AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿ ಫೋಟೋ ಅಶ್ಲೀಲವಾಗಿ ಎಡಿಟ್​​ ಮಾಡಿ ಬ್ಲ್ಯಾಕ್​​ಮೇಲ್​: ಆರೋಪಿ ಅರೆಸ್ಟ್

ಆ್ಯಪ್‌ಗಳ ಮೂಲಕ ಯುವತಿಯರನ್ನು ಪರಿಚಯಿಸಿಕೊಂಡು, ವರ್ಕ್‌ ಫ್ರಮ್‌ ಹೋಮ್‌ ಕೆಲಸದ ಆಮಿಷವೊಡ್ಡಿ ಫೋಟೋ ಪಡೆದು ಅಶ್ಲೀಲವಾಗಿ ಎಡಿಟ್ ಮಾಡಿ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ ಆರೋಪಿಯನ್ನು ಕಗ್ಗಲಿಪುರ ಪೊಲೀಸರು ಬಂಧಿಸಿದ್ದಾರೆ. ಯುವತಿಯೊಬ್ಬರ ದೂರು ಆಧರಿಸಿ ತನಿಖೆಗಿಳಿದ ಪೊಲೀಸರು ಬಳ್ಳಾರಿ ಮೂಲದ ಯುವಕನನ್ನು ಅರೆಸ್ಟ್​​ ಮಾಡಿದ್ದು, ಈತ ಇನ್ನೂ ಹಲವು ಯುವತಿಯರಿಗೆ ಇದೇ ರೀತಿ ಕಿರುಕುಳ ನೀಡಿದ್ದ ಎಂಬುದು ಈ ವೇಳೆ ಗೊತ್ತಾಗಿದೆ.

ಯುವತಿ ಫೋಟೋ ಅಶ್ಲೀಲವಾಗಿ ಎಡಿಟ್​​ ಮಾಡಿ ಬ್ಲ್ಯಾಕ್​​ಮೇಲ್​: ಆರೋಪಿ ಅರೆಸ್ಟ್
ಆರೋಪಿ ಶಿವಶಂಕರ್
ಪ್ರಶಾಂತ್​ ಬಿ.
| Edited By: |

Updated on: Dec 09, 2025 | 2:54 PM

Share

ರಾಮನಗರ, ಡಿಸೆಂಬರ್​​ 09: ಆ್ಯಪ್​​ ಒಂದರ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡು, ಬಳಿಕ ಅವರನ್ನು ಬ್ಲ್ಯಾಕ್​ಮೇಲ್​​ ಮಾಡುತ್ತಿದ್ದ ಆರೋಪಿಯನ್ನು ಕಗ್ಗಲಿಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ಮೂಲದ, ಸದ್ಯ ಬೆಂಗಳೂರಿನ ಮಲ್ಲೇಶ್ವರಂ ವಾಸಿ ಶಿವಶಂಕರ್ ಬಂಧಿತ ಆರೋಪಿಯಾಗಿದ್ದಾನೆ. ಯುವತಿಯರಿಗೆ ವರ್ಕ್‌ ಫ್ರಮ್‌ ಹೋಮ್‌ ಕೆಲಸ ಕೊಡಿಸುವುದಾಗಿ ನಂಬಿಸುತ್ತಿದ್ದ ಈತ ಅವರಿಂದ ಫೋಟೋ ಪಡೆದುಕೊಳ್ಳುತ್ತಿದ್ದ. ಬಳಿಕ ಅದನ್ನು ಅಶ್ಲೀಲವಾಗಿ ಎಡಿಟ್​​ ಮಾಡಿ ಬೆದರಿಸುತ್ತಿದ್ದ ಎನ್ನಲಾಗಿದೆ.

ಕಗ್ಗಲಿಪುರ ಮೂಲದ ಯುವತಿಗೆ ಬ್ಲ್ಯಾಕ್​​ಮೇಲ್​​

ಕೆಲ ದಿನಗಳ ಕೆಳಗೆ ಬೆಂಗಳೂರು ಹೊರವಲಯದ ಕಗ್ಗಲಿಪುರ ಮೂಲದ ಯುವತಿಯೊಬ್ಬಳಿಗೆ ಈ ಶಿವಶಂಕರ್ ಎಂಬಾತನ ಪರಿಚಯ ಆಗಿತ್ತು. ಈಕೆಗೂ ಈತ ಕೆಲಸ ಕೊಡಿಸುವುದಾಗಿ ನಂಬಿಸಿದ್ದ. ಅಲ್ಲದೆ ಆಕೆಯಿಂದ 500 ರೂಪಾಯಿ ಹಣ ಮತ್ತು ಫೋಟೋ ಸೇರಿ ಕೆಲ ದಾಖಲೆಗಳನ್ನು ಪಡೆದುಕೊಂಡಿದ್ದ. ಯುವತಿ ನೀಡಿದ್ದ ಫೋಟೋವನ್ನು ಅಶ್ಲೀಲವಾಗಿ ಎಡಿಟ್​​ ಮಾಡಿದ್ದ ಆರೋಪಿ ಅದನ್ನು ಆಕೆಯ ಪರಿಚಯಸ್ಥರಿಗೆ ಕಳುಹಿಸಿ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ನೊಂದ ಯುವತಿ ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ರು. ಯುವತಿಯ ದೂರಿನ ಅನ್ವಯ ತನಿಖೆಗಿಳಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಪ್ರಗ್ನೆಂಟ್ ಮಾಡಿ ಬಳಿಕ ಗರ್ಭಪಾತ ಮಾಡಿಸಿದ್ದ‌, ಡೆತ್​​ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ

ಹಲವರಿಗೆ ಕಿರುಕುಳ ನೀಡಿರುವ ಆರೋಪ

ಅಂದಹಾಗೆ ಬಳ್ಳಾರಿ ಮೂಲದ ಶಿವಶಂಕರ್ ಬೆಂಗಳೂರಿನಲ್ಲಿ ಕೊರಿಯರ್ ಹಾಗೂ ಓಲಾ ಬೈಕ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಆ್ಯಪ್ ಮೂಲಕ ಸಾಕಷ್ಟು ಯುವತಿಯರನ್ನ ಪರಿಚಯ ಮಾಡಿಕೊಳ್ಳುತ್ತಿದ್ದ ಈತ ಹಲವರಿಗೆ ಕಿರುಕುಳ ನೀಡಿರುವ ಆರೋಪವೂ ಕೇಳಿಬಂದಿದೆ. ಮನೆಯಿಂದಲೇ ಮಾಡುವ ಕೆಲಸ ಕೊಡಿಸುವುದಾಗಿ ಹೇಳುವ ಈತನನ್ನು ನಂಬಿ ಮೋಸ ಹೋದವರು ಹಲವರಿದ್ದು, ಇಂತಹ ವ್ಯಕ್ತಿಗಳಿಂದ ಆದಷ್ಟು ದೂರವಿರುವಂತೆ ಪೊಲೀಸರು ಎಚ್ಚರಿಸಿದ್ದಾರೆ. ಯುವತಿಯರ ಸ್ನೇಹವನ್ನೇ ಬಂಡವಾಳ ಮಾಡಿಕೊಂಡು ಕಿರುಕುಳ ನೀಡುತ್ತಿದ್ದ ಪಾಪಿ ಕೊನೆಗೂ ಅಂದರ್ ಆಗಿದ್ದು, ಇದೀಗ ಜೈಲಿನಲ್ಲಿ ಮುದ್ದೆ ಮುರಿಯುವಂತಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ