ದಿ ಬೆಸ್ಟ್

ಇತ್ತ ಪರೀಕ್ಷೆ ಸಮಯದಲ್ಲಿ ಬಸ್​ಗಳಲಿಲ್ಲದೇ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಪರೀಕ್ಷೆಗಳು ಇಂದಿನಿಂದ ಆರಂಭವಾಗುತ್ತದೆ ಎಂಬ ವಿಚಾರ ತಿಳಿದಿದ್ದರೂ ರಾಜ್ಯ ಸರ್ಕಾರ ಹಾಗೂ ಸಾರಿಗೆ ಅಧಿಕಾರಿಗಳು ಬಸ್​ಗಳನ್ನು ಕಾಂಗ್ರೆಸ್ ಸಮಾವೇಶಕ್ಕೆ ನಿಯೋಜಿಸುವ ಮೂಲಕ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ