AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಚಾಮುಂಡೇಶ್ವರಿ ಕರಗ ಉತ್ಸವಕ್ಕೆ ಅಟ್ಟಿಕಾ ಗೋಲ್ಡ್ ಕಂಪನಿಯಿಂದ ದೇಣಿಗೆ ವಿವಾದ; ಶಾಸಕರಿಂದ ಕ್ರಮದ ಭರವಸೆ

ರಾಮನಗರದ ಐತಿಹಾಸಿಕ ಚಾಮುಂಡಿ ಕರಗ ಉತ್ಸವಕ್ಕೆ ವಂಚನೆ ಆರೋಪ ಎದುರಿಸುತ್ತಿರುವ ಅಟ್ಟಿಕಾ ಗೋಲ್ಡ್ ಕಂಪನಿಯಿಂದ ದೇಣಿಗೆ ಸಮರ್ಪಣೆ ಮಾಡುತ್ತಿರುವ ಬಗ್ಗೆ ವಿವಾದ ಎದ್ದಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಭರವಸೆ ನೀಡಿದ್ದಾರೆ.

ರಾಮನಗರ: ಚಾಮುಂಡೇಶ್ವರಿ ಕರಗ ಉತ್ಸವಕ್ಕೆ ಅಟ್ಟಿಕಾ ಗೋಲ್ಡ್ ಕಂಪನಿಯಿಂದ ದೇಣಿಗೆ ವಿವಾದ; ಶಾಸಕರಿಂದ ಕ್ರಮದ ಭರವಸೆ
ರಾಮನಗರದ ಚಾಮುಂಡೇಶ್ವರಿ ಕರಗ ಉತ್ಸವದ ಸಾಂಸ್ಕೃತಿ ಕಾರ್ಯಕ್ರಮಕ್ಕೆ ಅಟ್ಟಿಕಾ ಗೋಲ್ಡ್​ ಕಂಪನಿಯಿಂದ ದೇಣಿಗೆ ಪಡೆದ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಭರವಸೆ ನಿಡಿದ್ದಾರೆ
ಪ್ರಶಾಂತ್​ ಬಿ.
| Updated By: Rakesh Nayak Manchi|

Updated on: Jul 02, 2023 | 4:01 PM

Share

ರಾಮನಗರ: ಜಿಲ್ಲೆಯ ಐತಿಹಾಸಿಕ ಚಾಮುಂಡೇಶ್ವರಿ ಕರಗ ಉತ್ಸವವು (Chamandi Karaga Festival) ಜುಲೈ 4 ರಂದು ನಡೆಯಲಿದೆ. ಈ ಉತ್ಸವದ ಪ್ರಯುಕ್ತ ಆಯೋಜಿಸಲಾಗಿರುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಂಚನೆ ಆರೋಪ ಎದುರಿಸುತ್ತಿರುವ ಅಟ್ಟಿಕಾ ಗೋಲ್ಡ್ ಕಂಪನಿಯಿಂದ (Attica Gold Company) ದೇಣಿಗೆ ಸಂಗ್ರಹಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಆರೋಪ ಎದಿರುಸುತ್ತಿರುವ ಕಂಪನಿ ಬಳಿಯಿಂದ ದೇಣಿಗೆ ಸಂಗ್ರಹ ಯಾಕೆ ಎಂದು ಪ್ರಶ್ನಿಸಲಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕ ಇಕ್ಬಾಲ್ ಹುಸೇನ್, ಅಟ್ಟಿಕಾ ಗೋಲ್ಡ್ ಕಂಪನಿ ಜಾಹಿರಾತು ನೀಡಿದೆ. ಈ ವಿಚಾರ ನನ್ನ ಗಮನಕ್ಕೆ ಬಂದಿರಲಿಲ್ಲ. ಈ ಬಗ್ಗೆ ಕ್ರಮ ವಹಿಸುತ್ತೇನೆ. ಇಡೀ ಕರಗ ಮಹೋತ್ಸವ ನಮ್ಮ ಖರ್ಚಿನಿಂದ ಆಗಲಿದೆ. ಪ್ರತಿಯೊಂದು ವೆಚ್ಚ ನಾವೇ ಭರಿಸಲಿದ್ದೇವೆ. ಕಾರ್ಯಕ್ರಮಕ್ಕೆ ನಟರು, ಕಲಾವಿದರು ಬರಲಿದ್ದಾರೆ ಎಂದರು.

ಇದನ್ನೂ ಓದಿ: KDP Meeting; ರಾಮನಗರ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳಲು ಉಪ ಮುಖ್ಯಮಂತ್ರಿಯಾಗಿ ಬಂದಿಲ್ಲ, ಕನಕಪುರ ಶಾಸಕನಾಗಿ ಬಂದಿದ್ದೇನೆ: ಡಿಕೆ ಶಿವಕುಮಾರ್

ರಾಮನಗರದ ಮಿನಿ ದಸರಾ ಎಂದೇ ಕರೆಯಲಾಗುವ ಕಗರ ಮಹೋತ್ಸವ ಪ್ರಯುಕ್ತ ನಡೆಯುವ ಸಾಂಸ್ಕೃತಿ ಕಾರ್ಯಕ್ರಮದ ಆಯೋಜಕತ್ವದಲ್ಲಿ ರಾಜಕೀಯ ಬೆರೆತುಕೊಂಡಿದೆ. ಅದರಂತೆ ಕಳೆದ 2004 ರಿಂದ ಜೆಡಿಎಸ್​ ಈ ಕಾರ್ಯಕ್ರಮದ ಆಯೋಜಕತ್ವ ಮಾಡಿಕೊಂಡು ಬಂದಿದೆ. ಆದರೆ ಈ ಬಾರಿ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನ ಇಕ್ಬಾಲ್ ಹುಸೇನ್ ಗೆಲುವು ಸಾಧಿಸಿದ್ದು, ಇದರಿಂದಾಗಿ ಕರಗ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಆಯೋಜಕತ್ವ ಕಾಂಗ್ರೆಸ್ ತೆಕ್ಕೆಗೆ ಬಿದ್ದಿದೆ.

ಅಷ್ಟೇ ಅಲ್ಲದೆ, ಕಾರ್ಯಕ್ರಮ ಆಯೋಜಕತ್ವ ಪಡೆಯುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಜಟಾಪಟಿಯೂ ನಡೆದಿದೆ. ಹಲವು ವರ್ಷಗಳಿಂದ ನಾವೇ ಆಯೋಜಕತ್ವ ವಹಿಸಿದ್ದೇವೆ. ಈ ಬಾರಿಯೂ ನಮಗೆ ಕೊಡಬೇಕು ಎಂದು ಪಟ್ಟು ಹಿಡಿದಿದ್ದ ಜೆಡಿಎಸ್ ಶಾಸಕರು ಪ್ರತಿಭಟನೆಯ ಎಚ್ಚರಿಕೆ ನೀಡಿದ್ದರು. ಅದಾಗ್ಯೂ, ಕಾರ್ಯಕ್ರಮದ ಆಯೋಜಕತ್ವವನ್ನು ಪಡೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ