AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗೆ ನಿರಾಕರಣೆ: ಮಾತನಾಡಲು ಕರೆದು ಜಿಮ್ ಟ್ರೈನರ್​ಗೆ ಚಾಕು ಹಾಕಿದ ಪ್ರೇಯಸಿ

ಪ್ರೇಯಸಿಯಿಂದ ಜಿಮ್ ಟ್ರೈನರ್​​ಗೆ ಚಾಕು ಇರಿದಿರುವಂತಹ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಬಿಡದಿಯಲ್ಲಿ ನಡೆದಿದೆ. ಇಬ್ಬರು ಒಂದು ವರ್ಷ ಪರಸ್ಪರ ಪ್ರೀತಿಸಿ ಇದೀಗ ಮದುವೆ ನಿರಾಕರಿಸಿದ ಹಿನ್ನೆಲೆ ಪ್ರೇಯಸಿ ಚಾಕುವಿನಿಂದ ಇರಿದ್ದಾಳೆ. ಸದ್ಯ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯನ್ನ ಅರೆಸ್ಟ್​ ಮಾಡಲಾಗಿದೆ.

ಮದುವೆಗೆ ನಿರಾಕರಣೆ: ಮಾತನಾಡಲು ಕರೆದು ಜಿಮ್ ಟ್ರೈನರ್​ಗೆ ಚಾಕು ಹಾಕಿದ ಪ್ರೇಯಸಿ
ಯುವಕ, ಯುವತಿImage Credit source: tv9 kannada
ಪ್ರಶಾಂತ್​ ಬಿ.
| Edited By: |

Updated on: Feb 27, 2026 | 7:43 PM

Share

ರಾಮನಗರ, ಫೆಬ್ರವರಿ 27: ಸಾಮಾನ್ಯವಾಗಿ ಲವ್ ಫೇಲ್ಯೂರ್ ಆದಾಗ ಯುವತಿಯ ಮೇಲೆ ಪಾಗಲ್ ಪ್ರೇಮಿ, ಅಟ್ಯಾಕ್ ಮಾಡುವುದನ್ನ ಕೇಳಿದ್ದೇವೆ, ನೋಡಿದ್ದೇವೆ. ಆದರೆ ಇಲ್ಲೊಬ್ಬಳು ಭಗ್ನ ಪ್ರೇಯಸಿ, ತನ್ನ ಲವರ್​ಗೆ ಚಾಕುವಿನಿಂದ ಇರಿದಿರುವಂತಹ (stabbing) ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಬಿಡದಿ ನಡೆದಿದೆ. ಸದ್ಯ ಯುವಕ ಆಸ್ಪತ್ರೆಗೆ ದಾಖಲಾದರೆ, ಯುವತಿ ಪೊಲೀಸ್ ಠಾಣೆ ಪಾಲಾಗಿದ್ದಾಳೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾನು ಹುಚ್ಚಿಯಂತೆ ಪ್ರೀತಿಸಿದ ಹುಡುಗ ಸಾಕಷ್ಟು ಅವೈಡ್​ ಮಾಡಿದ್ದಲ್ಲದೇ ಮದುವೆಯಾಗಲು ಕೂಡ ನಿರಾಕರಿಸಿದ್ದಕ್ಕೆ ಪ್ರೇಯಿಸಿಯೊಬ್ಬಳು ತನ್ನ ಪ್ರಿಯಕರನಿಗೆ ಚಾಕುವಿನಿಂದ ‌ಚುಚ್ಚಿ ಹತ್ಯೆಗೆ ಯತ್ನಿಸಿದ್ದಾಳೆ. ಪ್ರೇಯಸಿ ಸುಧಾ(30)ಳಿಂದ ಪ್ರಿಯಕರ ವೇಣುಗೋಪಾಲ್ (27)​ಗೆ ಚಾಕು ಇರಿಯಲಾಗಿದೆ.

ಇದನ್ನೂ ಓದಿ: ಅಪ್ರಾಪ್ತೆ ಮನೆ ಮುಂದೆ ಲಾಂಗು ಮಚ್ಚು ಹಿಡಿದು ಗಲಾಟೆ ಮಾಡಿದ ಪಾಗಲ್‌ ಪ್ರೇಮಿ ಅರೆಸ್ಟ್‌

ವೇಣುಗೋಪಾಲ್ ಬಿಡದಿಯಲ್ಲಿ ಜಿಮ್ ಟ್ರೈನರ್ ಆಗಿದ್ದಾರೆ. ಸುಧಾ ಖಾಸಗಿ ಕಂಪನೊಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಜಿಮ್​ವೊಂದರಲ್ಲಿ ಪರಿಚಯವಾದ ಇವರು, ವಯಸ್ಸಿನ ಅಂತರವಿದ್ದರೂ ಪ್ರೇಮಾಂಕುರವಾಗಿತ್ತು. ಕಳೆದ ಒಂದು ವರ್ಷದಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಎಲ್ಲೆಡೆ ಕೈಕೈ ಹಿಡಿದು ಸುತ್ತಿದ್ದಾರೆ. ವೇಣು ಮನೆಗೆ  ಸುಧಾ ಬಂದು ಹೋಗುತ್ತಿದ್ದಳು. ಹೀಗಿರುವಾಗ ಕಳೆದ ನಾಲ್ಕು ‌ತಿಂಗಳಿಂದ ವೇಣುಗೋಪಾಲ್, ಸುಧಾಳನ್ನು ಅವೈಡ್ ಮಾಡುತ್ತಿದ್ದನಂತೆ. ವಿವಾಹವಾಗಲು ಸಹ ನಿರಾಕರಿಸಿದನಂತೆ. ಈ ಮಧ್ಯೆ ಬೇರೊಬ್ಬ ಯುವತಿ ಜೊತೆ ವೇಣುಗೋಪಾಲ್ ಸುತ್ತಾಡುತ್ತಿದ್ದರಿಂದ ಕೋಪಗೊಂಡ ಸುಧಾ, ವೇಣುಗೋಪಾಲ್​​ ಎದೆ, ಹೊಟ್ಟೆ, ಕೈ ಭಾಗಕ್ಕೆ ಚಾಕುವಿನಿಂದ ಇರಿದಿದ್ದಾಳೆ.

ಮಾತನಾಡಲು ಕರೆಸಿ ಚಾಕು ಹಾಕಿದ ಪ್ರೇಯಸಿ

ಅಂದಹಾಗೆ ಕಳೆದ ಒಂದು ತಿಂಗಳಿಂದ ಮಾತನಾಡಬೇಕು ಅಂತಾ ಸುಧಾ ಕರೆದಾಗೆಲ್ಲಾ ಏನೇನೋ ಕಾರಣ ಹೇಳಿ ವೇಣು‌ ತಪ್ಪಿಸಿಕೊಂಡಿದ್ದಾನೆ. ಸಿಕ್ಕಿದ್ರು ಕೂಡ ವೇಣು ಕಿರಿಕಿರಿ ಮಾಡುತ್ತಿದ್ದನಂತೆ. ಹೀಗಾಗಿ ಒಂದು ವಾರದಿಂದ ತನ್ನ ಬ್ಯಾಗ್​ನಲ್ಲಿ ಸುಧಾ ಚಾಕು ಇಟ್ಟುಕೊಂಡು ಸುತ್ತಾಡಿದ್ದಾಳೆ. ನಿನ್ನ ಜೊತೆ ಮಾತನಾಡಬೇಕು ಎಂದು ನಿನ್ನೆ ಸಂಜೆ ವೇಣುಗೋಪಾಲ್​ನನ್ನ ಮನೆಯಿಂದ ಹೊರಕ್ಕೆ ಕರೆಸಿಕೊಂಡು ಕೆಲಕಾಲ ಮಾತನಾಡಿದ ಸಾಧಾ ಬಳಿಕ ಏಕಾಏಕಿ ಹೊಟ್ಟೆ, ಎದೆ, ಕೈಗೆ ಚಾಕು ಹಾಕಿದ್ದಾಳೆ. ಆನಂತರ ಅಲ್ಲಿಂದ ಎಸ್ಕೇಪ್ ಆಗಿದ್ದಾಳೆ. ರಕ್ತದ ಮಡುವಿನಲ್ಲಿಯೇ ಕುಟುಂಬಸ್ಥರಿಗೆ ಹಾಗೂ ಸ್ನೇಹಿತರಿಗೆ ವೇಣು ಕರೆ ಮಾಡಿದ್ದಾನೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ.

ಇದನ್ನೂ ಓದಿ: ಪ್ರೇಮಿಗಳ ದಿನದಂದೇ ಹರಿದ ನೆತ್ತರು: ಲವ್​ ಪ್ರಪೋಸಲ್​​ ಒಪ್ಪದಿದ್ದಕ್ಕೆ ಯುವತಿಗೆ ಇರಿದ ಪಾಗಲ್​​

ಇನ್ನು ಘಟನೆ ನಂತರ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಸುಧಾಳನ್ನ ವಶಕ್ಕೆ ಪಡೆದು ವಿಚಾರ ಮಾಡುತ್ತಿದ್ದಾರೆ. ಒಟ್ಟಾರೆ ಪ್ರೀತಿಯಲ್ಲಿ ಮೋಸ, ವಿವಾಹಕ್ಕೆ ನಿರಾಕರಣೆ ಹಿನ್ನೆಲೆ ಲವರ್​ಗೆ ಭಗ್ನ ಪ್ರೇಯಿಸಿ ಚಾಕುವಿನಿಂದ ಚುಚ್ಚಿ ಇದೀಗ ಪೊಲೀಸರ ಅಥಿತಿಯಾಗಿದ್ದಾಳೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್