AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರದಲ್ಲಿ ಸಿದ್ದರಾಮೇಶ್ವರ ಬೆಟ್ಟದ ಕೊಳಕ್ಕೆ ಹಾರಿ ಯುವಕ ಆತ್ಮಹತ್ಯೆ!

ಅಜಿತ್ ತಡರಾತ್ರಿ ಮನೆಯಿಂದ ಹೋಗಿದ್ದ. ಪೋಷಕರು ನಾಪತ್ತೆ ದೂರಿನ ಹಿನ್ನೆಲೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಟವರ್ ಲೊಕೇಷನ್ ಆಧಾರದ ಮೇಲೆ ಮೃತದೇಹವನ್ನು ಪತ್ತೆ ಮಾಡಲಾಗಿದೆ.

ರಾಮನಗರದಲ್ಲಿ ಸಿದ್ದರಾಮೇಶ್ವರ ಬೆಟ್ಟದ ಕೊಳಕ್ಕೆ ಹಾರಿ ಯುವಕ ಆತ್ಮಹತ್ಯೆ!
ಅಜಿತ್
TV9 Web
| Edited By: sandhya thejappa|

Updated on:Feb 13, 2022 | 11:13 AM

Share

ರಾಮನಗರ: ಬೆಟ್ಟದ ಕೊಳಕ್ಕೆ ಹಾರಿ ಯುವಕನೊಬ್ಬ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ರಾಮನಗರ (Ramanagara) ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬೇವೂರು ಗ್ರಾಮದ ಬಳಿ ನಡೆದಿದೆ. ಸಿದ್ದರಾಮೇಶ್ವರ ಬೆಟ್ಟದ ಕೊಳಕ್ಕೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಜಿತ್ ತಡರಾತ್ರಿ ಮನೆಯಿಂದ ಹೋಗಿದ್ದ. ಪೋಷಕರು ನಾಪತ್ತೆ ದೂರಿನ ಹಿನ್ನೆಲೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಟವರ್ ಲೊಕೇಷನ್ ಆಧಾರದ ಮೇಲೆ ಮೃತದೇಹವನ್ನು ಪತ್ತೆ ಮಾಡಲಾಗಿದೆ. ಸದ್ಯ ಈ ಪ್ರಕರಣ ಎಮ್ಕೆ ದೊಡ್ಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಡಿವೈಡರ್​ಗೆ ಡಿಕ್ಕಿ, ವಿಕಲಚೇತನ ಸಾವು: ಕಾರವಾರ: ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು ಓರ್ವ ವಿಕಲಚೇತನ ಸಾವನ್ನಪ್ಪಿದ್ದಾರೆ. ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ಘಟನೆ ಸಂಭವಿಸಿದೆ. ನಿಜಾಮುದ್ದಿನ್ (36) ಮೃತ ದುರ್ದೈವಿ. ನಿಯಂತ್ರಣ ತಪ್ಪಿದ ಕಾರು ಆಕಳಿಗೆ ಗುದ್ದಿದೆ. ಬಳಿಕ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ನಿಜಾಮುದ್ದಿನ್ ಹಾಗೂ ಅವರ ಸ್ನೇಹಿತ ಅಬಕಾರಿ ಇಲಾಖೆ ಜಪ್ತಿ ವಾಹನಗಳ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಹೋರಟಿದ್ದರು. ಈ ವೇಳೆ ಅಪಘಾತ ನಡೆದಿದೆ. ಕಾರು ಚಾಲಕ ಅಶೋಕ ಖೇಣಿಗೆ ಸಣ್ಣ ಪುಟ್ಟಗಾಯಗಳಾಗಿವೆ.

ಪತಿಯಿಂದ ಪತ್ನಿ ಹತ್ಯೆ: ಮೈಸೂರು: ಮಾನಸಿಕ ಖಿನ್ನತೆಗೊಳಗಾಗಿದ್ದ ಪತಿ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಉಸಿರುಗಟ್ಟಿಸಿ ಪತ್ನಿ ಸಂಧ್ಯಾ ಎಂಬುವವರನ್ನು ಪತಿ ಕಿರಣ್ ಹತ್ಯೆಗೈದಿದ್ದಾನೆ. ಜೋಡಿ ನಾಲ್ಕು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಕಿರಣ್ ಮಾನಸಿಕ ಖಿನ್ನತೆಗೊಳಗಾಗಿದ್ದ. ಮೂರು ತಿಂಗಳಿನಿಂದ ಪುನರ್ವಸತಿ ಕೇಂದ್ರದಲ್ಲಿದ್ದು ಬಂದಿದ್ದ. ಗಂಡ ಹೆಂಡತಿ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದೆ. ಪತ್ನಿ ಮೇಲೆ ಹಲ್ಲೆ ನಡೆಸಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಉದಯಗಿರಿ ಪೊಲೀಸರು ಕಿರಣ್ನ ವಶಕ್ಕೆ ಪಡೆದಿದ್ದಾರೆ. ಸದ್ಯ ಈ ಪ್ರಕರಣ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದಾಖಲುಲಾಗಿದೆ.

ಖಾಸಗಿ‌ ಬಸ್ ಮರಕ್ಕೆ ಡಿಕ್ಕಿ: ಕೋಲಾರ: ಪಾರ್ಶ್ವಗಾನಹಳ್ಳಿ ಗ್ರಾಮದ‌ ಬಳಿ‌ ಖಾಸಗಿ‌ ಬಸ್ ಮರಕ್ಕೆ ಡಿಕ್ಕಿಯಾಗಿ ಸುಮಾರು 20 ಮಂದಿಗೆ ಗಾಯವಾಗಿದೆ. ಕೋಲಾರ ಹೊರವಲಯದ ಪ್ಲಿಪ್ ಕಾರ್ಟ್ ಕಂಪನಿಗೆ  ಸೇರಿದ್ದ ಬಸ್, ಕೆಲಸ ನಿರ್ಮಿತ ತೆರಳುತ್ತಿದ್ದರು. ಚಾಲಕನ‌ ಅಜಾಗರೂಕತೆಯಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ

IPL 2022 Auction: ಇತ್ತ ಆರ್​ಸಿಬಿ ಹರಾಜಿನಲ್ಲಿ ಖರೀದಿಸಿದ ಬೆನ್ನಲ್ಲೇ ಅತ್ತ ಸ್ಫೋಟಕ ಶತಕ ಸಿಡಿಸಿ ಅಬ್ಬರಿಸಿದ ಸ್ಟಾರ್ ಬ್ಯಾಟರ್

ಇಂದು ಹೈದರಾಬಾದ್​ಗೆ ಭೇಟಿ ನೀಡಲಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್​; ಶ್ರೀ ರಾಮಾನುಜಾಚಾರ್ಯರ ಚಿನ್ನದ ಪ್ರತಿಮೆ ಅನಾವರಣ

Published On - 10:41 am, Sun, 13 February 22

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ