AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ ವಂಡರ್​ಲಾ ಅಮ್ಯೂಸ್ ಮೆಂಟ್​ ಪಾರ್ಕ್​ನಲ್ಲಿ ದುರ್ಘಟನೆ; ಮೇಲಿಂದ ಬಿದ್ದು ವ್ಯಕ್ತಿ ಸಾವು

ರಾಮನಗರ ತಾಲೂಕಿನ ಬಿಡದಿ ಬಳಿಯಿರುವ ವಂಡರ್​ಲಾ ಅಮ್ಯೂಸ್ ಮೆಂಟ್​ ಪಾರ್ಕ್​​ (Ramanagara Wonderla Amusement Park) ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯು, ಮೇಲಿಂದ ಬಿದ್ದು ಸಾವನ್ನಪ್ಪಿದ್ದ ಧಾರುಣ ಘಟನೆ ನಿನ್ನೆ(ಆ.21) ನಡೆದಿದೆ. ಜಡೇನಹಳ್ಳಿ ನಿವಾಸಿ ರಾಜು(35) ಮೃತ ದುರ್ದೈವಿ. ​

ರಾಮನಗರ ವಂಡರ್​ಲಾ ಅಮ್ಯೂಸ್ ಮೆಂಟ್​ ಪಾರ್ಕ್​ನಲ್ಲಿ ದುರ್ಘಟನೆ; ಮೇಲಿಂದ ಬಿದ್ದು ವ್ಯಕ್ತಿ ಸಾವು
ಮೃತ ವ್ಯಕ್ತಿ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Aug 23, 2023 | 5:13 PM

Share

ರಾಮನಗರ, ಆ.22: ಸಾವು ಹೇಗೆ, ಯಾವಾಗ ಬರುತ್ತದೆ ಎಂದು ಹೇಳಲು ಸಾಧ್ಯವೇ ಇಲ್ಲ. ಹೌದು, ರಾಮನಗರ ತಾಲೂಕಿನ ಬಿಡದಿ ಬಳಿಯಿರುವ ವಂಡರ್​ಲಾ ಅಮ್ಯೂಸ್ ಮೆಂಟ್​ ಪಾರ್ಕ್​​ (Ramanagara Wonderla Amusement Park) ನಲ್ಲಿ  ಕೆಲಸ ಮಾಡುವ ವ್ಯಕ್ತಿಯೊಬ್ಬರು ಪಾರ್ಕ್‌ನ ಪಕ್ಕದಲ್ಲಿರುವ ವಂಡರ್‌ಲಾ ಕ್ವಾಟ್ರಸ್‌ನಲ್ಲಿ ಕೆಲಸ ಮಾಡುವ ವೇಳೆ ಮೇಲೆಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ಈ ಘಟನೆ ನಿನ್ನೆ(ಆ.21) ನಡೆದಿದೆ. ಜಡೇನಹಳ್ಳಿ ನಿವಾಸಿ ರಾಜು(35) ಮೃತ ದುರ್ದೈವಿ. ಈ ಕುರಿತು ಬಿಡದಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿನೆ ನಡೆಸಿದ್ದಾರೆ.

ಕಾರು, ಬೈಕ್ ನಡುವೆ ಡಿಕ್ಕಿ; ತಪ್ಪಿದ ಅನಾಹುತ

ಗದಗ: ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾದ ಘಟನೆ ಗದಗ ನಗರದ ದೋಬಿ ಘಾಟ್ ಬಳಿ ನಡೆದಿದೆ. ಪೆಟ್ರೋಲ್ ಬಂಕ್​ನಿಂದ ಕಾರು ಹೊರ ಬರುತ್ತಿದ್ದಾಗ ಬೈಕ್​ ಡಿಕ್ಕಿಯಾಗಿದೆ. ಈ ವೇಳೆ ಕಾರಿನ ನಿಯಂತ್ರಣ ತಪ್ಪಿ, ಡಿವೈಡರ್ ಮೇಲೆ ಕಾರ್ ಹತ್ತಿಸಿ ಪುನಃ ಪೆಟ್ರೋಲ್ ಬಂಕ್ ಒಳಗಡೆ ನುಗ್ಗಿದೆ. ಅಪಘಾತದ ಸಂದರ್ಭದಲ್ಲಿ ಎರಡು ವಾಹನಗಳು ನಿಧಾನವಾಗಿದ್ದರಿಂದ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಈ ದೃಶ್ಯ ಪೆಟ್ರೋಲ್ ಬಂಕ್​ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ:ಯುಎಸ್ ನಲ್ಲಿ ದಾವಣಗೆರೆಯ ಟೆಕ್ಕಿ ಕುಟುಂಬ ಸಾವು, ಸಿದ್ದರಾಮಯ್ಯರನ್ನು ಭೇಟಿಯಾಗಿ ಪಾರ್ಥಿವ ಶರೀರಗಳನ್ನು ತರಿಸಲು ನೆರವಾಗುವಂತೆ ಕೋರಿದ ಟೆಕ್ಕಿ ತಾಯಿ

ಅನುಮಾನಾಸ್ಪದ‌ ರೀತಿಯಲ್ಲಿ ವಿದ್ಯಾರ್ಥಿನಿ‌ ಶವ ಪತ್ತೆ

ಬೆಂಗಳೂರು ಗ್ರಾಮಾಂತರ: ಅನುಮಾನಾಸ್ಪದ‌ ರೀತಿಯಲ್ಲಿ ವಿದ್ಯಾರ್ಥಿನಿ‌ ಶವ ಪತ್ತೆಯಾದ ಘಟನೆ ಹೊಸಕೋಟೆ ತಾಲೂಕಿನ ಕಣ್ಣೂರಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೌದು, ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಸಿಕ್ಕಿದ್ದು, ಹಿಮಾ (18 ) ಮೃತ ವಿದ್ಯಾರ್ಥಿನಿ. ಈಕೆ ಮುಳಬಾಗಿಲು ತಾಲೂಕಿನ ನಂಗಲಿ ಮೂಲದ ದ್ವೀತಿಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ಅಜ್ಜಿ ಮನೆಯಲ್ಲಿದ್ದುಕೊಂಡು ಹೊಸಕೋಟೆಯಲ್ಲಿ ವ್ಯಾಸಾಂಗ ಮಾಡುತ್ತದ್ದಳು.

ಅಜ್ಜಿ ಬೆಳಗ್ಗೆ ಹೂವಿನ ವ್ಯಾಪಾರಕ್ಕೆ ಹೋದ ವೇಳೆ ಘಟನೆ

ಹೌದು, ಅಜ್ಜಿ ಬೆಳಗ್ಗೆ ಹೂವಿನ ವ್ಯಾಪಾರಕ್ಕೆ ಹೋದ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಅಜ್ಜಿ ವ್ಯಾಪಾರಕ್ಕೆ ಹೋದ ಕೆಲ ಸಮಯ ಬಳಿಕ ಮೊಮ್ಮಗಳಿಗೆ ಪೋನ್ ಮಾಡಿದ್ದಾರೆ. ಈ ವೇಳೆ ಹಿಮಾ ಕರೆ ಸ್ವೀಕರಿಸಿಲ್ಲ. ಹೀಗಾಗಿ ಪಕ್ಕದ ಮನೆಯವರನ್ನು ಕಳಿಸಿ ನೋಡಿದಾಗ ಮನೆಯಲ್ಲಿ ಶವವಾಗಿ ಪತ್ತೆಯಾಗಿದೆ. ಮಗಳ ಅಕಾಲಿಕ ಸಾವು ಕಂಡು ತಂದೆಯ ಆಕ್ರಂಧನ ಮುಗಿಲುಮುಟ್ಟಿದೆ. ಈ ಕುರಿತು ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:45 pm, Tue, 22 August 23

ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ