AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಕೊಂಡೋತ್ಸವ ವೇಳೆ ಆಯತಪ್ಪಿ ಅಗ್ನಿಕೊಂಡಕ್ಕೆ ಬಿದ್ದ ಅರ್ಚಕ

ದೇವಸ್ಥಾನದ ಅರ್ಚಕ ಕೊಂಡ ಹಾಯುವ ವೇಳೆಯಲ್ಲಿ ಆಯತಪ್ಪಿ ಅಗ್ನಿಕೊಂಡಕ್ಕೆ ಬಿದ್ದಿರುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ರಾಮನಗರ: ಕೊಂಡೋತ್ಸವ ವೇಳೆ ಆಯತಪ್ಪಿ ಅಗ್ನಿಕೊಂಡಕ್ಕೆ ಬಿದ್ದ ಅರ್ಚಕ
ರಾಮನಗರದಲ್ಲಿ ಆಯತಪ್ಪಿ ಅಗ್ನಿಕೊಂಡಕ್ಕೆ ಬಿದ್ದ ಅರ್ಚಕ
ಕಿರಣ್ ಹನುಮಂತ್​ ಮಾದಾರ್
|

Updated on:Apr 12, 2023 | 10:18 AM

Share

ರಾಮನಗರ: ದೇವಸ್ಥಾನದ ಅರ್ಚಕ ಕೊಂಡ ಹಾಯುವ ವೇಳೆಯಲ್ಲಿ ಆಯತಪ್ಪಿ ಅಗ್ನಿಕೊಂಡಕ್ಕೆ ಬಿದ್ದಿರುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪುಟ್ಟಸ್ವಾಮಿ ಗಾಯಗೊಂಡ ಅರ್ಚಕ. ಗ್ರಾಮದ ಶ್ರೀ ವೀರಭದ್ರ ಸ್ವಾಮಿಯ ಕೊಂಡೋತ್ಸವದ ವೇಳೆ ಅರ್ಚಕ ಆಯತಪ್ಪಿ ಬಿದ್ದಿದ್ದು, ತಕ್ಷಣವೇ ಅರ್ಚಕರನ್ನ ಭಕ್ತರು ಮೇಲೆತ್ತುಕೊಂಡಿದ್ದಾರೆ. ಅಗ್ನಿಕೊಂಡಕ್ಕೆ ಬಿದ್ದ ಹಿನ್ನೆಲೆ ಆರ್ಚಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಳೆದ ಹಲವು ವರ್ಷಗಳಿಂದ ಶ್ರೀ ವೀರಭದ್ರ ಸ್ವಾಮಿಯ ಕೊಂಡ ಹಾಯುವ ಕಾರ್ಯಕ್ರಮ ನಡೆದು ಬಂದಿದ್ದು, ಹಲವು ವರ್ಷಗಳಿಂದ ಅರ್ಚಕ ಪುಟ್ಟಸ್ವಾಮಿ ಕೊಂಡ ಹಾಯುತ್ತಿದ್ದರು. ಆದರೆ ಈ ಬಾರಿ ಇಂತಹ ಅಚಾತುರ್ಯ ನಡೆದಿದ್ದು ಸದ್ಯ ಪುಟ್ಟಸ್ವಾಮಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:ನಿರ್ಮಾಣ ಹಂತದ ದೇವಾಲಯಕ್ಕೆ ಕಿಡಿಗೇಡಿಗಳಿಂದ ಬೆಂಕಿ; ಸುಟ್ಟು ಭಸ್ಮವಾದ ದೇವರ ಫೋಟೋ, ಪೂಜಾ ವಸ್ತುಗಳು

ಈ ಹಿಂದೆ ಕೂಡ ಜಿಲ್ಲೆಯಲ್ಲಿ ಅಗ್ನಿಕೊಂಡಕ್ಕೆ ಬಿದ್ದಿದ್ದ ಅರ್ಚಕ

ಹೌದು ಈ ಹಿಂದೆ ಕೂಡ 2022 ಮಾರ್ಚ್​ 26ರಂದು ಕೊಂಡ ಹಾಯುವಾಗ ಕೊಂಡಕ್ಕೆ ಬಿದ್ದು, ಅರ್ಚಕರು ಗಾಯಗೊಂಡ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಗ್ರಾಮದೇವತೆ ಪಟ್ಟಲ್ಲದಮ್ಮದೇವಿಯ ಕೊಂಡೋತ್ಸವದ ವೇಳೆ ನಡೆದಿತ್ತು. ಅರ್ಚಕ ರಾಜುವಿಗೆ ಗಂಭೀರ ಗಾಯವಾಗಿದ್ದು ತಕ್ಷಣ ಕೊಂಡದಿಂದ ಭಕ್ತರು ಮೇಲಿತ್ತಿದ್ದರು. ಬಳಿಕ ಚನ್ನಪಟ್ಟಣದ ಖಾಸಗಿ ಆಸ್ಪತ್ರೆಗೆ ಅರ್ಚಕರನ್ನು ದಾಖಲಿಸಲಾಗಿ ಚಿಕಿತ್ಸೆ ನೀಡಲಾಗಿತ್ತು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:17 am, Wed, 12 April 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ