AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರ್ಯಾದೆಗೆ ಅಂಜಿ ಡೆತ್‌ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಕಂಚುಗಲ್​ ಬಂಡೆಮಠದ ಬಸವಲಿಂಗ ಸ್ವಾಮೀಜಿ

ಮಾಗಡಿ ತಾಲೂಕಿನಲ್ಲೇ ದೊಡ್ಡ ಮಠ ಎಂಬ ಪ್ರಖ್ಯಾತಿ ಪಡೆದಿರುವ ಕಂಚುಗಲ್​ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮರ್ಯಾದೆಗೆ ಅಂಜಿ ಡೆತ್‌ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಕಂಚುಗಲ್​ ಬಂಡೆಮಠದ ಬಸವಲಿಂಗ ಸ್ವಾಮೀಜಿ
ಬಂಡೆಮಠದ ಬಸವಲಿಂಗ ಸ್ವಾಮೀಜಿ
TV9 Web
| Updated By: ಆಯೇಷಾ ಬಾನು|

Updated on:Oct 24, 2022 | 11:37 AM

Share

ರಾಮನಗರ: ಮರ್ಯಾದೆಗೆ ಅಂಜಿ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕಂಚುಗಲ್​ ಬಂಡೆಮಠದ ಬಸವಲಿಂಗ ಸ್ವಾಮೀಜಿ(45) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ಪುಟಗಳ ಡೆತ್‌ ನೋಟ್ ಬರೆದಿಟ್ಟು ಮಠದ ತಮ್ಮ ಕೊಠಡಿಯ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್‌ ನೋಟ್​ನಲ್ಲಿ ಕೆಲವರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ಯಾರ ಸಹಾಯವೂ ಇರಲಿಲ್ಲ. ಕೆಲವರಿಂದ ಬೆದರಿಕೆ ಕರೆಗಳು ಸಹ ಬಂದಿವೆ ಎಂದು ಉಲ್ಲೇಖಿಸಿದ್ದಾರೆ.

ಮಾಗಡಿ ತಾಲೂಕಿನಲ್ಲೇ ದೊಡ್ಡ ಮಠ ಎಂಬ ಪ್ರಖ್ಯಾತಿ ಪಡೆದಿರುವ ಕಂಚುಗಲ್​ ಬಂಡೆಮಠದ ಆವರಣದಲ್ಲಿ ಶಾಲಾ ಕಾಲೇಜುಗಳಿವೆ. 50ಕೋಟಿಗೂ ಹೆಚ್ಚು ಮೌಲ್ಯ ಹೊಂದಿರುವ ಈ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮಠ ತಾಜ್ಯ ವಸ್ತು ವಿಲೇವಾರಿ ಘಟಕಕ್ಕೆ ವಿರೋಧ ವ್ಯಕ್ತಪಡಿಸಿತ್ತು. ಅನೇಕ ಉತ್ತಮ ಕಾರ್ಯಕ್ರಮಗಳನ್ನು ಮಾಡಿ ಸಮಾಜಕ್ಕೆ ಮಾದರಿ ಮಠವಾಗಿಯೂ ಇದು ಬೆಳೆದಿದೆ. ಆದ್ರೆ ಕೆಲ ದಿನಗಳಿಂದ ಸ್ವಾಮೀಜಿಗಳ ವಿರುದ್ಧ ಕೇಳಿ ಬಂದ ಆರೋಪಕ್ಕೆ ಅಂಜಿ ಸ್ವಾಮೀಜಿ ಪ್ರಾಣ ತ್ಯಾಗ ಮಾಡಿದ್ದಾರೆ.

ಸ್ವಾಮೀಜಿ ನಿಧನ ಹಿನ್ನೆಲೆ ಹಲವು ಮಠಾಧೀಶರು ಮಠಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಇನ್ನು ಡೆತ್ ನೋಟ್​ನಲ್ಲಿರುವ ಕೆಲವು ಮಾಹಿತಿಗಳನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಕೆಲ ವೈಯಕ್ತಿಕ ಕಾರಣಗಳಿಂದ ಬೇಸತ್ತು ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ. ಪೋಲಿಸರ ತನಿಖೆ ನಂತರ ಸತ್ಯ ಬಯಲಾಗಲಿದೆ. ಇದನ್ನೂ ಓದಿ: ಎಸ್​ಸಿ, ಎಸ್​ಟಿ, ಓಬಿಸಿ ಸಮುದಾಯದ ವಿಶ್ವಾಸ ಗಳಿಸಲು ಕಾಂಗ್ರೆಸ್ ಚಿಂತನೆ; ಮೂರು ಸಮಾವೇಶಗಳ ಆಯೋಜನೆ

ಬೆಳ್ಳಿ ಮಹೋತ್ಸವ ಆಚರಣೆ ಮಾಡಿಕೊಂಡಿದ್ದ ಬಸವಲಿಂಗ ಸ್ವಾಮೀಜಿ

ಬಸವಲಿಂಗ ಸ್ವಾಮೀಜಿಯವರು ಚನ್ನಮಲ್ಲಯ್ಯ, ಪುಟ್ಟಗೌರಮ್ಮರ ಎಂಟನೇ ಪುತ್ರರಾಗಿದ್ದಾರು. ಶ್ರೀಗಳು ಸೇರಿದಂತೆ 5 ಮಂದಿ ಗಂಡು, 3 ಮಂದಿ ಹೆಣ್ಣು ಮಕ್ಕಳಿದ್ದಾರೆ. 1 ರಿಂದ 8 ನೇ ತರಗತಿಯವರೆಗೂ ಬಂಡೇಮಠದಲ್ಲೆ ವಿದ್ಯಾಭ್ಯಾಸ ಮಾಡಿದ ನಂತರ ಸಿದ್ದಗಂಗಾ ಮಠದಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ. ಶ್ರೀಮಠದಲ್ಲೇ ವೇದ, ಉಪನಿಷತ್, ವಿದ್ವತ್ ವ್ಯಾಸಂಗ ಮಾಡಿದ್ದರು. ಸ್ವಾಮೀಜಿಗಳ ಹೆಸರಲ್ಲಿ 80 ಎಕರೆ ಜಮೀನು ಇದೆ. ಬಂಡೆಮಠದಲ್ಲಿ ಮರಿಸ್ವಾಮಿಗಳಾಗಿ 2 ವರ್ಷದ ನಂತರ 25 ವರ್ಷಗಳ ಹಿಂದೆ ಪೀಠ ಅಲಂಕರಿಸಿದ್ದರು. ಇತ್ತೀಚೆಗೆ ಬೆಳ್ಳಿ ಮಹೋತ್ಸವ ಆಚರಣೆ ಮಾಡಿಕೊಂಡಿದ್ದರು.

ಶ್ರೀಗಳು ಬಂಡೇಮಠದಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದರು. ಚಿಲುಮೆ ಮಠದ ಬಸವಲಿಂಗ ಸ್ವಾಮೀಜಿ ಯವರು ಇದೇ ರೀತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿ ಒಂದು ವರ್ಷವೂ ಆಗಿಲ್ಲ. ಆಗ ಇದೇ ರೀತಿ ಮತ್ತೊಂದು ಘಟನೆ ನಡೆದಿದೆ. ಕುದೂರು ಪೊಲೀಸ್‌ ಇನ್ಸ್ ಪೆಕ್ಟರ್ ಎಪಿ.ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸಾವಿರಾರು ಮಂದಿ ಭಕ್ತರು ಮಠದ ಬಳಿ ಜಮಾಯಿಸಿದ್ದಾರೆ. ಸದ್ಯ ನೆಲಮಂಗಲ ಶವಾಗಾರಕ್ಕೆ ಸ್ವಾಮೀಜಿ ಪಾರ್ಥಿವ ಶರೀರ ಶಿಫ್ಟ್ ಮಾಡಲಾಗಿದ್ದು ಮರಣೋತ್ತರ ಪರೀಕ್ಷೆ ಬಳಿಕ ಮಠದ ಆವರಣದಲ್ಲೇ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಯಲಿದೆ. ಮಧ್ಯಾಹ್ನ 3.30ಕ್ಕೆ ಮಠದ ಆವರಣದಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.

ಶ್ರೀಗಳು ಮಠದಲ್ಲಿ ನೂತನ ಕಟ್ಟಡದ ಗುದ್ದಲಿ ಪೂಜೆಗೆ ಪ್ಲಾನ್ ಮಾಡಿದ್ದರು. ಮಠದ ಕಟ್ಟಡಕ್ಕೆ ಸರ್ಕಾರದಿಂದ ಹಣ ಸಹ ಮಂಜೂರಾಗಿತ್ತು. ಇದೇ ಬುಧವಾರ 26 ರಂದು ಮಾಜಿ ಸಿಎಂ ಯಡಿಯೂರಪ್ಪನವರು ಗುದ್ದಲಿ ಪೂಜೆ ಮಾಡಬೇಕಿತ್ತು. ನೂತನ ಕಟ್ಟಡದ ಗುದ್ದಲಿ ಪೂಜೆಗೆ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿತ್ತು ಎಂದು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಪರಮಶಿವಯ್ಯ ಬಿ.ಎಸ್ ತಿಳಿಸಿದರು.

Published On - 10:28 am, Mon, 24 October 22

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ