AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣ ವಿಧಾನಸಭೆ ಬೈ ಎಲೆಕ್ಷನ್​ನಲ್ಲಿ ಸ್ಪರ್ಧಿಸ್ತಾರಾ ಡಿಕೆ.ಸುರೇಶ್? ಶಾಸಕ ಬಾಲಕೃಷ್ಣ ಹೇಳಿದ್ದಿಷ್ಟು

ಲೋಕಸಭಾ ಚುನಾವಣೆ ಬಳಿಕ ಇದೀಗ ಚನ್ನಪಟ್ಟಣದತ್ತ ರಾಜಕೀಯ ಲೆಕ್ಕಾಚಾರಗಳು ಶುರುವಾಗಿದೆ. ಈಗಾಗಲೇ ಲೋಕಾ ಕಣದಲ್ಲಿ ಬೆಂಗಳೂರು ಗ್ರಾಮಾಂತರದಿಂದ ನಿಂತು ಸೋಲುಂಡಿರುವ ಡಿಕೆ ಸುರೇಶ್ ಅವರು, ರಾಜ್ಯ ರಾಜಕಾರಣದತ್ತ ಮುಖ ಮಾಡಲಿದ್ದಾರಾ? ಎಂಬ ಪ್ರಶ್ನೆಗಳು ರಾಜಕೀಯ ವಲಯದಲ್ಲಿ ಶುರುವಾಗಿದೆ.​ ಈ ಕುರಿತು ಕಾಂಗ್ರೆಸ್​ ಶಾಸಕ ಹೆಚ್.ಸಿ.ಬಾಲಕೃಷ್ಣ ಮಾತನಾಡಿದ್ದಾರೆ.

ಚನ್ನಪಟ್ಟಣ ವಿಧಾನಸಭೆ ಬೈ ಎಲೆಕ್ಷನ್​ನಲ್ಲಿ ಸ್ಪರ್ಧಿಸ್ತಾರಾ ಡಿಕೆ.ಸುರೇಶ್? ಶಾಸಕ ಬಾಲಕೃಷ್ಣ ಹೇಳಿದ್ದಿಷ್ಟು
ಬಾಲಕೃಷ್ಣ, ಡಿಕೆ ಸುರೇಶ್​
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jun 05, 2024 | 4:35 PM

ರಾಮನಗರ, ಜೂ.05: ಚನ್ನಪಟ್ಟಣ(Channapatana) ವಿಧಾನಸಭೆ ಕ್ಷೇತ್ರದ ಶಾಸಕರಾಗಿದ್ದ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಅವರು ಇದೀಗ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು, ರಾಜ್ಯ ರಾಜಕಾರಣದಿಂದ ಕೇಂದ್ರದ ಕಡೆ ಮುಖ ಮಾಡಿದ್ದಾರೆ. ಈ ಹಿನ್ನಲೆ ಅವರ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ಇದಾದ ಬಳಿಕ ಅವರ ಕ್ಷೇತ್ರದಲ್ಲಿ ಯಾರು ಸ್ಪರ್ಧೆಗಿಳಿಯುತ್ತಾರೆ ಎಂಬ ಕುತೂಹಲ ಶುರುವಾಗಿದೆ. ಈ ಮಧ್ಯೆ ಲೋಕಾ ಕಣದಲ್ಲಿ ಸೋಲುಂಡಿರುವ ಡಿಕೆ ಸುರೇಶ್(DK Suresh) ಸ್ಪರ್ಧೆ ಮಾಡುತ್ತಾರಾ? ಎಂಬ ಪ್ರಶ್ನೆ ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿದೆ.

ಈ ಕುರಿತು ಮಾಗಡಿಯಲ್ಲಿ ಮಾತನಾಡಿದ ಕಾಂಗ್ರೆಸ್​ ಶಾಸಕ ಹೆಚ್.ಸಿ.ಬಾಲಕೃಷ್ಣ, ‘ಅಲ್ಲಿ ಸ್ಪರ್ಧಿಸುವುದು ಡಿ.ಕೆ.ಸುರೇಶ್ ಹಾಗೂ ಹೈಕಮಾಂಡ್​​ಗೆ ಬಿಟ್ಟ ವಿಚಾರ ಎಂದಿದ್ದಾರೆ. ಈ ಉಪಚುನಾವಣೆಯಲ್ಲಿ ಚನ್ನಪಟ್ಟಣ ನಮ್ಮ ಕೈವಶ ಆಗುತ್ತದೆ. ಅಲ್ಲಿ ಯಾರೂ ಇಲ್ಲದೆ 80 ಸಾವಿರ ಮತಗಳನ್ನು ಪಡೆದಿದ್ದೇವೆ. ಗೆಲುವಿಗೆ ಬೇಕಾಗಿರುವುದೇ ಇನ್ನು 20 ಸಾವಿರ ಮತಗಳು ಅಷ್ಟೇ, ಈ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ನಡೆಯಲ್ಲ,  ಕಾರ್ಯಕರ್ತರೂ ಕೂಡ ಮೈತ್ರಿ ಒಪ್ಪಲ್ಲ. ಹೆಚ್​ಡಿಕೆ ಈಗ ನಮ್ಮ ಜಿಲ್ಲೆಯಲ್ಲಿಲ್ಲ, ಮಂಡ್ಯಕ್ಕೆ ಹೋಗಾಯಿತು. ಇನ್ನು ಚನ್ನಪಟ್ಟಣ, ರಾಮನಗರಕ್ಕೆ ಬರುವ ವಿಚಾರವಿಲ್ಲ. ಇನ್ನೇನಿದ್ದರೂ ಮಂಡ್ಯ, ಹಾಸನ ನೋಡಿಕೊಂಡು ಇರುತ್ತಾರೆ ಎಂದಿದ್ದಾರೆ.

ಇದನ್ನೂ ಓದಿ:ಲೋಕಸಭಾ ಚುನಾವಣೆ ಫಲಿತಾಂಶ: ಸೋಲನ್ನು ಸ್ಪೋರ್ಟ್ ಆಗಿ ಸ್ವೀಕರಿಸಿರುವ ಡಿಕೆ ಸುರೇಶ್ ಗೆದ್ದ ಡಾ ಮಂಜುನಾಥ್ ರನ್ನು ಅಭಿನಂದಿಸಿದರು

ಮತದಾರ ಪ್ರಭುಗಳು ಕೊಟ್ಟಿರುವ ತಿರ್ಮಾನ ಸ್ವಾಗತಿಸುತ್ತೇನೆ-ಡಿಕೆ ಸುರೇಶ್​

ಲೋಕಸಭಾ ಫಲಿತಾಂಶದ ಬಳಿಕ ಡಿಕೆ ಸುರೇಶ್ ಮಾತನಾಡಿ, ‘ಮೂರು ಬಾರಿ ಸಂಸದನಾಗಿ ಕೆಲಸ ಮಾಡಲು ಅವಕಾಶ ಕೊಟ್ಟಿದ್ದೀರಿ. ನಾಲ್ಕನೇ ಬಾರಿ ಅಗ್ನಿಪರೀಕ್ಷೆಯಲ್ಲಿ ವಿರಾಮ ಕೊಟ್ಟಿದ್ದೀರಿ. ಮಾದ್ಯಮದ ಮುಖಾಂತರ ಕ್ಷೇತ್ರದ ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದ್ದರು. ಮತದಾರ ಪ್ರಭುಗಳು ಕೊಟ್ಟಿರುವ ತಿರ್ಮಾನವನ್ನು ಸ್ವಾಗತಿಸುತ್ತೇನೆ. ಗೆಲುವು ಸಾಧಿಸಿದ ಡಾ. ಮಂಜುನಾಥ್ ಅವರಿಗೆ ಧನ್ಯವಾದ ಹೇಳುತ್ತೇನೆ. ನನಗೆ ಅವಕಾಶ ಕೊಟ್ಟ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ರಾಹುಲ್ ಗಾಂಧಿಯವರಿಗೆ ಹಾಗೂ ಸಿಎಂ‌ ಸಿದ್ದರಾಮಯ್ಯಗೆ ಧನ್ಯವಾದ ತಿಳಿಸುತ್ತೇನೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:29 pm, Wed, 5 June 24

ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್