ರಾಮನಗರ ವಂಡರ್​ಲಾ ಅಮ್ಯೂಸ್ ಮೆಂಟ್​ ಪಾರ್ಕ್​ನಲ್ಲಿ ದುರ್ಘಟನೆ; ಮೇಲಿಂದ ಬಿದ್ದು ವ್ಯಕ್ತಿ ಸಾವು

ರಾಮನಗರ ತಾಲೂಕಿನ ಬಿಡದಿ ಬಳಿಯಿರುವ ವಂಡರ್​ಲಾ ಅಮ್ಯೂಸ್ ಮೆಂಟ್​ ಪಾರ್ಕ್​​ (Ramanagara Wonderla Amusement Park) ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯು, ಮೇಲಿಂದ ಬಿದ್ದು ಸಾವನ್ನಪ್ಪಿದ್ದ ಧಾರುಣ ಘಟನೆ ನಿನ್ನೆ(ಆ.21) ನಡೆದಿದೆ. ಜಡೇನಹಳ್ಳಿ ನಿವಾಸಿ ರಾಜು(35) ಮೃತ ದುರ್ದೈವಿ. ​

ರಾಮನಗರ ವಂಡರ್​ಲಾ ಅಮ್ಯೂಸ್ ಮೆಂಟ್​ ಪಾರ್ಕ್​ನಲ್ಲಿ ದುರ್ಘಟನೆ; ಮೇಲಿಂದ ಬಿದ್ದು ವ್ಯಕ್ತಿ ಸಾವು
ಮೃತ ವ್ಯಕ್ತಿ
Edited By:

Updated on: Aug 23, 2023 | 5:13 PM

ರಾಮನಗರ, ಆ.22: ಸಾವು ಹೇಗೆ, ಯಾವಾಗ ಬರುತ್ತದೆ ಎಂದು ಹೇಳಲು ಸಾಧ್ಯವೇ ಇಲ್ಲ. ಹೌದು, ರಾಮನಗರ ತಾಲೂಕಿನ ಬಿಡದಿ ಬಳಿಯಿರುವ ವಂಡರ್​ಲಾ ಅಮ್ಯೂಸ್ ಮೆಂಟ್​ ಪಾರ್ಕ್​​ (Ramanagara Wonderla Amusement Park) ನಲ್ಲಿ  ಕೆಲಸ ಮಾಡುವ ವ್ಯಕ್ತಿಯೊಬ್ಬರು ಪಾರ್ಕ್‌ನ ಪಕ್ಕದಲ್ಲಿರುವ ವಂಡರ್‌ಲಾ ಕ್ವಾಟ್ರಸ್‌ನಲ್ಲಿ ಕೆಲಸ ಮಾಡುವ ವೇಳೆ ಮೇಲೆಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ಈ ಘಟನೆ ನಿನ್ನೆ(ಆ.21) ನಡೆದಿದೆ. ಜಡೇನಹಳ್ಳಿ ನಿವಾಸಿ ರಾಜು(35) ಮೃತ ದುರ್ದೈವಿ. ಈ ಕುರಿತು ಬಿಡದಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿನೆ ನಡೆಸಿದ್ದಾರೆ.

ಕಾರು, ಬೈಕ್ ನಡುವೆ ಡಿಕ್ಕಿ; ತಪ್ಪಿದ ಅನಾಹುತ

ಗದಗ: ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾದ ಘಟನೆ ಗದಗ ನಗರದ ದೋಬಿ ಘಾಟ್ ಬಳಿ ನಡೆದಿದೆ. ಪೆಟ್ರೋಲ್ ಬಂಕ್​ನಿಂದ ಕಾರು ಹೊರ ಬರುತ್ತಿದ್ದಾಗ ಬೈಕ್​ ಡಿಕ್ಕಿಯಾಗಿದೆ. ಈ ವೇಳೆ ಕಾರಿನ ನಿಯಂತ್ರಣ ತಪ್ಪಿ, ಡಿವೈಡರ್ ಮೇಲೆ ಕಾರ್ ಹತ್ತಿಸಿ ಪುನಃ ಪೆಟ್ರೋಲ್ ಬಂಕ್ ಒಳಗಡೆ ನುಗ್ಗಿದೆ. ಅಪಘಾತದ ಸಂದರ್ಭದಲ್ಲಿ ಎರಡು ವಾಹನಗಳು ನಿಧಾನವಾಗಿದ್ದರಿಂದ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಈ ದೃಶ್ಯ ಪೆಟ್ರೋಲ್ ಬಂಕ್​ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ:ಯುಎಸ್ ನಲ್ಲಿ ದಾವಣಗೆರೆಯ ಟೆಕ್ಕಿ ಕುಟುಂಬ ಸಾವು, ಸಿದ್ದರಾಮಯ್ಯರನ್ನು ಭೇಟಿಯಾಗಿ ಪಾರ್ಥಿವ ಶರೀರಗಳನ್ನು ತರಿಸಲು ನೆರವಾಗುವಂತೆ ಕೋರಿದ ಟೆಕ್ಕಿ ತಾಯಿ

ಅನುಮಾನಾಸ್ಪದ‌ ರೀತಿಯಲ್ಲಿ ವಿದ್ಯಾರ್ಥಿನಿ‌ ಶವ ಪತ್ತೆ

ಬೆಂಗಳೂರು ಗ್ರಾಮಾಂತರ: ಅನುಮಾನಾಸ್ಪದ‌ ರೀತಿಯಲ್ಲಿ ವಿದ್ಯಾರ್ಥಿನಿ‌ ಶವ ಪತ್ತೆಯಾದ ಘಟನೆ ಹೊಸಕೋಟೆ ತಾಲೂಕಿನ ಕಣ್ಣೂರಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೌದು, ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಸಿಕ್ಕಿದ್ದು, ಹಿಮಾ (18 ) ಮೃತ ವಿದ್ಯಾರ್ಥಿನಿ. ಈಕೆ ಮುಳಬಾಗಿಲು ತಾಲೂಕಿನ ನಂಗಲಿ ಮೂಲದ ದ್ವೀತಿಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ಅಜ್ಜಿ ಮನೆಯಲ್ಲಿದ್ದುಕೊಂಡು ಹೊಸಕೋಟೆಯಲ್ಲಿ ವ್ಯಾಸಾಂಗ ಮಾಡುತ್ತದ್ದಳು.

ಅಜ್ಜಿ ಬೆಳಗ್ಗೆ ಹೂವಿನ ವ್ಯಾಪಾರಕ್ಕೆ ಹೋದ ವೇಳೆ ಘಟನೆ

ಹೌದು, ಅಜ್ಜಿ ಬೆಳಗ್ಗೆ ಹೂವಿನ ವ್ಯಾಪಾರಕ್ಕೆ ಹೋದ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಅಜ್ಜಿ ವ್ಯಾಪಾರಕ್ಕೆ ಹೋದ ಕೆಲ ಸಮಯ ಬಳಿಕ ಮೊಮ್ಮಗಳಿಗೆ ಪೋನ್ ಮಾಡಿದ್ದಾರೆ. ಈ ವೇಳೆ ಹಿಮಾ ಕರೆ ಸ್ವೀಕರಿಸಿಲ್ಲ. ಹೀಗಾಗಿ ಪಕ್ಕದ ಮನೆಯವರನ್ನು ಕಳಿಸಿ ನೋಡಿದಾಗ ಮನೆಯಲ್ಲಿ ಶವವಾಗಿ ಪತ್ತೆಯಾಗಿದೆ. ಮಗಳ ಅಕಾಲಿಕ ಸಾವು ಕಂಡು ತಂದೆಯ ಆಕ್ರಂಧನ ಮುಗಿಲುಮುಟ್ಟಿದೆ. ಈ ಕುರಿತು ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:45 pm, Tue, 22 August 23

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us