AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಾಯ ಮೀರಿ ಶೇ.216ರಷ್ಟು ಆಸ್ತಿ ಗಳಿಕೆ: ರಾಮನಗರ ‌ಉಪವಿಭಾಗಾಧಿಕಾರಿ ಸೇವೆಯಿಂದ ಅಮಾನತು

ಎಸಿ ಮಂಜುನಾಥ್ ಮನೆ, ಫಾರ್ಮ್‌ಹೌಸ್, ಕಚೇರಿ ಮೇಲೆ 2022ರ ಮಾರ್ಚ್ 16ರಂದು ಎಸಿಬಿ ಅಧಿಕಾರಿಗಳಿಂದ ಏಕಕಾಲದಲ್ಲಿ ದಾಳಿ ನಡೆದಿತ್ತು. ಈ ವೇಳೆ ಅಕ್ರಮ ಆಸ್ತಿ ಸಂಬಂಧ ದಾಖಲೆ ಸಿಕ್ಕಿದ್ದ ಹಿನ್ನಲೆ ಮಂಜುನಾಥ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಆದಾಯ ಮೀರಿ ಶೇ.216ರಷ್ಟು ಆಸ್ತಿ ಗಳಿಕೆ: ರಾಮನಗರ ‌ಉಪವಿಭಾಗಾಧಿಕಾರಿ ಸೇವೆಯಿಂದ ಅಮಾನತು
ರಾಮನಗರ ಉಪವಿಭಾಗಾಧಿಕಾರಿ ಮಂಜುನಾಥ ಅಮಾನತು
Rakesh Nayak Manchi
|

Updated on: Mar 20, 2023 | 7:35 PM

Share

ರಾಮನಗರ: ಆದಾಯ ಮೀರಿ ಆಸ್ತಿ ಗಳಿಕೆ (Asset accumulation beyond income) ಮಾಡಿರುವುದು ಪತ್ತೆಯಾದ ಹಿನ್ನೆಲೆ ರಾಮನಗರ ‌ಉಪವಿಭಾಗಾಧಿಕಾರಿ (Ramanagara Sub-Divisional) ಮಂಜುನಾಥ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧೀನ ಕಾರ್ಯದರ್ಶಿ ಉಮಾದೇವಿ ಅವರು ಆದೇಶ ಹೊರಡಿಸಿದ್ದಾರೆ. ಎಸಿಬಿ (ಸದ್ಯ ರಾಜ್ಯದಲ್ಲಿ ACB ರದ್ದುಗೊಳಿಸಲಾಗಿದೆ) ವರದಿ ಆಧರಿಸಿ ರಾಮನಗರ ‌ಉಪವಿಭಾಗಾಧಿಕಾರಿ ಮಂಜುನಾಥ್ ಅವರನ್ನು ಅಮಾನತು ಮಾಡಲಾಗಿದೆ.

2022ರ ಮಾರ್ಚ್ 16ರಂದು ಎಸಿಬಿ ಅಧಿಕಾರಿಗಳು ಎಸಿ ಮಂಜುನಾಥ್ ಮನೆ, ಫಾರ್ಮ್‌ಹೌಸ್, ಕಚೇರಿ ಮೇಲೆ ದಾಳಿ ಏಕಕಾಲದಲ್ಲಿ ದಾಳಿ ನಡೆಸಿದ್ದರು. ಈ ವೇಳೆ ಆದಾಯ ಮೀರಿ ಆಸ್ತಿ ಸಂಪಾದನೆ ಮಾಡಿರುವುದಕ್ಕೆ ದಾಖಲೆ ಲಭ್ಯವಾಗಿದ್ದವು. ಆದಾಯಕ್ಕಿಂತ ಶೇ.216ರಷ್ಟು ಅಕ್ರಮ ಆಸ್ತಿ ಪತ್ತೆಯಾದ ಬಗ್ಗೆ ಸರ್ಕಾರಕ್ಕೆ ಎಸಿಬಿ ವರದಿ ಸಲ್ಲಿಸಲಾಗಿತ್ತು. ಈ ವರದಿಯಾಧರಿಸಿ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧೀನ ಕಾರ್ಯದರ್ಶಿಯವರು ಮಂಜುನಾಥ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ.

ಇದನ್ನೂ ಓದಿ: ಮಾಡಾಳ್ ವಿರೂಪಾಕ್ಷಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿಸಿದ್ದೇ ಜಿಎಂ ಸಿದ್ದೇಶ್ವರ್​: ಹೊಸ ಬಾಂಬ್​ ಸಿಡಿಸಿದ ಶಾಮನೂರ ಶಿವಶಂಕರಪ್ಪ

ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ಮಂಜುನಾಥ್ ನಿವಾಸದ ಮೇಲೆ ಮಾತ್ರವಲ್ಲದೆ ಇತರೆ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದ್ದವು. ರಾಮನಗರದಲ್ಲಿರುವ ಸರ್ಕಾರಿ ಕಚೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಅವರಿಗೆ ಸಂಬಂಧಿಸಿದ ಸ್ಥಿರಾಸ್ತಿಗಳ ಮೇಲೆ ದಾಳಿ ನಡೆಸಲಾಗಿತ್ತು. ಈ ವೇಳೆ ವಶಕ್ಕೆ ಪಡೆದಿದ್ದ ಆಸ್ತಿ ದಾಖಲೆಗಳ ಬಗ್ಗೆ ತನಿಖೆ ನಡೆಸಿದಾಗ ಆದಾಯ ಮೀರಿ ಭಾರೀ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವುದು ಬೆಳಕಿಗೆ ಬಂದಿತ್ತು.

ಬೆಂಗಳೂರು ನಗರದ ಜಿಕೆವಿಕೆ ಬಳಿ ಇರುವ ಮಂಜುನಾಥ್​ಗೆ ಸೇರಿದ 27 ಕುಂಟೆ ಆಸ್ತಿ (7 ಬ್ಯಾಡ್ಮಿಂಟನ್ ಕ್ರೀಡಾಂಗಣ ಒಳಗೊಂಡ), ಸಹಕಾರ ನಗರದಲ್ಲಿ 2 ಕೋಟಿ ಅಂದಾಜಿನ ಮನೆ, ದೊಡ್ಡಬಳ್ಳಾಪುರದ ದೊಡ್ಡ ತುಮಕೂರು ಗ್ರಾಮದ ಬಳಿ ಫಾರ್ಮ್​ಹೌಸ್ ಪತ್ತೆಯಾಗಿತ್ತು. ಇಲ್ಲಿ ನಡೆದ ದಾಳಿ ವೇಳೆ ಚಿನ್ನಾಭರಣಗಳು, ಎರಡು ಐಷಾರಾಮಿ ಕಾರುಗಳು ಪತ್ತೆಯಾಗಿದ್ದವು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ
ಸಿಎಂ, ಡಿಸಿಎಂ ಮತ್ತು ಹೆಚ್​ಎಂ ನಾಡಿನ ಬೇಷರತ್ ಕ್ಷಮೆ ಕೇಳಬೇಕು: ಸುರೇಶ್
ಸಿಎಂ, ಡಿಸಿಎಂ ಮತ್ತು ಹೆಚ್​ಎಂ ನಾಡಿನ ಬೇಷರತ್ ಕ್ಷಮೆ ಕೇಳಬೇಕು: ಸುರೇಶ್