AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಂಡಿ ತೆಗೆಯುತ್ತಿದ್ದ ವೇಳೆ ಮಠದ ಜಮೀನಿನಲ್ಲಿ ಪ್ರಾಚೀನ ಕಾಲದ ವಸ್ತುಗಳು ಪತ್ತೆ, ಜನರಲ್ಲಿ ಕುತೂಹಲ ಮೂಡಿಸಿದ ವಿಗ್ರಹ

ಸ್ಥಳದಲ್ಲಿ ಪರಿಶೀಲನೆ ನಡೆಸಿದಾಗ ಹಿತ್ತಳೆ, ತಾಮ್ರ ಹಾಗೂ ಮಣ್ಣಿನ ವಸ್ತುಗಳು ಪತ್ತೆಯಾಗಿವೆ. ಅವುಗಳಲ್ಲಿ ತಟ್ಟೆ, ದೀಪಸ್ತಂಭ, ವಿಭೂತಿ ಗಟ್ಟಿ, ಉಯ್ಯಾಲೆ ಕಂಬ, ಜಾಗಟೆ ಸೇರಿದಂತೆ ಅನೇಕ ವಸ್ತುಗಳು ಸಿಕ್ಕಿದ್ದು‌ ಇದು ಎಲ್ಲರ ಕೂತುಹಲಕ್ಕೂ ಕಾರಣವಾಗಿದೆ.

ಗುಂಡಿ ತೆಗೆಯುತ್ತಿದ್ದ ವೇಳೆ ಮಠದ ಜಮೀನಿನಲ್ಲಿ ಪ್ರಾಚೀನ ಕಾಲದ ವಸ್ತುಗಳು ಪತ್ತೆ, ಜನರಲ್ಲಿ ಕುತೂಹಲ ಮೂಡಿಸಿದ ವಿಗ್ರಹ
ಗುಂಡಿ ತೆಗೆಯುತ್ತಿದ್ದ ವೇಳೆ ಮಠದ ಜಮೀನಿನಲ್ಲಿ ಪ್ರಾಚೀನ ಕಾಲದ ವಸ್ತುಗಳು ಪತ್ತೆ
Follow us
TV9 Web
| Updated By: ಆಯೇಷಾ ಬಾನು

Updated on: Aug 08, 2021 | 9:08 AM

ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ಕಣ್ಣೂರು ಗ್ರಾಮದ ಮಕ್ಕಳ ದೇವರ ಮಠದ ಜಮೀನಿನಲ್ಲಿ ಪ್ರಾಚೀನ ಕಾಲದ ವಸ್ತುಗಳು ಪತ್ತೆಯಾಗಿವೆ. ಜಮೀನಿನಲ್ಲಿ ಇದ್ದ ತೆಂಗಿನ ಸಸಿಗಳಿಗೆ ನೀರಾವರಿ ಪೈಪ್ ಗಳನ್ನ ಅಳವಡಿಸಲು ಜೆಸಿಬಿ ಮೂಲಕ ಜಮೀನಿನಲ್ಲಿ ಗುಂಡಿ ತೆಗೆಯುತ್ತಿದ್ದ ವೇಳೆ ಇದ್ದಕಿದ್ದಂತೆ ಭೂಮಿ ಕುಸಿದಿದೆ. ಹತ್ತು ಆಡಿ ಆಳಕ್ಕೆ ಗುಂಡಿ ಕಂಡು ಬಂದಿದೆ. ಆ ಸ್ಥಳದಲ್ಲಿ ಪರಿಶೀಲನೆ ನಡೆಸಿದಾಗ ಹಿತ್ತಳೆ, ತಾಮ್ರ ಹಾಗೂ ಮಣ್ಣಿನ ವಸ್ತುಗಳು ಪತ್ತೆಯಾಗಿವೆ. ಅವುಗಳಲ್ಲಿ ತಟ್ಟೆ, ದೀಪಸ್ತಂಭ, ವಿಭೂತಿ ಗಟ್ಟಿ, ಉಯ್ಯಾಲೆ ಕಂಬ, ಜಾಗಟೆ ಸೇರಿದಂತೆ ಅನೇಕ ವಸ್ತುಗಳು ಸಿಕ್ಕಿದ್ದು‌ ಇದು ಎಲ್ಲರ ಕೂತುಹಲಕ್ಕೂ ಕಾರಣವಾಗಿದೆ.

ಇನ್ನು ಶ್ರೀಮಠದ ಸ್ವಾಮೀಜಿಯೊಬ್ಬರು ಲೋಕಕಲ್ಯಾಣಕ್ಕಾಗಿ ತಪಗೈದು ಜೀವಂತ ಸಮಾಧಿಯಾಗಿರಬಹುದು. ಈ ವೇಳೆ ಈ ವಸ್ತುಗಳನ್ನ ಬಳಸಿರಬಹುದು ಎಂಬ ಮಾಹಿತಿ ಇದ್ದು ಮಠದ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಕುತೂಹಲ ಮೂಡಿದೆ. ಶ್ರೀ ಮಠ ಪುರಾತನ ಮಠವಾಗಿದ್ದು ನೂರಾರು ವರ್ಷಗಳ ಇತಿಹಾಸವಿದೆ. ಮಠದ ಜಮೀನಿನಲ್ಲಿ ಸಿಕ್ಕಿರುವ ವಸ್ತುಗಳ‌ ಮೇಲೆ ಹಳೆಗನ್ನಡದಲ್ಲಿ‌ ಹೆಸರು ಸಹಾ ಬರೆಯಲಾಗಿದೆ.

ಮಠದ ಜಮೀನಿನಲ್ಲಿ ಪ್ರಾಚೀನ‌ ಕಾಲದ ವಸ್ತುಗಳು ಪತ್ತೆಯಾಗಿರುವ ಬಗ್ಗೆ ಮಾಹಿತಿ ಪಡೆದ ಕುದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಮಠದ ಮೃತ್ಯುಂಜಯ ಸ್ವಾಮೀಜಿಯವರಿಗೂ ಸೂಚನೆ ನೀಡಿದ್ದು, ಪುರಾತತ್ವ ಇಲಾಖೆ ಅಧಿಕಾರಿಗಳು ಬಂದು ಪರಿಶೀಲನೆ ನಡೆಸುವವರೂ ಯಾವುದೇ ವಸ್ತಗಳನ್ನ ಬಳಕೆ ಹಾಗೂ ಹಾಳು ಮಾಡದಂತೆ ಸೂಚಿಸಿದ್ದಾರೆ.

rmg ancient times idols

ಹಿತ್ತಳೆ, ತಾಮ್ರ ಹಾಗೂ ಮಣ್ಣಿನ ವಸ್ತುಗಳು ಪತ್ತೆಯಾಗಿವೆ. ಅವುಗಳಲ್ಲಿ ತಟ್ಟೆ, ದೀಪಸ್ತಂಭ, ವಿಭೂತಿ ಗಟ್ಟಿ, ಉಯ್ಯಾಲೆ ಕಂಬ, ಜಾಗಟೆ ಸೇರಿದಂತೆ ಅನೇಕ ವಸ್ತುಗಳು ಸಿಕ್ಕಿವೆ

rmg ancient times idols

ಮಠದ ಜಮೀನಿನಲ್ಲಿ ಸಿಕ್ಕಿರುವ ವಸ್ತುಗಳ‌ ಮೇಲೆ ಹಳೆಗನ್ನಡದಲ್ಲಿ‌ ಹೆಸರು ಸಹಾ ಬರೆಯಲಾಗಿದೆ

ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಭಗವಾನ್ ವಿಷ್ಣುವಿನ ಬೆಲೆಬಾಳುವ ವಿಗ್ರಹ ಪತ್ತೆ ; ಮಣ್ಣು ಅಗೆಯುವಾಗ ಸಿಕ್ಕರೂ ಸುಮ್ಮನಿದ್ದ ಶಿಕ್ಷಕ

ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ