ರಾಮನಗರ: ಆನೆ ಪಳಗಿಸುತ್ತೇನೆ ಎಂದು ಕಾಡಿಗೆ ಹೋದವನು ಕಾಡಾನೆಗೆ ಬಲಿ

| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 27, 2023 | 2:41 PM

ರಾಮನಗರ ಜಿಲ್ಲೆಯ ಕನಕಪುರ(Kanakapura) ತಾಲೂಕಿನ ಹೊರವಲಯದ ಬನ್ನಿಮುಕೋಡ್ಲು ಬಳಿ ಆನೆ ಪಳಗಿಸುತ್ತೇನೆ ಎಂದು ಕಾಡಿಗೆ ಹೋದವನು ಕಾಡಾನೆ(wild elephant)ಗೆ ಬಲಿಯಾದ ಘಟನೆ ನಡೆದಿದೆ. ಸ್ಥಳಕ್ಕೆ ಬನ್ನೇರುಘಟ್ಟ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಮನಗರ: ಆನೆ ಪಳಗಿಸುತ್ತೇನೆ ಎಂದು ಕಾಡಿಗೆ ಹೋದವನು ಕಾಡಾನೆಗೆ ಬಲಿ
ಮೃತ ವ್ಯಕ್ತಿ ಚಂದ್ರಣ್ಣ
Follow us on

ರಾಮನಗರ, ಡಿ.27: ಆನೆ ಪಳಗಿಸುತ್ತೇನೆ ಎಂದು ಕಾಡಿಗೆ ಹೋದವನು ಕಾಡಾನೆ(wild elephant)ಗೆ ಬಲಿಯಾದ ಘಟನೆ ರಾಮನಗರ ಜಿಲ್ಲೆಯ ಕನಕಪುರ(Kanakapura) ತಾಲೂಕಿನ ಹೊರವಲಯದ ಬನ್ನಿಮುಕೋಡ್ಲು ಬಳಿ ನಡೆದಿದೆ. ಚಂದ್ರಣ್ಣ(55) ಮೃತ ವ್ಯಕ್ತಿ. ಕಳೆದ ಎರಡು ದಿನದ ಹಿಂದೆ ಅರಣ್ಯ ಪ್ರದೇಶಕ್ಕೆ‌‌ ನುಗ್ಗಿದ್ದ ಕಾಡಾನೆಗಳನ್ನು ಪಳಗಿಸುತ್ತೇನೆ ಎಂದು ಬನ್ನೇರುಘಟ್ಟ ಅರಣ್ಯಕ್ಕೆ ಹೋಗಿದ್ದ.

ಆದರೆ, ಎರಡು ದಿನಗಳಾದರೂ ಚಂದ್ರಣ್ಣ ಮನೆಗೆ ವಾಪಾಸ್ ಆಗಿರಲಿಲ್ಲ. ಈ ಹಿನ್ನಲೆ ಅರಣ್ಯ ಇಲಾಖೆ ಸಿಬ್ಬಂದಿಗಳು ಹುಡುಕಾಡಿದಾಗ  ಬನ್ನೇರುಘಟ್ಟ ಅರಣ್ಯ ಪ್ರದೇಶದಲ್ಲಿ ಶವಪತ್ತೆಯಾಗಿದ್ದು, ಸ್ಥಳಕ್ಕೆ ಬನ್ನೇರುಘಟ್ಟ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಚಿಕ್ಕಮಗಳೂರು: ಕಾಡಾನೆ ಸ್ಥಳಾಂತರ ಕಾರ್ಯಚರಣೆ ವೇಳೆ ಆನೆ ದಾಳಿಗೆ ETF ಸಿಬ್ಬಂದಿ ಬಲಿ, DRFOಗೆ ಗಂಭೀರ ಗಾಯ

ಹೆಚ್ಚಿದ ಹುಚ್ಚು ಮಂಗನ ಹಾವಳಿ; 30ಕ್ಕೂ ಅಧಿಕ ಜಾನುವಾರಗಳಿಗೆ ಕಚ್ಚಿದ ಕೋತಿಗಳು

ಹಾವೇರಿ: ಜಿಲ್ಲೆಯ ಮಾಸನಕಟ್ಟಿ ಗ್ರಾಮದಲ್ಲಿ ಒಂದು ತಿಂಗಳಿಂದ ಹುಚ್ಚು ಮಂಗಗಳ ಹಾವಳಿ ಹೆಚ್ಚಾಗಿದ್ದು, 30ಕ್ಕೂ ಅಧಿಕ ಜಾನುವಾರಗಳಿಗೆ ಕಚ್ಚಿ ಗಾಯಗೊಳಿಸಿವೆ. ಮಂಗನ ಭಯಕ್ಕೆ ವಿದ್ಯಾರ್ಥಿಗಳು ಶಾಲೆಗೆ ಹೋಗುವುದನ್ನೇ ಬಿಟ್ಟಿದ್ದಾರೆ. ಲಕ್ಷಾಂತರ ರೂ. ಮೌಲ್ಯದ ಜಾನುವಾರುಗಳಿಗೆ ಗಾಯವಾದರೂ, ಅರಣ್ಯ ಇಲಾಖೆ ಅಧಿಕಾರಿಗಳು ಮಾತ್ರ ಕೈ ಕಟ್ಟಿ ಕುಳಿತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:34 pm, Wed, 27 December 23