ರಾಮನಗರ: ಚಾಮುಂಡೇಶ್ವರಿ ಕರಗ ಉತ್ಸವಕ್ಕೆ ಅಟ್ಟಿಕಾ ಗೋಲ್ಡ್ ಕಂಪನಿಯಿಂದ ದೇಣಿಗೆ ವಿವಾದ; ಶಾಸಕರಿಂದ ಕ್ರಮದ ಭರವಸೆ

ರಾಮನಗರದ ಐತಿಹಾಸಿಕ ಚಾಮುಂಡಿ ಕರಗ ಉತ್ಸವಕ್ಕೆ ವಂಚನೆ ಆರೋಪ ಎದುರಿಸುತ್ತಿರುವ ಅಟ್ಟಿಕಾ ಗೋಲ್ಡ್ ಕಂಪನಿಯಿಂದ ದೇಣಿಗೆ ಸಮರ್ಪಣೆ ಮಾಡುತ್ತಿರುವ ಬಗ್ಗೆ ವಿವಾದ ಎದ್ದಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಭರವಸೆ ನೀಡಿದ್ದಾರೆ.

ರಾಮನಗರ: ಚಾಮುಂಡೇಶ್ವರಿ ಕರಗ ಉತ್ಸವಕ್ಕೆ ಅಟ್ಟಿಕಾ ಗೋಲ್ಡ್ ಕಂಪನಿಯಿಂದ ದೇಣಿಗೆ ವಿವಾದ; ಶಾಸಕರಿಂದ ಕ್ರಮದ ಭರವಸೆ
ರಾಮನಗರದ ಚಾಮುಂಡೇಶ್ವರಿ ಕರಗ ಉತ್ಸವದ ಸಾಂಸ್ಕೃತಿ ಕಾರ್ಯಕ್ರಮಕ್ಕೆ ಅಟ್ಟಿಕಾ ಗೋಲ್ಡ್​ ಕಂಪನಿಯಿಂದ ದೇಣಿಗೆ ಪಡೆದ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಭರವಸೆ ನಿಡಿದ್ದಾರೆ
Edited By: Rakesh Nayak Manchi

Updated on: Jul 02, 2023 | 4:01 PM

ರಾಮನಗರ: ಜಿಲ್ಲೆಯ ಐತಿಹಾಸಿಕ ಚಾಮುಂಡೇಶ್ವರಿ ಕರಗ ಉತ್ಸವವು (Chamandi Karaga Festival) ಜುಲೈ 4 ರಂದು ನಡೆಯಲಿದೆ. ಈ ಉತ್ಸವದ ಪ್ರಯುಕ್ತ ಆಯೋಜಿಸಲಾಗಿರುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಂಚನೆ ಆರೋಪ ಎದುರಿಸುತ್ತಿರುವ ಅಟ್ಟಿಕಾ ಗೋಲ್ಡ್ ಕಂಪನಿಯಿಂದ (Attica Gold Company) ದೇಣಿಗೆ ಸಂಗ್ರಹಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಆರೋಪ ಎದಿರುಸುತ್ತಿರುವ ಕಂಪನಿ ಬಳಿಯಿಂದ ದೇಣಿಗೆ ಸಂಗ್ರಹ ಯಾಕೆ ಎಂದು ಪ್ರಶ್ನಿಸಲಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕ ಇಕ್ಬಾಲ್ ಹುಸೇನ್, ಅಟ್ಟಿಕಾ ಗೋಲ್ಡ್ ಕಂಪನಿ ಜಾಹಿರಾತು ನೀಡಿದೆ. ಈ ವಿಚಾರ ನನ್ನ ಗಮನಕ್ಕೆ ಬಂದಿರಲಿಲ್ಲ. ಈ ಬಗ್ಗೆ ಕ್ರಮ ವಹಿಸುತ್ತೇನೆ. ಇಡೀ ಕರಗ ಮಹೋತ್ಸವ ನಮ್ಮ ಖರ್ಚಿನಿಂದ ಆಗಲಿದೆ. ಪ್ರತಿಯೊಂದು ವೆಚ್ಚ ನಾವೇ ಭರಿಸಲಿದ್ದೇವೆ. ಕಾರ್ಯಕ್ರಮಕ್ಕೆ ನಟರು, ಕಲಾವಿದರು ಬರಲಿದ್ದಾರೆ ಎಂದರು.

ಇದನ್ನೂ ಓದಿ: KDP Meeting; ರಾಮನಗರ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳಲು ಉಪ ಮುಖ್ಯಮಂತ್ರಿಯಾಗಿ ಬಂದಿಲ್ಲ, ಕನಕಪುರ ಶಾಸಕನಾಗಿ ಬಂದಿದ್ದೇನೆ: ಡಿಕೆ ಶಿವಕುಮಾರ್

ರಾಮನಗರದ ಮಿನಿ ದಸರಾ ಎಂದೇ ಕರೆಯಲಾಗುವ ಕಗರ ಮಹೋತ್ಸವ ಪ್ರಯುಕ್ತ ನಡೆಯುವ ಸಾಂಸ್ಕೃತಿ ಕಾರ್ಯಕ್ರಮದ ಆಯೋಜಕತ್ವದಲ್ಲಿ ರಾಜಕೀಯ ಬೆರೆತುಕೊಂಡಿದೆ. ಅದರಂತೆ ಕಳೆದ 2004 ರಿಂದ ಜೆಡಿಎಸ್​ ಈ ಕಾರ್ಯಕ್ರಮದ ಆಯೋಜಕತ್ವ ಮಾಡಿಕೊಂಡು ಬಂದಿದೆ. ಆದರೆ ಈ ಬಾರಿ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನ ಇಕ್ಬಾಲ್ ಹುಸೇನ್ ಗೆಲುವು ಸಾಧಿಸಿದ್ದು, ಇದರಿಂದಾಗಿ ಕರಗ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಆಯೋಜಕತ್ವ ಕಾಂಗ್ರೆಸ್ ತೆಕ್ಕೆಗೆ ಬಿದ್ದಿದೆ.

ಅಷ್ಟೇ ಅಲ್ಲದೆ, ಕಾರ್ಯಕ್ರಮ ಆಯೋಜಕತ್ವ ಪಡೆಯುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಜಟಾಪಟಿಯೂ ನಡೆದಿದೆ. ಹಲವು ವರ್ಷಗಳಿಂದ ನಾವೇ ಆಯೋಜಕತ್ವ ವಹಿಸಿದ್ದೇವೆ. ಈ ಬಾರಿಯೂ ನಮಗೆ ಕೊಡಬೇಕು ಎಂದು ಪಟ್ಟು ಹಿಡಿದಿದ್ದ ಜೆಡಿಎಸ್ ಶಾಸಕರು ಪ್ರತಿಭಟನೆಯ ಎಚ್ಚರಿಕೆ ನೀಡಿದ್ದರು. ಅದಾಗ್ಯೂ, ಕಾರ್ಯಕ್ರಮದ ಆಯೋಜಕತ್ವವನ್ನು ಪಡೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
Follow Us