AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿವೈಡರ್​ಗೆ ಗುದ್ದಿ ಗಾಳಿಯಲ್ಲಿ 3 ಬಾರಿ ಪಲ್ಟಿ ಹೊಡೆದ ಕಾರು: ಚಾಲಕನ ಪ್ರಾಣ ಉಳಿಸಿದ ಸೀಟ್​ ಬೆಲ್ಟ್​

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕಾರು ಡಿವೈಡರ್​ಗೆ ಗುದ್ದಿ ಗಾಳಿಯಲ್ಲಿ ಮೂರು ಬಾರಿ ಪಲ್ಟಿ ಹೊಡೆದಿದೆ. ಕಾರು ಚಾಲಕ ಸೀಟ್​ ಬೆಲ್ಟ್​ ಧರಿಸಿದ್ದರಿಂದ ಪ್ರಾಣ ಉಳಿದಿದೆ. ಕಾರಿನ ಏರ್ ಬ್ಯಾಗ್ ಎಲ್ಲವೂ ಓಪನ್ ಆಗಿದೆ. ಇದರಿಂದ ಚಿಕ್ಕ ಗಾಯವಿಲ್ಲದೆ ಯವಕ ಬಚಾವ್​ ಆಗಿದ್ದಾನೆ.

ಡಿವೈಡರ್​ಗೆ ಗುದ್ದಿ ಗಾಳಿಯಲ್ಲಿ 3 ಬಾರಿ ಪಲ್ಟಿ ಹೊಡೆದ ಕಾರು: ಚಾಲಕನ ಪ್ರಾಣ ಉಳಿಸಿದ ಸೀಟ್​ ಬೆಲ್ಟ್​
ನುಜ್ಜುಗುಜ್ಜಾದ ಕಾರು
TV9 Web
| Edited By: |

Updated on: Dec 11, 2023 | 4:22 PM

Share

ರಾಮನಗರ, ಡಿಸೆಂಬರ್​​ 11: ಕಾರು ಚಲಾಯಿಸುವಾಗ ಕಡ್ಡಾಯವಾಗಿ ಸೀಟ್​ ಬೆಲ್ಟ್ (Seat Belt)​​ ಧರಿಸಿ ಎಂದು ಸಂಚಾರಿ ಪೊಲೀಸರು (Traffic Police) ಜಾಗೃತಿ ಮೂಡಿಸುತ್ತಿದ್ದಾರೆ. ಆದರೂ ಕೂಡ ಸೀಟ್​ ಬೆಲ್ಟ್​​ ಧರಿಸದೆ ಅನೇಕರು ವಾಹನ ಚಲಾಯಿಸುತ್ತಿದ್ದು, ಇದರಿಂದ ಅಪಘಾತದ ಸಂದರ್ಭದಲ್ಲಿ ಪ್ರಾಣ ಹೋಗುವ ಸಾಧ್ಯತೆ ಇರುತ್ತದೆ. ಈ ಪ್ರಕರಣದಲ್ಲಿ ಯುವಕ ಸಂಚಾರಿ ನಿಯಮ ಪಾಲಿಸಿದ್ದರಿಂದ ಪ್ರಾಣ ಉಳಿದಿದೆ. ಹೌದು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ (Bengaluru-Mysore Highway) ಕಾರು ಡಿವೈಡರ್​ಗೆ ಗುದ್ದಿ ಗಾಳಿಯಲ್ಲಿ ಮೂರು ಬಾರಿ ಪಲ್ಟಿ ಹೊಡೆದಿದೆ. ಕಾರು ಚಾಲಕ ಸೀಟ್​ ಬೆಲ್ಟ್​ ಧರಿಸಿದ್ದರಿಂದ ಪ್ರಾಣ ಉಳಿದಿದೆ. ಕಾರಿನ ಏರ್ ಬ್ಯಾಗ್ ಎಲ್ಲವೂ ಓಪನ್ ಆಗಿದೆ.

ಇದರಿಂದ ಚಿಕ್ಕ ಗಾಯವಿಲ್ಲದೆ ಯವಕ ಬಚಾವ್​ ಆಗಿದ್ದಾನೆ. ಕಾರಿನ ಅವಸ್ಥೆ ನೋಡಿದರೇ ಚಾಲಕ ಬದುಕಿದ್ದೇ ಪವಾಡ ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಿದ್ದಾರೆ. ಬೆಂಗಳೂರಿನಿಂದ ಮೈಸೂರಿಗೆ ಓರ್ವ ಯುವಕ ಕಾರಿನಲ್ಲಿ ಹೊರಟಿದ್ದನು. ದಾರಿ ಮಧ್ಯೆ ಕಾರಿನ ಟೈರ್ ಬ್ಲಾಸ್ಟ್ ಆಗಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ನಿಯ ಡಿವೈಡರ್​ಗೆ ಗುದ್ದಿದೆ. ಹೆದ್ದಾರಿ ಡಿವೈಡರ್ ಕೂಡ ಪೀಸ್ ಪೀಸ್ ಆಗಿದ್ದು, ಸೂಚನಾ ಫಲಕ ಸರ್ವೀಸ್ ರಸ್ತೆಗೆ ಬಿದ್ದಿದೆ. ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

KSRTC ಬಸ್​ಗೆ ಬೈಕ್​ ಡಿಕ್ಕಿ; ಹೆಲ್ಮೆಟ್ ಹಾಕಿದ್ದರಿಂದ ಬೈಕ್ ಸವಾರ ಬಚಾವ್

ತುಮಕೂರು: ಸರ್ಕಾರಿ ಬಸ್​ಗೆ ಬೈಕ್ ಡಿಕ್ಕಿ ಹೊಡೆದ ಘಟನೆ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ. ಹೆಲ್ಮೆಟ್ ಹಾಕಿದ್ದರಿಂದ ಬೈಕ್ ಸವಾರ ಬಚಾವ್ ಆಗಿದ್ದಾನೆ. ಯುವಕರ ತಂಡ ಬೈಕ್​ಗಳಲ್ಲಿ ಲಾಂಗ್ ಡ್ರೈವ್ ಹೊರಟಿತ್ತು. ಈ ವೇಳೆ ಒಂದು ಬೈಕ್ ಬಸ್​ಗೆ ಡಿಕ್ಕಿ ಹೊಡೆದಿದೆ. ಬಸ್​ಗೆ ಬೈಕ್‌ ಡಿಕ್ಕಿ ಹೊಡೆದಿರುವ ವಿಡಿಯೋ ವೈರಲ್ ಆಗಿದೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಉತ್ತರಕನ್ನಡ: ಕೆಎಸ್​ಆರ್​ಸಿಟಿ ಬಸ್​​​​-ಕಾರು ಮಧ್ಯೆ ಭೀಕರ ಅಪಘಾತ, ಐವರು ದುರ್ಮರಣ

ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತ

ಆನೇಕಲ್: ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬನ್ನೇರುಘಟ್ಟ ಮುಖ್ಯರಸ್ತೆಯ ಕೋಳಿಫಾರಂ ಗೇಟ್ ಬಳಿ ನಡೆದಿದೆ. ಪುಟ್ಟೇನಹಳ್ಳಿ ನಿವಾಸಿ ಸತ್ಯೇಂದ್ರ ಸಿಂಗ್ ಮೃತ ದುರ್ದೈವಿ. ಸಿಮೆಂಟ್ ಮಿಕ್ಸರ್ ಲಾರಿ ವೀವರ್ಸ್ ಕಾಲೋನಿಯಿಂದ ಕೋಳಿ ಫಾರಂ ಗೇಟ್ ಕಡೆಗೆ ಬರುತ್ತಿತ್ತು. ಕೋಳಿ ಫಾರಂ ಗೇಟ್​ ನಿಂದ ವೀವರ್ಸ್ ಕಾಲೋನಿ ಕಡೆಗೆ ಬೈಕ್ ಸವಾರ ಹೊರಟಿದ್ದನು. ಅತಿ ವೇಗವಾಗಿ ಬಂದ ಕಾರಣ, ಲಾರಿ ಚಾಲಕನ ನಿಯಂತ್ರಣ ತಪ್ಪಿ ಮೊದಲು ಬೈಕ್ ಸವಾರನಿಗೆ ಗುದ್ದಿದೆ. ಇದರಿಂದ ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಬಳಿಕ ಲಾರಿ ಅಂಗಡಿಗಳ ಮೇಲೆ ಉರುಳಿ ಬಿದ್ದಿದೆ. ಅಂಗಡಿಗಳಲ್ಲಿನ ವಸ್ತುಗಳು ಧ್ವಂಸಗೊಂಡಿವೆ. ಕುಮಾರಸ್ವಾಮಿ ಸಂಚಾರಿ ಪೊಲೀಸರು‌ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್