AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ ಜಿಲ್ಲೆಗೆ ಬಂದು ಪ್ರಚಾರ ಪಡೆಯುವ ಅಗತ್ಯವಿಲ್ಲ; ಚುನಾವಣೆಗೆ ತಿಂಗಳಿರುವಾಗ ರಾಜಕಾರಣ ಮಾಡೋಣ: ಸಿಎಂ ಬೊಮ್ಮಾಯಿ

ಚುನಾವಣೆಗೆ 1 ತಿಂಗಳಿರುವಾಗ ರಾಜಕಾರಣ ಮಾಡೋಣ ಎಂದು ರಾಮನಗರದಲ್ಲಿ ವೇದಿಕೆಯಲ್ಲಿ ಅಶ್ವತ್ಥ ನಾರಾಯಣ, ಡಿಕೆ ಸುರೇಶ್, ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆಗೆ ಸಂಬಂಧಿಸಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ರಾಮನಗರ ಜಿಲ್ಲೆಗೆ ಬಂದು ಪ್ರಚಾರ ಪಡೆಯುವ ಅಗತ್ಯವಿಲ್ಲ; ಚುನಾವಣೆಗೆ ತಿಂಗಳಿರುವಾಗ ರಾಜಕಾರಣ ಮಾಡೋಣ: ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Updated By: ganapathi bhat|

Updated on:Jan 03, 2022 | 4:49 PM

Share

ರಾಮನಗರ: ರಾಜೀವ್ ಗಾಂಧಿ ಆರೋಗ್ಯ ವಿವಿ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ. ಇನ್ನೆರಡು ತಿಂಗಳಲ್ಲಿ ಬಗೆಹರಿಸ್ತೇನೆ, ಪರಿಹಾರದ ಭಾಗವಾಗುವೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಸ್ಥಾಪಿಸುತ್ತೇವೆ ಎಂದು ರಾಮನಗರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಜಲಸಂಪನ್ಮೂಲ ಸಚಿವನಾಗಿ ಬಂದಾಗ ಸ್ವಾಗತ ಕೋರಿದ್ದರು. ರಾಮನಗರ ಜಿಲ್ಲೆ ಚನ್ನಪಟ್ಟಣಕ್ಕೆ ಬಂದಾಗ ಎಲ್ಲರೂ ಸ್ವಾಗತಿಸಿದ್ರು. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್​ ಜಲಾಶಯದಲ್ಲಿ ನೀರು ಸೋರಿಕೆಯಾಗುತ್ತಿತ್ತು. ಕೆಆರ್​ಎಸ್​ ಜಲಾಶಯ ಗೇಟ್​ಗೆ ಗೋಣಿ ಚೀಲ ಕಟ್ಟಿದ್ದರು. ಒಂದೂವರೆ ವರ್ಷದಲ್ಲಿ ಎಲ್ಲಾ ಗೇಟ್​ಗಳನ್ನು ಸರಿಪಡಿಸಿದ್ದೆವು ಎಂದು ಅವರು ಹೇಳಿದ್ದಾರೆ.

ಜಿಲ್ಲೆಯ ಅಭಿವೃದ್ಧಿ, ಕರ್ನಾಟಕದ ಅಭಿವೃದ್ಧಿಗೆ ಸಂಕಲ್ಪ ಮಾಡಲಾಗಿದೆ. ಈ ಘಟನೆಗಳು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಲ್ಲ. ಚುನಾವಣೆಗೆ 1 ತಿಂಗಳಿರುವಾಗ ರಾಜಕಾರಣ ಮಾಡೋಣ ಎಂದು ರಾಮನಗರದಲ್ಲಿ ವೇದಿಕೆಯಲ್ಲಿ ಅಶ್ವತ್ಥ ನಾರಾಯಣ, ಡಿಕೆ ಸುರೇಶ್, ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆಗೆ ಸಂಬಂಧಿಸಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ರಾಮನಗರ ಜಿಲ್ಲೆ ಕರ್ನಾಟಕಕ್ಕೆ ಮಾದರಿಯಾಗುವ ಜಿಲ್ಲೆ. ಅಭಿಮಾನ, ಸಂತಸದಿಂದ ರಾಮನಗರಕ್ಕೆ ಬಂದಿದ್ದೇನೆ. ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಚುನಾವಣೆಯ 1 ತಿಂಗಳು ಮಾತ್ರ ರಾಜಕಾರಣ ಮಾಡೋಣ. ರಾಮನಗರ ಜಿಲ್ಲೆಗೆ ಬಂದು ಪ್ರಚಾರ ಪಡೆಯುವ ಅಗತ್ಯವಿಲ್ಲ. ರಾಮನಗರ ಜಿಲ್ಲೆಗೆ ಕೊಡುಗೆ ಕೊಡಲು ಇಲ್ಲಿಗೆ ಬಂದಿದ್ದೇನೆ. ಹಲವಾರು ವಿಚಾರಗಳು ನನೆಗುದಿಗೆ ಬಿದ್ದಿರುವುದು ಗೊತ್ತಿದೆ. ಜನರು ರಾಜಕಾರಣ ಮಾಡುವುದನ್ನು ಕಲಿಯಬೇಕು ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಜನರು ರಾಜಕಾರಣ ಮಾಡಿದರೆ ನಮ್ಮನ್ನು ಕೈಬಿಡುವುದಿಲ್ಲ. ಕರ್ನಾಟಕ ಏಕೀಕರಣಕ್ಕೆ ಹೋರಾಟ ಮಾಡಿದ ಜಿಲ್ಲೆ ಇದು. ರಾಮನಗರ ಜಿಲ್ಲೆಯ ಜೊತೆ ಹಳೆಯ ಸಂಬಂಧವಿದೆ. ಕೆಂಗಲ್ ಹನುಮಂತಯ್ಯ ಅಖಂಡ ಕರ್ನಾಟಕದ ಸಿಎಂ ಆಗಿದ್ರು. ಕೆಂಗಲ್ ಹನುಮಂತಯ್ಯನವರು ಸುಸಂಸ್ಕೃತ ಆಡಳಿತ ನೀಡಿದ್ರು. ಇಂದಿರಾ ಗಾಂಧಿಯವರ ಜತೆ ಅತ್ಯಂತ ಒಡನಾಟ ಹೊಂದಿದ್ದರು. ಪ್ರಧಾನಿ ಜತೆ ಹೆಚ್.ಡಿ. ದೇವೇಗೌಡರಿಗೆ ಅನ್ಯೋನ್ಯ ಸಂಬಂಧವಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಚಿಕ್ಕಕಲ್ಯಾ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ ನೀಡಿದ್ದಾರೆ. ಎತ್ತಿನಗಾಡಿಯಲ್ಲಿ ಆಗಮಿಸಿ ಸಿಎಂ ಬೊಮ್ಮಾಯಿಗೆ ಭವ್ಯ ಸ್ವಾಗತ ಕೋರಲಾಗಿದೆ. ಸಚಿವರಾದ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಡಾ.ಸುಧಾಕರ್, ಭೈರತಿ ಬಸವರಾಜ್, ಸಂಸದ ಡಿ.ಕೆ.ಸುರೇಶ್, ಎಂಎಲ್​ಸಿ ರವಿ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಮಠಾಧೀಶರು ಭಾಗಿ ಆಗಿದ್ದಾರೆ.

ಇದನ್ನೂ ಓದಿ: ರಾಮನಗರ: ವೇದಿಕೆಯಲ್ಲೇ ಬಿಜೆಪಿ- ಕಾಂಗ್ರೆಸ್ ನಾಯಕರ ಜಟಾಪಟಿ; ಅಶ್ವತ್ಥ ನಾರಾಯಣ ಫ್ಲೆಕ್ಸ್ ಹರಿದು ಆಕ್ರೋಶ!

ಇದನ್ನೂ ಓದಿ: ರಾಮನಗರ: ಸಿಎಂ ಸಮ್ಮುಖದಲ್ಲೇ ಅಶ್ವತ್ಥ ನಾರಾಯಣ, ಡಿಕೆ ಸುರೇಶ್ ವಾಕ್ಸಮರ; ವೇದಿಕೆಯಲ್ಲೇ ಧರಣಿ ನಡೆಸಿದ ಕಾಂಗ್ರೆಸ್!

Published On - 4:45 pm, Mon, 3 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ