ಕಾಂಗ್ರೆಸ್ ಸಮಾವೇಶಕ್ಕೆ ಸಾರಿಗೆ ಬಸ್​ ಬಳಕೆ; ಬಸ್​ಗಳಿಲ್ಲದೆ ಪರೀಕ್ಷೆಗೆ ಹೋಗಲು ದ್ವಿತೀಯ ಪಿಯು ವಿದ್ಯಾರ್ಥಿಗಳ ಪರದಾಟ

ಕುಣಿಗಲ್​ನಲ್ಲಿ ಇಂದು ಕಾಂಗ್ರೆಸ್ ಸಮಾವೇಶ ಆಯೋಜಿಸಲಾಗಿದೆ. ಹೀಗಾಗಿ ಕಾರ್ಯಕರ್ತರು ಹಾಗೂ ಜನರು ಸಮಾವೇಶಕ್ಕೆ ಬರಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೆಎಸ್​ಆರ್​ಟಿಸಿ ಬಸ್​ಗಳನ್ನು ವಿವಿಧ ಜಿಲ್ಲೆಗಳಿಗೆ ಕಳುಹಿಸಲಾಗಿದೆ. ಇತ್ತ, ಇಂದು ದ್ವಿತೀಯ ಪಿಯು ಪರೀಕ್ಷೆ ಬರೆಯಲು ಹೊರಟಿರುವ ವಿದ್ಯಾರ್ಥಿಗಳು ಬಸ್​ಗಳಿಲ್ಲದೆ ಪರದಾಟ ನಡೆಸುವಂತಾಗಿದೆ.

ಕಾಂಗ್ರೆಸ್ ಸಮಾವೇಶಕ್ಕೆ ಸಾರಿಗೆ ಬಸ್​ ಬಳಕೆ; ಬಸ್​ಗಳಿಲ್ಲದೆ ಪರೀಕ್ಷೆಗೆ ಹೋಗಲು ದ್ವಿತೀಯ ಪಿಯು ವಿದ್ಯಾರ್ಥಿಗಳ ಪರದಾಟ
ಕಾಂಗ್ರೆಸ್ ಸಮಾವೇಶಕ್ಕೆ ಸಾರಿಗೆ ಬಸ್​ ಬಳಕೆ; ಬಸ್​ಗಳಿಲ್ಲದೆ ಪರೀಕ್ಷೆಗೆ ಹೋಗಲು ದ್ವಿತೀಯ ಪಿಯು ವಿದ್ಯಾರ್ಥಿಗಳ ಪರದಾಟ
Follow us
| Updated By: Rakesh Nayak Manchi

Updated on: Mar 01, 2024 | 10:15 AM

ರಾಮನಗರ, ಮಾ.1: ಕುಣಿಗಲ್​ನಲ್ಲಿ ಇಂದು ಕಾಂಗ್ರೆಸ್ ಸಮಾವೇಶ (Congress Convention) ಆಯೋಜಿಸಲಾಗಿದೆ. ಹೀಗಾಗಿ ಕಾರ್ಯಕರ್ತರು ಹಾಗೂ ಜನರು ಸಮಾವೇಶಕ್ಕೆ ಬರಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೆಎಸ್​ಆರ್​ಟಿಸಿ (KSRTC) ಬಸ್​ಗಳನ್ನು ವಿವಿಧ ಜಿಲ್ಲೆಗಳಿಗೆ ಕಳುಹಿಸಲಾಗಿದೆ. ಇತ್ತ, ಇಂದು ದ್ವಿತೀಯ ಪಿಯು ಪರೀಕ್ಷೆ (2nd PU Exam) ಬರೆಯಲು ಹೊರಟಿರುವ ವಿದ್ಯಾರ್ಥಿಗಳು ಬಸ್​ಗಳಿಲ್ಲದೆ ಪರದಾಟ ನಡೆಸುವಂತಾಗಿದೆ.

ಕುಣಿಗಲ್​ಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶಕ್ಕೆ ರಾಮನಗರ ಡಿಪೋನಿಂದ ಬಸ್​ಗಳನ್ನು ನಿಯೋಜನೆ ಮಾಡಲಾಗಿದೆ. ಇದಕ್ಕಾಗಿ ಸಾರಿಗೆ ಅಧಿಕಾರಿಗಳು ನಿನ್ನೆ ಗ್ರಾಮೀಣ ಪ್ರದೇಶಕ್ಕೆ ತೆರಳಿದ್ದ ಬಸ್​ಗಳನ್ನು ರಾತ್ರೋರಾತ್ರಿ ಘಟಕಕ್ಕೆ ವಾಪಸ್ ಕರೆಸಿಕೊಂಡಿದ್ದಾರೆ. ಸಮಾವೇಶಕ್ಕೆ ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ವಿವಿಧ ಜಿಲ್ಲೆಯಿಂದ 300ಕ್ಕೂ ಅಧಿಕ ಬಸ್​ಗಳನ್ನ ಒಪ್ಪಂದದ ಮೇರೆಗೆ ಸರ್ಕಾರ ಪಡೆದುಕೊಂಡಿದೆ.

ಇದನ್ನೂ ಓದಿ: 2nd PUC Exam 2024: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ, ವಿದ್ಯಾರ್ಥಿಗಳಿಗೆ ಆಲ್​ ದಿ ಬೆಸ್ಟ್

ಇತ್ತ ಪರೀಕ್ಷೆ ಸಮಯದಲ್ಲಿ ಬಸ್​ಗಳಲಿಲ್ಲದೇ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಪರೀಕ್ಷೆಗಳು ಇಂದಿನಿಂದ ಆರಂಭವಾಗುತ್ತದೆ ಎಂಬ ವಿಚಾರ ತಿಳಿದಿದ್ದರೂ ರಾಜ್ಯ ಸರ್ಕಾರ ಹಾಗೂ ಸಾರಿಗೆ ಅಧಿಕಾರಿಗಳು ಬಸ್​ಗಳನ್ನು ಕಾಂಗ್ರೆಸ್ ಸಮಾವೇಶಕ್ಕೆ ನಿಯೋಜಿಸುವ ಮೂಲಕ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ