AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಬೀಡಿ,‌ ಸಿಗರೇಟ್, ಗಾಂಜಾ ಚಟಕ್ಕಾಗಿ ಬಾಲಕಿಯನ್ನು ಅಪಹರಿಸಲು ಯತ್ನ​

ಬೀಡಿ,‌ ಸಿಗರೇಟ್ ಮತ್ತು ಗಾಂಜಾ ಚಟಕ್ಕಾಗಿ ರಾಮನಗರದ ಚಾಮುಂಡಿಪುರ ಲೇಔಟ್​ನ ಏಳು ವರ್ಷದ ಬಾಲಕಿಯನ್ನು ಅಪಹರಿಸಲು ಯತ್ನಿಸಿದ್ದ ಆರೋಪಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ರಾಮನಗರ: ಬೀಡಿ,‌ ಸಿಗರೇಟ್, ಗಾಂಜಾ ಚಟಕ್ಕಾಗಿ ಬಾಲಕಿಯನ್ನು ಅಪಹರಿಸಲು ಯತ್ನ​
ಅಪಹರಣಕ್ಕೆ ಯತ್ನಿಸಲಾಗಿದ್ದ ಬಾಲಕಿ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Sep 09, 2024 | 10:22 AM

Share

ರಾಮನಗರ, ಸೆಪ್ಟೆಂಬರ್​ 09: ರಾಮನಗರದ (Ramnagar) ಚಾಮುಂಡಿಪುರ ಲೇಔಟ್​ನ ಏಳು ವರ್ಷದ ಬಾಲಕಿಯನ್ನು ಅಪಹರಿಸಲು ಯತ್ನಿಸಿದ್ದ ಆರೋಪಿಯನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ದರ್ಶನ್​ (22) ಅಪಹರಣಕ್ಕೆ ಯತ್ನಿಸಿದ ಆರೋಪಿ. ಆರೋಪಿ ದರ್ಶನ್​ ಬಾಲಕಿಯ ಪಕ್ಕದ ಮನೆಯವನಾಗಿದ್ದಾನೆ. ಆರೋಪಿ ದರ್ಶನ್​ ​ಬೀಡಿ,‌ ಸಿಗರೇಟ್ ಮತ್ತು ಗಾಂಜಾ ಚಟಕ್ಕೆ ದಾಸನಾಗಿದ್ದಾನೆ. ತನ್ನ ಚಟಕ್ಕಾಗಿ ಅವರಿವರಿಂದ 10-20 ರೂ. ಕೇಳಿ ಪಡೆಯುತ್ತಿದ್ದನು.

ಕೊನೆಗೆ ಯಾರು ಹಣ ನೀಡದಿದ್ದಾಗ, ಬಾಲಕಿಯನ್ನು ಅಪರಣ ಮಾಡಲು ಪ್ಯ್ಲಾನ್​ ಮಾಡಿದನು. ಬಾಲಕಿಯನ್ನು ಅಪಹರಣ ಮಾಡಿ ಎರಡು ಲಕ್ಷ ರೂ. ಬೇಡಿಕೆ ಇಡಲು ಯೋಚಿಸಿದ. ಬಂದ ಹಣ ತನ್ನ ಚಟಕ್ಕೆ ಆಗುತ್ತದೆ ಎಂದು ಅಪಹರಣ ಕೃತ್ಯಕ್ಕೆ ಕೈ ಹಾಕಿದ. ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಬಾಲಕಿ ಗಣೇಶ ಪೆಂಡಲ್​ ಬಳಿ ಇದ್ದಳು. ಈ ಸಮಯದಲ್ಲಿ ಅಲ್ಲಿಗೆ ಬಂದ ಆರೋಪಿ ದರ್ಶನ್ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾನೆ.

ಇದನ್ನೂ ಓದಿ: ನಾನು ಹೋಗಲ್ಲ ಎಂದು ಅಪಹರಣಕಾರನನ್ನು ಅಪ್ಪಿಕೊಂಡು ಅತ್ತ ಮಗು

ಅಲ್ಲಿ ಬಾಲಕಿಯ ಕೈ ಮತ್ತು ಬಾಯಿಗೆ ಟೇಪ್​​ನಿಂದ ಸುತ್ತಿದ್ದಾನೆ. ಮಗಳು ಕಾಣದಿದ್ದಾಗ ತಂದೆ ಸಂತೋಷ್​ ಗಾಬರಿಗೊಂಡು ಹುಡುಕಾಡಲು ಆರಂಭಿಸಿದ್ದಾರೆ. ಈ ವಿಚಾರವನ್ನು ಗಣೇಶ ಪೆಂಡಲ್​ ಬಳಿ ಇದ್ದ ಯುವಕರಿಗೂ ತಿಳಿಸಿದ್ದಾರೆ. ನಂತರ ಯುವಕರೆಲ್ಲರೂ ಒಂದುಗೂಡಿ ಹುಡುಕಾಡಲು ಶುರು ಮಾಡಿದ್ದಾರೆ. ಮಗಳು ಗಣೇಶ ಪೆಂಡಲ್​ ಬಳಿಯೇ ಇದ್ದಳು ಎಂದು ದರ್ಶನ್​ ಯುವಕರಿಗೆ ತಿಳಿಸಿದ್ದಾರೆ.

ಸ್ಥಳೀಯರ ಹುಡುಕಾಟ ಮತ್ತು ಬಾಯಿ ಶಬ್ದ ಕೇಳಿದ ಆರೋಪಿ ದರ್ಶನ ಬಾಲಕಿಯನ್ನು ಬಿಟ್ಟು ಪರಾರಿಯಾಗಲು ಮುಂದಾಗಿದ್ದಾನೆ. ಈತನ ಮೇಲೆ ಅನುಮಾನಗೊಂಡ ಯುವಕರು, ಹಿಡಿದು ವಿಚಾರಿಸಿದಾಗ ಬಾಯಿ ಬಿಟ್ಟಿದ್ದಾನೆ. ಕೂಡಲೆ ಅಡಗಿಸಿಟ್ಟ ಸ್ಥಳಕ್ಕೆ ಯುವಕರು ತೆರಳಿದಾಗ ಬಾಲಕಿ ಉಸಿರುಗಟ್ಟುವ ಹಂತದಲ್ಲಿದ್ದಳು. ಕೂಡಲೆ ಯುವಕರು ಬಾಲಕಿ ಕೈ ಮತ್ತು ಬಾಯಿಗೆ ಹಚ್ಚಿದ್ದ ಟೇಪ್​ ತೆಗೆದು ರಕ್ಷಿಸಿದ್ದಾರೆ. ಆರೋಪಿ ದರ್ಶನ್​ನನ್ನು ಯುವಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ಸಂಬಂಧ ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ