AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಂಡಿ ತೆಗೆಯುತ್ತಿದ್ದ ವೇಳೆ ಮಠದ ಜಮೀನಿನಲ್ಲಿ ಪ್ರಾಚೀನ ಕಾಲದ ವಸ್ತುಗಳು ಪತ್ತೆ, ಜನರಲ್ಲಿ ಕುತೂಹಲ ಮೂಡಿಸಿದ ವಿಗ್ರಹ

ಸ್ಥಳದಲ್ಲಿ ಪರಿಶೀಲನೆ ನಡೆಸಿದಾಗ ಹಿತ್ತಳೆ, ತಾಮ್ರ ಹಾಗೂ ಮಣ್ಣಿನ ವಸ್ತುಗಳು ಪತ್ತೆಯಾಗಿವೆ. ಅವುಗಳಲ್ಲಿ ತಟ್ಟೆ, ದೀಪಸ್ತಂಭ, ವಿಭೂತಿ ಗಟ್ಟಿ, ಉಯ್ಯಾಲೆ ಕಂಬ, ಜಾಗಟೆ ಸೇರಿದಂತೆ ಅನೇಕ ವಸ್ತುಗಳು ಸಿಕ್ಕಿದ್ದು‌ ಇದು ಎಲ್ಲರ ಕೂತುಹಲಕ್ಕೂ ಕಾರಣವಾಗಿದೆ.

ಗುಂಡಿ ತೆಗೆಯುತ್ತಿದ್ದ ವೇಳೆ ಮಠದ ಜಮೀನಿನಲ್ಲಿ ಪ್ರಾಚೀನ ಕಾಲದ ವಸ್ತುಗಳು ಪತ್ತೆ, ಜನರಲ್ಲಿ ಕುತೂಹಲ ಮೂಡಿಸಿದ ವಿಗ್ರಹ
ಗುಂಡಿ ತೆಗೆಯುತ್ತಿದ್ದ ವೇಳೆ ಮಠದ ಜಮೀನಿನಲ್ಲಿ ಪ್ರಾಚೀನ ಕಾಲದ ವಸ್ತುಗಳು ಪತ್ತೆ
TV9 Web
| Edited By: |

Updated on: Aug 08, 2021 | 9:08 AM

Share

ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ಕಣ್ಣೂರು ಗ್ರಾಮದ ಮಕ್ಕಳ ದೇವರ ಮಠದ ಜಮೀನಿನಲ್ಲಿ ಪ್ರಾಚೀನ ಕಾಲದ ವಸ್ತುಗಳು ಪತ್ತೆಯಾಗಿವೆ. ಜಮೀನಿನಲ್ಲಿ ಇದ್ದ ತೆಂಗಿನ ಸಸಿಗಳಿಗೆ ನೀರಾವರಿ ಪೈಪ್ ಗಳನ್ನ ಅಳವಡಿಸಲು ಜೆಸಿಬಿ ಮೂಲಕ ಜಮೀನಿನಲ್ಲಿ ಗುಂಡಿ ತೆಗೆಯುತ್ತಿದ್ದ ವೇಳೆ ಇದ್ದಕಿದ್ದಂತೆ ಭೂಮಿ ಕುಸಿದಿದೆ. ಹತ್ತು ಆಡಿ ಆಳಕ್ಕೆ ಗುಂಡಿ ಕಂಡು ಬಂದಿದೆ. ಆ ಸ್ಥಳದಲ್ಲಿ ಪರಿಶೀಲನೆ ನಡೆಸಿದಾಗ ಹಿತ್ತಳೆ, ತಾಮ್ರ ಹಾಗೂ ಮಣ್ಣಿನ ವಸ್ತುಗಳು ಪತ್ತೆಯಾಗಿವೆ. ಅವುಗಳಲ್ಲಿ ತಟ್ಟೆ, ದೀಪಸ್ತಂಭ, ವಿಭೂತಿ ಗಟ್ಟಿ, ಉಯ್ಯಾಲೆ ಕಂಬ, ಜಾಗಟೆ ಸೇರಿದಂತೆ ಅನೇಕ ವಸ್ತುಗಳು ಸಿಕ್ಕಿದ್ದು‌ ಇದು ಎಲ್ಲರ ಕೂತುಹಲಕ್ಕೂ ಕಾರಣವಾಗಿದೆ.

ಇನ್ನು ಶ್ರೀಮಠದ ಸ್ವಾಮೀಜಿಯೊಬ್ಬರು ಲೋಕಕಲ್ಯಾಣಕ್ಕಾಗಿ ತಪಗೈದು ಜೀವಂತ ಸಮಾಧಿಯಾಗಿರಬಹುದು. ಈ ವೇಳೆ ಈ ವಸ್ತುಗಳನ್ನ ಬಳಸಿರಬಹುದು ಎಂಬ ಮಾಹಿತಿ ಇದ್ದು ಮಠದ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಕುತೂಹಲ ಮೂಡಿದೆ. ಶ್ರೀ ಮಠ ಪುರಾತನ ಮಠವಾಗಿದ್ದು ನೂರಾರು ವರ್ಷಗಳ ಇತಿಹಾಸವಿದೆ. ಮಠದ ಜಮೀನಿನಲ್ಲಿ ಸಿಕ್ಕಿರುವ ವಸ್ತುಗಳ‌ ಮೇಲೆ ಹಳೆಗನ್ನಡದಲ್ಲಿ‌ ಹೆಸರು ಸಹಾ ಬರೆಯಲಾಗಿದೆ.

ಮಠದ ಜಮೀನಿನಲ್ಲಿ ಪ್ರಾಚೀನ‌ ಕಾಲದ ವಸ್ತುಗಳು ಪತ್ತೆಯಾಗಿರುವ ಬಗ್ಗೆ ಮಾಹಿತಿ ಪಡೆದ ಕುದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಮಠದ ಮೃತ್ಯುಂಜಯ ಸ್ವಾಮೀಜಿಯವರಿಗೂ ಸೂಚನೆ ನೀಡಿದ್ದು, ಪುರಾತತ್ವ ಇಲಾಖೆ ಅಧಿಕಾರಿಗಳು ಬಂದು ಪರಿಶೀಲನೆ ನಡೆಸುವವರೂ ಯಾವುದೇ ವಸ್ತಗಳನ್ನ ಬಳಕೆ ಹಾಗೂ ಹಾಳು ಮಾಡದಂತೆ ಸೂಚಿಸಿದ್ದಾರೆ.

rmg ancient times idols

ಹಿತ್ತಳೆ, ತಾಮ್ರ ಹಾಗೂ ಮಣ್ಣಿನ ವಸ್ತುಗಳು ಪತ್ತೆಯಾಗಿವೆ. ಅವುಗಳಲ್ಲಿ ತಟ್ಟೆ, ದೀಪಸ್ತಂಭ, ವಿಭೂತಿ ಗಟ್ಟಿ, ಉಯ್ಯಾಲೆ ಕಂಬ, ಜಾಗಟೆ ಸೇರಿದಂತೆ ಅನೇಕ ವಸ್ತುಗಳು ಸಿಕ್ಕಿವೆ

rmg ancient times idols

ಮಠದ ಜಮೀನಿನಲ್ಲಿ ಸಿಕ್ಕಿರುವ ವಸ್ತುಗಳ‌ ಮೇಲೆ ಹಳೆಗನ್ನಡದಲ್ಲಿ‌ ಹೆಸರು ಸಹಾ ಬರೆಯಲಾಗಿದೆ

ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಭಗವಾನ್ ವಿಷ್ಣುವಿನ ಬೆಲೆಬಾಳುವ ವಿಗ್ರಹ ಪತ್ತೆ ; ಮಣ್ಣು ಅಗೆಯುವಾಗ ಸಿಕ್ಕರೂ ಸುಮ್ಮನಿದ್ದ ಶಿಕ್ಷಕ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?