ಕಾಂಗ್ರೆಸ್ ಸಮಾವೇಶಕ್ಕೆ ಸಾರಿಗೆ ಬಸ್​ ಬಳಕೆ; ಬಸ್​ಗಳಿಲ್ಲದೆ ಪರೀಕ್ಷೆಗೆ ಹೋಗಲು ದ್ವಿತೀಯ ಪಿಯು ವಿದ್ಯಾರ್ಥಿಗಳ ಪರದಾಟ

ಕುಣಿಗಲ್​ನಲ್ಲಿ ಇಂದು ಕಾಂಗ್ರೆಸ್ ಸಮಾವೇಶ ಆಯೋಜಿಸಲಾಗಿದೆ. ಹೀಗಾಗಿ ಕಾರ್ಯಕರ್ತರು ಹಾಗೂ ಜನರು ಸಮಾವೇಶಕ್ಕೆ ಬರಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೆಎಸ್​ಆರ್​ಟಿಸಿ ಬಸ್​ಗಳನ್ನು ವಿವಿಧ ಜಿಲ್ಲೆಗಳಿಗೆ ಕಳುಹಿಸಲಾಗಿದೆ. ಇತ್ತ, ಇಂದು ದ್ವಿತೀಯ ಪಿಯು ಪರೀಕ್ಷೆ ಬರೆಯಲು ಹೊರಟಿರುವ ವಿದ್ಯಾರ್ಥಿಗಳು ಬಸ್​ಗಳಿಲ್ಲದೆ ಪರದಾಟ ನಡೆಸುವಂತಾಗಿದೆ.

ಕಾಂಗ್ರೆಸ್ ಸಮಾವೇಶಕ್ಕೆ ಸಾರಿಗೆ ಬಸ್​ ಬಳಕೆ; ಬಸ್​ಗಳಿಲ್ಲದೆ ಪರೀಕ್ಷೆಗೆ ಹೋಗಲು ದ್ವಿತೀಯ ಪಿಯು ವಿದ್ಯಾರ್ಥಿಗಳ ಪರದಾಟ
ಕಾಂಗ್ರೆಸ್ ಸಮಾವೇಶಕ್ಕೆ ಸಾರಿಗೆ ಬಸ್​ ಬಳಕೆ; ಬಸ್​ಗಳಿಲ್ಲದೆ ಪರೀಕ್ಷೆಗೆ ಹೋಗಲು ದ್ವಿತೀಯ ಪಿಯು ವಿದ್ಯಾರ್ಥಿಗಳ ಪರದಾಟ
Edited By: Rakesh Nayak Manchi

Updated on: Mar 01, 2024 | 10:15 AM

ರಾಮನಗರ, ಮಾ.1: ಕುಣಿಗಲ್​ನಲ್ಲಿ ಇಂದು ಕಾಂಗ್ರೆಸ್ ಸಮಾವೇಶ (Congress Convention) ಆಯೋಜಿಸಲಾಗಿದೆ. ಹೀಗಾಗಿ ಕಾರ್ಯಕರ್ತರು ಹಾಗೂ ಜನರು ಸಮಾವೇಶಕ್ಕೆ ಬರಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೆಎಸ್​ಆರ್​ಟಿಸಿ (KSRTC) ಬಸ್​ಗಳನ್ನು ವಿವಿಧ ಜಿಲ್ಲೆಗಳಿಗೆ ಕಳುಹಿಸಲಾಗಿದೆ. ಇತ್ತ, ಇಂದು ದ್ವಿತೀಯ ಪಿಯು ಪರೀಕ್ಷೆ (2nd PU Exam) ಬರೆಯಲು ಹೊರಟಿರುವ ವಿದ್ಯಾರ್ಥಿಗಳು ಬಸ್​ಗಳಿಲ್ಲದೆ ಪರದಾಟ ನಡೆಸುವಂತಾಗಿದೆ.

ಕುಣಿಗಲ್​ಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶಕ್ಕೆ ರಾಮನಗರ ಡಿಪೋನಿಂದ ಬಸ್​ಗಳನ್ನು ನಿಯೋಜನೆ ಮಾಡಲಾಗಿದೆ. ಇದಕ್ಕಾಗಿ ಸಾರಿಗೆ ಅಧಿಕಾರಿಗಳು ನಿನ್ನೆ ಗ್ರಾಮೀಣ ಪ್ರದೇಶಕ್ಕೆ ತೆರಳಿದ್ದ ಬಸ್​ಗಳನ್ನು ರಾತ್ರೋರಾತ್ರಿ ಘಟಕಕ್ಕೆ ವಾಪಸ್ ಕರೆಸಿಕೊಂಡಿದ್ದಾರೆ. ಸಮಾವೇಶಕ್ಕೆ ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ವಿವಿಧ ಜಿಲ್ಲೆಯಿಂದ 300ಕ್ಕೂ ಅಧಿಕ ಬಸ್​ಗಳನ್ನ ಒಪ್ಪಂದದ ಮೇರೆಗೆ ಸರ್ಕಾರ ಪಡೆದುಕೊಂಡಿದೆ.

ಇದನ್ನೂ ಓದಿ: 2nd PUC Exam 2024: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ, ವಿದ್ಯಾರ್ಥಿಗಳಿಗೆ ಆಲ್​ ದಿ ಬೆಸ್ಟ್

ಇತ್ತ ಪರೀಕ್ಷೆ ಸಮಯದಲ್ಲಿ ಬಸ್​ಗಳಲಿಲ್ಲದೇ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಪರೀಕ್ಷೆಗಳು ಇಂದಿನಿಂದ ಆರಂಭವಾಗುತ್ತದೆ ಎಂಬ ವಿಚಾರ ತಿಳಿದಿದ್ದರೂ ರಾಜ್ಯ ಸರ್ಕಾರ ಹಾಗೂ ಸಾರಿಗೆ ಅಧಿಕಾರಿಗಳು ಬಸ್​ಗಳನ್ನು ಕಾಂಗ್ರೆಸ್ ಸಮಾವೇಶಕ್ಕೆ ನಿಯೋಜಿಸುವ ಮೂಲಕ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us