AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಚಾಮುಂಡೇಶ್ವರಿ ಕರಗ ಉತ್ಸವಕ್ಕೆ ಅಟ್ಟಿಕಾ ಗೋಲ್ಡ್ ಕಂಪನಿಯಿಂದ ದೇಣಿಗೆ ವಿವಾದ; ಶಾಸಕರಿಂದ ಕ್ರಮದ ಭರವಸೆ

ರಾಮನಗರದ ಐತಿಹಾಸಿಕ ಚಾಮುಂಡಿ ಕರಗ ಉತ್ಸವಕ್ಕೆ ವಂಚನೆ ಆರೋಪ ಎದುರಿಸುತ್ತಿರುವ ಅಟ್ಟಿಕಾ ಗೋಲ್ಡ್ ಕಂಪನಿಯಿಂದ ದೇಣಿಗೆ ಸಮರ್ಪಣೆ ಮಾಡುತ್ತಿರುವ ಬಗ್ಗೆ ವಿವಾದ ಎದ್ದಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಭರವಸೆ ನೀಡಿದ್ದಾರೆ.

ರಾಮನಗರ: ಚಾಮುಂಡೇಶ್ವರಿ ಕರಗ ಉತ್ಸವಕ್ಕೆ ಅಟ್ಟಿಕಾ ಗೋಲ್ಡ್ ಕಂಪನಿಯಿಂದ ದೇಣಿಗೆ ವಿವಾದ; ಶಾಸಕರಿಂದ ಕ್ರಮದ ಭರವಸೆ
ರಾಮನಗರದ ಚಾಮುಂಡೇಶ್ವರಿ ಕರಗ ಉತ್ಸವದ ಸಾಂಸ್ಕೃತಿ ಕಾರ್ಯಕ್ರಮಕ್ಕೆ ಅಟ್ಟಿಕಾ ಗೋಲ್ಡ್​ ಕಂಪನಿಯಿಂದ ದೇಣಿಗೆ ಪಡೆದ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಭರವಸೆ ನಿಡಿದ್ದಾರೆ
ಪ್ರಶಾಂತ್​ ಬಿ.
| Edited By: |

Updated on: Jul 02, 2023 | 4:01 PM

Share

ರಾಮನಗರ: ಜಿಲ್ಲೆಯ ಐತಿಹಾಸಿಕ ಚಾಮುಂಡೇಶ್ವರಿ ಕರಗ ಉತ್ಸವವು (Chamandi Karaga Festival) ಜುಲೈ 4 ರಂದು ನಡೆಯಲಿದೆ. ಈ ಉತ್ಸವದ ಪ್ರಯುಕ್ತ ಆಯೋಜಿಸಲಾಗಿರುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಂಚನೆ ಆರೋಪ ಎದುರಿಸುತ್ತಿರುವ ಅಟ್ಟಿಕಾ ಗೋಲ್ಡ್ ಕಂಪನಿಯಿಂದ (Attica Gold Company) ದೇಣಿಗೆ ಸಂಗ್ರಹಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಆರೋಪ ಎದಿರುಸುತ್ತಿರುವ ಕಂಪನಿ ಬಳಿಯಿಂದ ದೇಣಿಗೆ ಸಂಗ್ರಹ ಯಾಕೆ ಎಂದು ಪ್ರಶ್ನಿಸಲಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕ ಇಕ್ಬಾಲ್ ಹುಸೇನ್, ಅಟ್ಟಿಕಾ ಗೋಲ್ಡ್ ಕಂಪನಿ ಜಾಹಿರಾತು ನೀಡಿದೆ. ಈ ವಿಚಾರ ನನ್ನ ಗಮನಕ್ಕೆ ಬಂದಿರಲಿಲ್ಲ. ಈ ಬಗ್ಗೆ ಕ್ರಮ ವಹಿಸುತ್ತೇನೆ. ಇಡೀ ಕರಗ ಮಹೋತ್ಸವ ನಮ್ಮ ಖರ್ಚಿನಿಂದ ಆಗಲಿದೆ. ಪ್ರತಿಯೊಂದು ವೆಚ್ಚ ನಾವೇ ಭರಿಸಲಿದ್ದೇವೆ. ಕಾರ್ಯಕ್ರಮಕ್ಕೆ ನಟರು, ಕಲಾವಿದರು ಬರಲಿದ್ದಾರೆ ಎಂದರು.

ಇದನ್ನೂ ಓದಿ: KDP Meeting; ರಾಮನಗರ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳಲು ಉಪ ಮುಖ್ಯಮಂತ್ರಿಯಾಗಿ ಬಂದಿಲ್ಲ, ಕನಕಪುರ ಶಾಸಕನಾಗಿ ಬಂದಿದ್ದೇನೆ: ಡಿಕೆ ಶಿವಕುಮಾರ್

ರಾಮನಗರದ ಮಿನಿ ದಸರಾ ಎಂದೇ ಕರೆಯಲಾಗುವ ಕಗರ ಮಹೋತ್ಸವ ಪ್ರಯುಕ್ತ ನಡೆಯುವ ಸಾಂಸ್ಕೃತಿ ಕಾರ್ಯಕ್ರಮದ ಆಯೋಜಕತ್ವದಲ್ಲಿ ರಾಜಕೀಯ ಬೆರೆತುಕೊಂಡಿದೆ. ಅದರಂತೆ ಕಳೆದ 2004 ರಿಂದ ಜೆಡಿಎಸ್​ ಈ ಕಾರ್ಯಕ್ರಮದ ಆಯೋಜಕತ್ವ ಮಾಡಿಕೊಂಡು ಬಂದಿದೆ. ಆದರೆ ಈ ಬಾರಿ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನ ಇಕ್ಬಾಲ್ ಹುಸೇನ್ ಗೆಲುವು ಸಾಧಿಸಿದ್ದು, ಇದರಿಂದಾಗಿ ಕರಗ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಆಯೋಜಕತ್ವ ಕಾಂಗ್ರೆಸ್ ತೆಕ್ಕೆಗೆ ಬಿದ್ದಿದೆ.

ಅಷ್ಟೇ ಅಲ್ಲದೆ, ಕಾರ್ಯಕ್ರಮ ಆಯೋಜಕತ್ವ ಪಡೆಯುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಜಟಾಪಟಿಯೂ ನಡೆದಿದೆ. ಹಲವು ವರ್ಷಗಳಿಂದ ನಾವೇ ಆಯೋಜಕತ್ವ ವಹಿಸಿದ್ದೇವೆ. ಈ ಬಾರಿಯೂ ನಮಗೆ ಕೊಡಬೇಕು ಎಂದು ಪಟ್ಟು ಹಿಡಿದಿದ್ದ ಜೆಡಿಎಸ್ ಶಾಸಕರು ಪ್ರತಿಭಟನೆಯ ಎಚ್ಚರಿಕೆ ನೀಡಿದ್ದರು. ಅದಾಗ್ಯೂ, ಕಾರ್ಯಕ್ರಮದ ಆಯೋಜಕತ್ವವನ್ನು ಪಡೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ