AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ ಜಿಲ್ಲೆಗೆ ಬಂದು ಪ್ರಚಾರ ಪಡೆಯುವ ಅಗತ್ಯವಿಲ್ಲ; ಚುನಾವಣೆಗೆ ತಿಂಗಳಿರುವಾಗ ರಾಜಕಾರಣ ಮಾಡೋಣ: ಸಿಎಂ ಬೊಮ್ಮಾಯಿ

ಚುನಾವಣೆಗೆ 1 ತಿಂಗಳಿರುವಾಗ ರಾಜಕಾರಣ ಮಾಡೋಣ ಎಂದು ರಾಮನಗರದಲ್ಲಿ ವೇದಿಕೆಯಲ್ಲಿ ಅಶ್ವತ್ಥ ನಾರಾಯಣ, ಡಿಕೆ ಸುರೇಶ್, ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆಗೆ ಸಂಬಂಧಿಸಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ರಾಮನಗರ ಜಿಲ್ಲೆಗೆ ಬಂದು ಪ್ರಚಾರ ಪಡೆಯುವ ಅಗತ್ಯವಿಲ್ಲ; ಚುನಾವಣೆಗೆ ತಿಂಗಳಿರುವಾಗ ರಾಜಕಾರಣ ಮಾಡೋಣ: ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Jan 03, 2022 | 4:49 PM

Share

ರಾಮನಗರ: ರಾಜೀವ್ ಗಾಂಧಿ ಆರೋಗ್ಯ ವಿವಿ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ. ಇನ್ನೆರಡು ತಿಂಗಳಲ್ಲಿ ಬಗೆಹರಿಸ್ತೇನೆ, ಪರಿಹಾರದ ಭಾಗವಾಗುವೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಸ್ಥಾಪಿಸುತ್ತೇವೆ ಎಂದು ರಾಮನಗರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಜಲಸಂಪನ್ಮೂಲ ಸಚಿವನಾಗಿ ಬಂದಾಗ ಸ್ವಾಗತ ಕೋರಿದ್ದರು. ರಾಮನಗರ ಜಿಲ್ಲೆ ಚನ್ನಪಟ್ಟಣಕ್ಕೆ ಬಂದಾಗ ಎಲ್ಲರೂ ಸ್ವಾಗತಿಸಿದ್ರು. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್​ ಜಲಾಶಯದಲ್ಲಿ ನೀರು ಸೋರಿಕೆಯಾಗುತ್ತಿತ್ತು. ಕೆಆರ್​ಎಸ್​ ಜಲಾಶಯ ಗೇಟ್​ಗೆ ಗೋಣಿ ಚೀಲ ಕಟ್ಟಿದ್ದರು. ಒಂದೂವರೆ ವರ್ಷದಲ್ಲಿ ಎಲ್ಲಾ ಗೇಟ್​ಗಳನ್ನು ಸರಿಪಡಿಸಿದ್ದೆವು ಎಂದು ಅವರು ಹೇಳಿದ್ದಾರೆ.

ಜಿಲ್ಲೆಯ ಅಭಿವೃದ್ಧಿ, ಕರ್ನಾಟಕದ ಅಭಿವೃದ್ಧಿಗೆ ಸಂಕಲ್ಪ ಮಾಡಲಾಗಿದೆ. ಈ ಘಟನೆಗಳು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಲ್ಲ. ಚುನಾವಣೆಗೆ 1 ತಿಂಗಳಿರುವಾಗ ರಾಜಕಾರಣ ಮಾಡೋಣ ಎಂದು ರಾಮನಗರದಲ್ಲಿ ವೇದಿಕೆಯಲ್ಲಿ ಅಶ್ವತ್ಥ ನಾರಾಯಣ, ಡಿಕೆ ಸುರೇಶ್, ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆಗೆ ಸಂಬಂಧಿಸಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ರಾಮನಗರ ಜಿಲ್ಲೆ ಕರ್ನಾಟಕಕ್ಕೆ ಮಾದರಿಯಾಗುವ ಜಿಲ್ಲೆ. ಅಭಿಮಾನ, ಸಂತಸದಿಂದ ರಾಮನಗರಕ್ಕೆ ಬಂದಿದ್ದೇನೆ. ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಚುನಾವಣೆಯ 1 ತಿಂಗಳು ಮಾತ್ರ ರಾಜಕಾರಣ ಮಾಡೋಣ. ರಾಮನಗರ ಜಿಲ್ಲೆಗೆ ಬಂದು ಪ್ರಚಾರ ಪಡೆಯುವ ಅಗತ್ಯವಿಲ್ಲ. ರಾಮನಗರ ಜಿಲ್ಲೆಗೆ ಕೊಡುಗೆ ಕೊಡಲು ಇಲ್ಲಿಗೆ ಬಂದಿದ್ದೇನೆ. ಹಲವಾರು ವಿಚಾರಗಳು ನನೆಗುದಿಗೆ ಬಿದ್ದಿರುವುದು ಗೊತ್ತಿದೆ. ಜನರು ರಾಜಕಾರಣ ಮಾಡುವುದನ್ನು ಕಲಿಯಬೇಕು ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಜನರು ರಾಜಕಾರಣ ಮಾಡಿದರೆ ನಮ್ಮನ್ನು ಕೈಬಿಡುವುದಿಲ್ಲ. ಕರ್ನಾಟಕ ಏಕೀಕರಣಕ್ಕೆ ಹೋರಾಟ ಮಾಡಿದ ಜಿಲ್ಲೆ ಇದು. ರಾಮನಗರ ಜಿಲ್ಲೆಯ ಜೊತೆ ಹಳೆಯ ಸಂಬಂಧವಿದೆ. ಕೆಂಗಲ್ ಹನುಮಂತಯ್ಯ ಅಖಂಡ ಕರ್ನಾಟಕದ ಸಿಎಂ ಆಗಿದ್ರು. ಕೆಂಗಲ್ ಹನುಮಂತಯ್ಯನವರು ಸುಸಂಸ್ಕೃತ ಆಡಳಿತ ನೀಡಿದ್ರು. ಇಂದಿರಾ ಗಾಂಧಿಯವರ ಜತೆ ಅತ್ಯಂತ ಒಡನಾಟ ಹೊಂದಿದ್ದರು. ಪ್ರಧಾನಿ ಜತೆ ಹೆಚ್.ಡಿ. ದೇವೇಗೌಡರಿಗೆ ಅನ್ಯೋನ್ಯ ಸಂಬಂಧವಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಚಿಕ್ಕಕಲ್ಯಾ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ ನೀಡಿದ್ದಾರೆ. ಎತ್ತಿನಗಾಡಿಯಲ್ಲಿ ಆಗಮಿಸಿ ಸಿಎಂ ಬೊಮ್ಮಾಯಿಗೆ ಭವ್ಯ ಸ್ವಾಗತ ಕೋರಲಾಗಿದೆ. ಸಚಿವರಾದ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಡಾ.ಸುಧಾಕರ್, ಭೈರತಿ ಬಸವರಾಜ್, ಸಂಸದ ಡಿ.ಕೆ.ಸುರೇಶ್, ಎಂಎಲ್​ಸಿ ರವಿ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಮಠಾಧೀಶರು ಭಾಗಿ ಆಗಿದ್ದಾರೆ.

ಇದನ್ನೂ ಓದಿ: ರಾಮನಗರ: ವೇದಿಕೆಯಲ್ಲೇ ಬಿಜೆಪಿ- ಕಾಂಗ್ರೆಸ್ ನಾಯಕರ ಜಟಾಪಟಿ; ಅಶ್ವತ್ಥ ನಾರಾಯಣ ಫ್ಲೆಕ್ಸ್ ಹರಿದು ಆಕ್ರೋಶ!

ಇದನ್ನೂ ಓದಿ: ರಾಮನಗರ: ಸಿಎಂ ಸಮ್ಮುಖದಲ್ಲೇ ಅಶ್ವತ್ಥ ನಾರಾಯಣ, ಡಿಕೆ ಸುರೇಶ್ ವಾಕ್ಸಮರ; ವೇದಿಕೆಯಲ್ಲೇ ಧರಣಿ ನಡೆಸಿದ ಕಾಂಗ್ರೆಸ್!

Published On - 4:45 pm, Mon, 3 January 22

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು