AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮಾಟ ಮಂತ್ರಗಳ‌ ಕಾಟ! ಭಯಭೀತರಾದ ವಾಹನ ಸವಾರರು

ರಾಮನಗರ(Ramanagara) ಸಮೀಪ ಹೆದ್ದಾರಿ ಬಳಿ ಮಾಟ ಮಂತ್ರ(Mata Mantra) ಗಳ‌ ಕಾಟ ಹೆಚ್ಚಾಗಿದ್ದು, ಮಣ್ಣಿನಿಂದ‌ ಮಾಡಿರುವ ಮೂರ್ತಿಗಳು ಗ್ರಾಮಸ್ಥರನ್ನು ಭಯವಾಗುವಂತೆ ಮಾಡಿದೆ. ಇಂತಹ ಅಕ್ರಮ ಚಟುವಟಿಕೆಗಳಿಗೆ ಕೂಡಲೇ ಬ್ರೇಕ್​ ಹಾಕಬೇಕಾಗಿದೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮಾಟ ಮಂತ್ರಗಳ‌ ಕಾಟ! ಭಯಭೀತರಾದ ವಾಹನ ಸವಾರರು
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮಾಟ ಮಂತ್ರಗಳ‌ ಕಾಟ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ | Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 01, 2023 | 4:51 PM

Share

ರಾಮನಗರ, ಡಿ.01: ಬೆಂಗಳೂರು -ಮೈಸೂರು ಹೆದ್ದಾರಿ (Bengaluru Mysuru highway) ಯಲ್ಲಿ ಪ್ರೇತಾತ್ಮಗಳ ಭಯಕ್ಕೆ ವಾಹನ ಸವಾರರು ಕಂಗಾಲಾಗಿದ್ದಾರೆ. ರಾಮನಗರ(Ramanagara) ಸಮೀಪ ಹೆದ್ದಾರಿ ಬಳಿ ಮಾಟ ಮಂತ್ರ(Mata Mantra) ಗಳ‌ ಕಾಟ ಹೆಚ್ಚಾಗಿದ್ದು, ಮಣ್ಣಿನಿಂದ‌ ಮಾಡಿರುವ ಮೂರ್ತಿಗಳು ಗ್ರಾಮಸ್ಥರನ್ನು ಭಯವಾಗುವಂತೆ ಮಾಡಿದೆ. ಇಂತಹ ಅಕ್ರಮ ಚಟುವಟಿಕೆಗಳಿಗೆ ಕೂಡಲೇ ಬ್ರೇಕ್​ ಹಾಕಬೇಕಾಗಿದೆ.

ಈ ಆತಂಕ‌ ಮೂಡಿಸಿರುವ ಮೂರ್ತಿಗಳಲ್ಲಿ ಒಂದು ಗಂಡು ಹಾಗೂ ಇನ್ನೊಂದು ಹೆಣ್ಣು ಮೂರ್ತಿ ಇದೆ. ಅದಕ್ಕೆ ಕುಂಕುಮ,‌ ಅರಿಶಿಣ,‌ ಬಳೆ ಹಾಗೂ ಕೊರಳಲಿ ವಿಚಿತ್ರವಾದ ದಾರವನ್ನು ಅಳವಡಿಕೆ ಮಾಡಲಾಗಿದೆ. ಈ ಹಿನ್ನಲೆ ಮೂರ್ತಿಗಳು ವಿಚಿತ್ರ ಹಾಗೂ ಭಯ ಮೂಡುವಂತಿದೆ. ಅದರ ಕಣ್ಣುಗಳು ನೋಡಿ ಸವಾರರು ಭಯಭೀತರಾಗಿದ್ದು, ಕೂಡಲೇ ಮೂರ್ತಿಗಳನ್ನು ತೆರವು ಮಾಡಿ, ಶುದ್ಧಿಕರಣಗೊಳಿಸಿ ಲೈಟ್ ಹಾಕುವಂತೆ ಸ್ಥಳೀಯರ ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಹೊಳೆನರಸೀಪುರ: ಖಬರಸ್ತಾನದಲ್ಲಿ ಸಮಾಧಿ ಮುಂದೆ ಜೀವಂತ ವ್ಯಕ್ತಿಗಳ ಫೋಟೋ ಇಟ್ಟು ಮಾಟ ಮಂತ್ರ

ಮಾಟ-ಮಂತ್ರ ಎಂದರೇನು?

ಈ ಮಾಟ – ಮಂತ್ರ (ಮಂತ್ರವಿದ್ಯೆ) ಎನ್ನುವುದು ಒಂದು ವಿಶಿಷ್ಟ ಬಗೆಯ ಮಾಂತ್ರಿಕ ಶಕ್ತಿಯನ್ನು ಉಪಯೋಗಿಸಿಕೊಂಡು ಜನರನ್ನು ಹಿಂಸಿಸುವ ಅಥವಾ ಅವರ ಆಸ್ತಿಪಾಸ್ತಿಯನ್ನು ಹಾನಿಗೊಳಿಸುವ, ಪ್ರಪಂಚದಾದ್ಯಂತ ಕಂಡುಬರುವ, ಎಲ್ಲ ಆದಿವಾಸಿಗಳಲ್ಲಿಯೂ ಇರುವ ಒಂದು ಸಂಪ್ರದಾಯ ಮತ್ತು ನಂಬಿಕೆ(ವಾಮಾಚಾರ). ಇದು ಧರ್ಮದಷ್ಟೇ ಪ್ರಾಚೀನವಾದುದು. ಒಂದು ಕಾಲಕ್ಕೆ ಧರ್ಮಕ್ಕೂ, ಮಾಟ-ಮಂತ್ರಗಳಿಗೂ ಸಂಬಂಧವೇ ಇಲ್ಲ ಎಂದು ಭಾವಿಸಲಾಗಿತ್ತು. ಅನಂತರ ಅವೆರಡೂ ಅವಿಭಾಜ್ಯ ಅಂಗಗಳು ಎನ್ನುವಷ್ಟರ ಮಟ್ಟಿಗೆ ಅವುಗಳ ಸಂಬಂಧವನ್ನು ಕಂಡುಕೊಳ್ಳಲಾಯಿತು. ಫ್ರೇಜರನ ಪ್ರಕಾರ ದೇವತಾರಾಧೆನೆಯ ಮುಂದಿನ ಘಟ್ಟವೇ ಮಾಟ-ಮಂತ್ರ ಮುಂತಾದವು. ಮಂತ್ರ ವಿದ್ಯೆಯನ್ನು ಆತ ಪ್ರಾಚೀನ ವಿಜ್ಞಾನ ಎಂದೇ ಕರೆದಿದ್ದಾನೆ. ಧರ್ಮಕ್ಕೂ ಮಂತ್ರವಿದ್ಯೆಗೂ ಸಂಬಂಧವಿರುವಂತೆಯೇ ಮಂತ್ರವಿದ್ಯೆಗೂ ವಿಜ್ಞಾನಕ್ಕೂ ಹಲವಂಶಗಳಲ್ಲಿ ಸಂಬಂಧವಿದೆ ಎಂಬುದನ್ನು ಗುರುತಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ