AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಚಾಮುಂಡೇಶ್ವರಿ ಕರಗ ಉತ್ಸವಕ್ಕೆ ಅಟ್ಟಿಕಾ ಗೋಲ್ಡ್ ಕಂಪನಿಯಿಂದ ದೇಣಿಗೆ ವಿವಾದ; ಶಾಸಕರಿಂದ ಕ್ರಮದ ಭರವಸೆ

ರಾಮನಗರದ ಐತಿಹಾಸಿಕ ಚಾಮುಂಡಿ ಕರಗ ಉತ್ಸವಕ್ಕೆ ವಂಚನೆ ಆರೋಪ ಎದುರಿಸುತ್ತಿರುವ ಅಟ್ಟಿಕಾ ಗೋಲ್ಡ್ ಕಂಪನಿಯಿಂದ ದೇಣಿಗೆ ಸಮರ್ಪಣೆ ಮಾಡುತ್ತಿರುವ ಬಗ್ಗೆ ವಿವಾದ ಎದ್ದಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಭರವಸೆ ನೀಡಿದ್ದಾರೆ.

ರಾಮನಗರ: ಚಾಮುಂಡೇಶ್ವರಿ ಕರಗ ಉತ್ಸವಕ್ಕೆ ಅಟ್ಟಿಕಾ ಗೋಲ್ಡ್ ಕಂಪನಿಯಿಂದ ದೇಣಿಗೆ ವಿವಾದ; ಶಾಸಕರಿಂದ ಕ್ರಮದ ಭರವಸೆ
ರಾಮನಗರದ ಚಾಮುಂಡೇಶ್ವರಿ ಕರಗ ಉತ್ಸವದ ಸಾಂಸ್ಕೃತಿ ಕಾರ್ಯಕ್ರಮಕ್ಕೆ ಅಟ್ಟಿಕಾ ಗೋಲ್ಡ್​ ಕಂಪನಿಯಿಂದ ದೇಣಿಗೆ ಪಡೆದ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಭರವಸೆ ನಿಡಿದ್ದಾರೆ
ಪ್ರಶಾಂತ್​ ಬಿ.
| Updated By: Rakesh Nayak Manchi|

Updated on: Jul 02, 2023 | 4:01 PM

Share

ರಾಮನಗರ: ಜಿಲ್ಲೆಯ ಐತಿಹಾಸಿಕ ಚಾಮುಂಡೇಶ್ವರಿ ಕರಗ ಉತ್ಸವವು (Chamandi Karaga Festival) ಜುಲೈ 4 ರಂದು ನಡೆಯಲಿದೆ. ಈ ಉತ್ಸವದ ಪ್ರಯುಕ್ತ ಆಯೋಜಿಸಲಾಗಿರುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಂಚನೆ ಆರೋಪ ಎದುರಿಸುತ್ತಿರುವ ಅಟ್ಟಿಕಾ ಗೋಲ್ಡ್ ಕಂಪನಿಯಿಂದ (Attica Gold Company) ದೇಣಿಗೆ ಸಂಗ್ರಹಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಆರೋಪ ಎದಿರುಸುತ್ತಿರುವ ಕಂಪನಿ ಬಳಿಯಿಂದ ದೇಣಿಗೆ ಸಂಗ್ರಹ ಯಾಕೆ ಎಂದು ಪ್ರಶ್ನಿಸಲಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕ ಇಕ್ಬಾಲ್ ಹುಸೇನ್, ಅಟ್ಟಿಕಾ ಗೋಲ್ಡ್ ಕಂಪನಿ ಜಾಹಿರಾತು ನೀಡಿದೆ. ಈ ವಿಚಾರ ನನ್ನ ಗಮನಕ್ಕೆ ಬಂದಿರಲಿಲ್ಲ. ಈ ಬಗ್ಗೆ ಕ್ರಮ ವಹಿಸುತ್ತೇನೆ. ಇಡೀ ಕರಗ ಮಹೋತ್ಸವ ನಮ್ಮ ಖರ್ಚಿನಿಂದ ಆಗಲಿದೆ. ಪ್ರತಿಯೊಂದು ವೆಚ್ಚ ನಾವೇ ಭರಿಸಲಿದ್ದೇವೆ. ಕಾರ್ಯಕ್ರಮಕ್ಕೆ ನಟರು, ಕಲಾವಿದರು ಬರಲಿದ್ದಾರೆ ಎಂದರು.

ಇದನ್ನೂ ಓದಿ: KDP Meeting; ರಾಮನಗರ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳಲು ಉಪ ಮುಖ್ಯಮಂತ್ರಿಯಾಗಿ ಬಂದಿಲ್ಲ, ಕನಕಪುರ ಶಾಸಕನಾಗಿ ಬಂದಿದ್ದೇನೆ: ಡಿಕೆ ಶಿವಕುಮಾರ್

ರಾಮನಗರದ ಮಿನಿ ದಸರಾ ಎಂದೇ ಕರೆಯಲಾಗುವ ಕಗರ ಮಹೋತ್ಸವ ಪ್ರಯುಕ್ತ ನಡೆಯುವ ಸಾಂಸ್ಕೃತಿ ಕಾರ್ಯಕ್ರಮದ ಆಯೋಜಕತ್ವದಲ್ಲಿ ರಾಜಕೀಯ ಬೆರೆತುಕೊಂಡಿದೆ. ಅದರಂತೆ ಕಳೆದ 2004 ರಿಂದ ಜೆಡಿಎಸ್​ ಈ ಕಾರ್ಯಕ್ರಮದ ಆಯೋಜಕತ್ವ ಮಾಡಿಕೊಂಡು ಬಂದಿದೆ. ಆದರೆ ಈ ಬಾರಿ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನ ಇಕ್ಬಾಲ್ ಹುಸೇನ್ ಗೆಲುವು ಸಾಧಿಸಿದ್ದು, ಇದರಿಂದಾಗಿ ಕರಗ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಆಯೋಜಕತ್ವ ಕಾಂಗ್ರೆಸ್ ತೆಕ್ಕೆಗೆ ಬಿದ್ದಿದೆ.

ಅಷ್ಟೇ ಅಲ್ಲದೆ, ಕಾರ್ಯಕ್ರಮ ಆಯೋಜಕತ್ವ ಪಡೆಯುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಜಟಾಪಟಿಯೂ ನಡೆದಿದೆ. ಹಲವು ವರ್ಷಗಳಿಂದ ನಾವೇ ಆಯೋಜಕತ್ವ ವಹಿಸಿದ್ದೇವೆ. ಈ ಬಾರಿಯೂ ನಮಗೆ ಕೊಡಬೇಕು ಎಂದು ಪಟ್ಟು ಹಿಡಿದಿದ್ದ ಜೆಡಿಎಸ್ ಶಾಸಕರು ಪ್ರತಿಭಟನೆಯ ಎಚ್ಚರಿಕೆ ನೀಡಿದ್ದರು. ಅದಾಗ್ಯೂ, ಕಾರ್ಯಕ್ರಮದ ಆಯೋಜಕತ್ವವನ್ನು ಪಡೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ