AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರದಲ್ಲಿ ಅಮಾನುಷ ಕೃತ್ಯ: ಅತ್ಯಾಚಾರ ಎಸಗಿ ಮೂಕ ಬಾಲಕಿ ಕೊಲೆ ಆರೋಪ

ರಾಮನಗರ ತಾಲೂಕಿನ ಭದ್ರಾಪುರ ಗ್ರಾಮದ 14 ವರ್ಷದ ವಿಕಲಚೇತನ ಬಾಲಕಿಯನ್ನು ಹತ್ಯೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಾಲಕಿ ಸಾವಿನ ಸುತ್ತ ಅನುಮಾನ ಹುತ್ತ ಬೆಳದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ನಡುವೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಗ್ರಾಮಕ್ಕೆ ಭೇಟಿ ನೀಡಿ ಮೃತ ಬಾಲಕಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಏನಿದು ಪ್ರಕರಣ? ಇಲ್ಲಿದೆ ವಿವರ.

ರಾಮನಗರದಲ್ಲಿ ಅಮಾನುಷ ಕೃತ್ಯ: ಅತ್ಯಾಚಾರ ಎಸಗಿ ಮೂಕ ಬಾಲಕಿ ಕೊಲೆ ಆರೋಪ
ಮೃತ ಖುಷಿ
ಪ್ರಶಾಂತ್​ ಬಿ.
| Edited By: |

Updated on:May 14, 2025 | 7:35 PM

Share

ರಾಮನಗರ, ಮೇ 14: ರವಿವಾರ (ಮೇ.11) ರಂದು ರಾಮನಗರ (Ramnagar) ತಾಲೂಕಿನ ಭದ್ರಾಪುರ ಗ್ರಾಮದ ಹಕ್ಕಿಪಿಕ್ಕಿ ಕಾಲೋನಿಯ ವಿಕಲಚೇತನ ಬಾಲಕಿ ಖುಷಿ (14 ವರ್ಷ) ನಾಪತ್ತೆಯಾಗಿದ್ದರು. ಮರುದಿನ ಸೋಮವಾರ (ಮೇ.12) ರಂದು ಖುಷಿಯ ಶವ ಭದ್ರಾಪುರ ಗ್ರಾಮ ಸಮೀಪದ ರೈಲು ಹಳಿ ಪಕ್ಕದಲ್ಲಿ ಪತ್ತೆಯಾಗಿತ್ತು. ಖುಷಿ ಕುಟುಂಬಸ್ಥರು ಬಾಲಕಿಯನ್ನು ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಬಿಡದಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಇನ್ನು, ಖುಷಿ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಕುಟುಂಬಸ್ಥರು ಶಂಕೆ ವ್ಯಕ್ಯಪಡಿಸಿದ ಹಿನ್ನೆಲೆಯಲ್ಲಿ ಪೊಲೀಸರು ಕೆಲ ಸಾಕ್ಷ್ಯಗಳನ್ನ ಎಫ್ಎಸ್​ಎಲ್​ಗೆ ಕಳುಹಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ. ಅಲ್ಲದೆ, ಕೆಲವು ಸಂಶಯಾಸ್ಪದ ವ್ಯಕ್ತಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಕಲಚೇತನ ಬಾಲಕಿ ಖುಷಿಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಆರೋಪಿಗಳನ್ನು ಗಲ್ಲಿಗೇರಿಸಬೇಕೆಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಘಟನೆಯನ್ನು ಖಂಡಿಸಿ ರಾಮನಗರದಲ್ಲಿ ಭದ್ರಾಪುರ ಗ್ರಾಮಸ್ಥರು ಬೃಹತ್ ಪ್ರತಿಭಟನೆ ನಡೆಸಿ ಆರೋಪಿಗಳನ್ನ ಶೀಘ್ರ ಬಂಧಿಸಿ ಗಲ್ಲಿಗೇರಿಸುವಂತೆ ಒತ್ತಾಯಿಸಿದರು. ಈ ಹಿನ್ನೆಲೆಯಲ್ಲಿ ರಾಜ್ಯ ಎಸ್ಸಿ-ಎಸ್ಟಿ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ.ಜಿ ಗ್ರಾಮಕ್ಕೆ ಹಾಗೂ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ಧೈರ್ಯ ತುಂಬಿದರು. ಸರ್ಕಾರದಿಂದ ನ್ಯಾಯಕೊಡಿಸುವ ಭರವಸೆ ನೀಡಿದರು.

ಇದನ್ನೂ ಓದಿ
Image
ಆತ್ಮ ಓಡಿಸುತ್ತೇನೆಂದು ಹೋಟೆಲ್​ನಲ್ಲಿ ಪೂಜೆ: ಮಹಿಳೆಗೆ 5 ಲಕ್ಷ ರೂ. ವಂಚನೆ
Image
ಮಗನಿಂದಲೇ ಹತ್ಯೆಯಾದ ಉದ್ಯಮಿ: ವಿದ್ಯುತ್ ಶಾಕ್ ಕಥೆ ಕಟ್ಟಿ ಸಿಕ್ಕಿಬಿದ್ದ
Image
ಕೊಪ್ಪಳದಲ್ಲಿ ಟಾಟಾ ಏಸ್​ ವಾಹನ ಪಲ್ಟಿಯಾಗಿ ನರೇಗಾ ಕಾರ್ಮಿಕರಿಗೆ ಗಾಯ
Image
ಹಾಸನದ ಕಲ್ಲಹಳ್ಳಿ ಬಳಿಯ ಪ್ರಪಾತದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಈ ವಿಚಾರ ತಿಳಿದ ಬುಧವಾರ (ಮೇ.14) ಗ್ರಾಮಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಕುಟಂಬಸ್ಥರಿಗೆ ಪರಿಹಾರದ ಚೆಕ್ ವಿತರಣೆ ಮಾಡಿ, ಸೂಕ್ತ ತನಿಖೆ ನಡೆಸಿ ಬಾಲಕಿಯ ಸಾವಿಗೆ ನ್ಯಾಯ ಒದಗಿಸುವ ಭರವಸೆ ನೀಡಿದರು.

ಪ್ರಕರಣ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ನಾಪತ್ತೆಯಾಗಿದ್ದ ಬಾಲಕಿ ರೈಲು ಹಳಿ ಪಕ್ಕದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೇಲ್ನೋಟಕ್ಕೆ ಮಾರಣಾಂತಿಕವಾಗಿ ಹಲ್ಲೆ ಮಾಡಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಕೊಲೆ ಕೇಸ್ ಸಾಕಷ್ಟು ಅನುಮಾನಸ್ಪದವಾಗಿದೆ. ನಾನು ಕುಟುಂಬಸ್ಥರ ಬಳಿ ಮಾಹಿತಿ ಪಡೆದಿದ್ದೇನೆ. ಈ ಬಗ್ಗೆ ಎಲ್ಲ ಆಯಾಮಗಳಲ್ಲೂ ತನಿಖೆ ಆಗುತ್ತಿದೆ ಎಂದರು.

ಇದನ್ನೂ ಓದಿ: ಶೆಡ್​ನಲ್ಲಿ ಬಾಲಕನ ಮೇಲೆ ಹಲ್ಲೆ ಮಾಡಿ ಚರಂಡಿಗೆ ಎಸೆದ ಆರೋಪಿಗಳು ಅರೆಸ್ಟ್​

ಕೆಲ ಸಾಕ್ಷ್ಯಗಳನ್ನ ಎಫ್ಎಸ್ಎಲ್​ಗೆ ಕಳುಹಿಸಲಾಗಿದೆ. ವಿಶೇಷಚೇತನ ಬಾಲಕಿ ಹಕ್ಕಿಪಿಕ್ಕಿ ಜನಾಂಗಕ್ಕೆ ಸೇರಿದವರಾಗಿದ್ದಾರೆ. ಬಾಲಕಿ ತಾಯಿ ಮತ್ತು ಸಹೋದರಿ ಬಳಿ ಮಾತನಾಡಿದ್ದೇನೆ.  ನ್ಯಾಯ ಕೊಡಿಸುವ ಜವಾಬ್ದಾರಿ ನಮ್ಮದು. ಎಲ್ಲಾ ಆಯಾದಲ್ಲೂ ತನಿಖೆ ಮಾಡಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಅಂತ್ಯಸಂಸ್ಕಾರಕ್ಕೆ ಪರಿಹಾರ ಕೊಡುವ ಕೆಲಸ ಮಾಡಿದ್ದೇವೆ. ಅತ್ಯಾಚಾರ ಆಗಿದೆಯಾ? ಇಲ್ಲವಾ? ಎಂಬುದು ಎಫ್ಎಸ್​ಎಲ್​ ವರದಿ ಬಂದ ಬಳಿಕ ಗೊತ್ತಾಗಲಿದೆ ಎಂದು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:30 pm, Wed, 14 May 25

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ