AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗೆ ನಿರಾಕರಣೆ: ಮಾತನಾಡಲು ಕರೆದು ಜಿಮ್ ಟ್ರೈನರ್​ಗೆ ಚಾಕು ಹಾಕಿದ ಪ್ರೇಯಸಿ

ಪ್ರೇಯಸಿಯಿಂದ ಜಿಮ್ ಟ್ರೈನರ್​​ಗೆ ಚಾಕು ಇರಿದಿರುವಂತಹ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಬಿಡದಿಯಲ್ಲಿ ನಡೆದಿದೆ. ಇಬ್ಬರು ಒಂದು ವರ್ಷ ಪರಸ್ಪರ ಪ್ರೀತಿಸಿ ಇದೀಗ ಮದುವೆ ನಿರಾಕರಿಸಿದ ಹಿನ್ನೆಲೆ ಪ್ರೇಯಸಿ ಚಾಕುವಿನಿಂದ ಇರಿದ್ದಾಳೆ. ಸದ್ಯ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯನ್ನ ಅರೆಸ್ಟ್​ ಮಾಡಲಾಗಿದೆ.

ಮದುವೆಗೆ ನಿರಾಕರಣೆ: ಮಾತನಾಡಲು ಕರೆದು ಜಿಮ್ ಟ್ರೈನರ್​ಗೆ ಚಾಕು ಹಾಕಿದ ಪ್ರೇಯಸಿ
ಯುವಕ, ಯುವತಿImage Credit source: tv9 kannada
ಪ್ರಶಾಂತ್​ ಬಿ.
| Edited By: |

Updated on: Feb 27, 2026 | 7:43 PM

Share

ರಾಮನಗರ, ಫೆಬ್ರವರಿ 27: ಸಾಮಾನ್ಯವಾಗಿ ಲವ್ ಫೇಲ್ಯೂರ್ ಆದಾಗ ಯುವತಿಯ ಮೇಲೆ ಪಾಗಲ್ ಪ್ರೇಮಿ, ಅಟ್ಯಾಕ್ ಮಾಡುವುದನ್ನ ಕೇಳಿದ್ದೇವೆ, ನೋಡಿದ್ದೇವೆ. ಆದರೆ ಇಲ್ಲೊಬ್ಬಳು ಭಗ್ನ ಪ್ರೇಯಸಿ, ತನ್ನ ಲವರ್​ಗೆ ಚಾಕುವಿನಿಂದ ಇರಿದಿರುವಂತಹ (stabbing) ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಬಿಡದಿ ನಡೆದಿದೆ. ಸದ್ಯ ಯುವಕ ಆಸ್ಪತ್ರೆಗೆ ದಾಖಲಾದರೆ, ಯುವತಿ ಪೊಲೀಸ್ ಠಾಣೆ ಪಾಲಾಗಿದ್ದಾಳೆ. ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾನು ಹುಚ್ಚಿಯಂತೆ ಪ್ರೀತಿಸಿದ ಹುಡುಗ ಸಾಕಷ್ಟು ಅವೈಡ್​ ಮಾಡಿದ್ದಲ್ಲದೇ ಮದುವೆಯಾಗಲು ಕೂಡ ನಿರಾಕರಿಸಿದ್ದಕ್ಕೆ ಪ್ರೇಯಿಸಿಯೊಬ್ಬಳು ತನ್ನ ಪ್ರಿಯಕರನಿಗೆ ಚಾಕುವಿನಿಂದ ‌ಚುಚ್ಚಿ ಹತ್ಯೆಗೆ ಯತ್ನಿಸಿದ್ದಾಳೆ. ಪ್ರೇಯಸಿ ಸುಧಾ(30)ಳಿಂದ ಪ್ರಿಯಕರ ವೇಣುಗೋಪಾಲ್ (27)​ಗೆ ಚಾಕು ಇರಿಯಲಾಗಿದೆ.

ಇದನ್ನೂ ಓದಿ: ಅಪ್ರಾಪ್ತೆ ಮನೆ ಮುಂದೆ ಲಾಂಗು ಮಚ್ಚು ಹಿಡಿದು ಗಲಾಟೆ ಮಾಡಿದ ಪಾಗಲ್‌ ಪ್ರೇಮಿ ಅರೆಸ್ಟ್‌

ವೇಣುಗೋಪಾಲ್ ಬಿಡದಿಯಲ್ಲಿ ಜಿಮ್ ಟ್ರೈನರ್ ಆಗಿದ್ದಾರೆ. ಸುಧಾ ಖಾಸಗಿ ಕಂಪನೊಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಜಿಮ್​ವೊಂದರಲ್ಲಿ ಪರಿಚಯವಾದ ಇವರು, ವಯಸ್ಸಿನ ಅಂತರವಿದ್ದರೂ ಪ್ರೇಮಾಂಕುರವಾಗಿತ್ತು. ಕಳೆದ ಒಂದು ವರ್ಷದಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಎಲ್ಲೆಡೆ ಕೈಕೈ ಹಿಡಿದು ಸುತ್ತಿದ್ದಾರೆ. ವೇಣು ಮನೆಗೆ  ಸುಧಾ ಬಂದು ಹೋಗುತ್ತಿದ್ದಳು. ಹೀಗಿರುವಾಗ ಕಳೆದ ನಾಲ್ಕು ‌ತಿಂಗಳಿಂದ ವೇಣುಗೋಪಾಲ್, ಸುಧಾಳನ್ನು ಅವೈಡ್ ಮಾಡುತ್ತಿದ್ದನಂತೆ. ವಿವಾಹವಾಗಲು ಸಹ ನಿರಾಕರಿಸಿದನಂತೆ. ಈ ಮಧ್ಯೆ ಬೇರೊಬ್ಬ ಯುವತಿ ಜೊತೆ ವೇಣುಗೋಪಾಲ್ ಸುತ್ತಾಡುತ್ತಿದ್ದರಿಂದ ಕೋಪಗೊಂಡ ಸುಧಾ, ವೇಣುಗೋಪಾಲ್​​ ಎದೆ, ಹೊಟ್ಟೆ, ಕೈ ಭಾಗಕ್ಕೆ ಚಾಕುವಿನಿಂದ ಇರಿದಿದ್ದಾಳೆ.

ಮಾತನಾಡಲು ಕರೆಸಿ ಚಾಕು ಹಾಕಿದ ಪ್ರೇಯಸಿ

ಅಂದಹಾಗೆ ಕಳೆದ ಒಂದು ತಿಂಗಳಿಂದ ಮಾತನಾಡಬೇಕು ಅಂತಾ ಸುಧಾ ಕರೆದಾಗೆಲ್ಲಾ ಏನೇನೋ ಕಾರಣ ಹೇಳಿ ವೇಣು‌ ತಪ್ಪಿಸಿಕೊಂಡಿದ್ದಾನೆ. ಸಿಕ್ಕಿದ್ರು ಕೂಡ ವೇಣು ಕಿರಿಕಿರಿ ಮಾಡುತ್ತಿದ್ದನಂತೆ. ಹೀಗಾಗಿ ಒಂದು ವಾರದಿಂದ ತನ್ನ ಬ್ಯಾಗ್​ನಲ್ಲಿ ಸುಧಾ ಚಾಕು ಇಟ್ಟುಕೊಂಡು ಸುತ್ತಾಡಿದ್ದಾಳೆ. ನಿನ್ನ ಜೊತೆ ಮಾತನಾಡಬೇಕು ಎಂದು ನಿನ್ನೆ ಸಂಜೆ ವೇಣುಗೋಪಾಲ್​ನನ್ನ ಮನೆಯಿಂದ ಹೊರಕ್ಕೆ ಕರೆಸಿಕೊಂಡು ಕೆಲಕಾಲ ಮಾತನಾಡಿದ ಸಾಧಾ ಬಳಿಕ ಏಕಾಏಕಿ ಹೊಟ್ಟೆ, ಎದೆ, ಕೈಗೆ ಚಾಕು ಹಾಕಿದ್ದಾಳೆ. ಆನಂತರ ಅಲ್ಲಿಂದ ಎಸ್ಕೇಪ್ ಆಗಿದ್ದಾಳೆ. ರಕ್ತದ ಮಡುವಿನಲ್ಲಿಯೇ ಕುಟುಂಬಸ್ಥರಿಗೆ ಹಾಗೂ ಸ್ನೇಹಿತರಿಗೆ ವೇಣು ಕರೆ ಮಾಡಿದ್ದಾನೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ.

ಇದನ್ನೂ ಓದಿ: ಪ್ರೇಮಿಗಳ ದಿನದಂದೇ ಹರಿದ ನೆತ್ತರು: ಲವ್​ ಪ್ರಪೋಸಲ್​​ ಒಪ್ಪದಿದ್ದಕ್ಕೆ ಯುವತಿಗೆ ಇರಿದ ಪಾಗಲ್​​

ಇನ್ನು ಘಟನೆ ನಂತರ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಸುಧಾಳನ್ನ ವಶಕ್ಕೆ ಪಡೆದು ವಿಚಾರ ಮಾಡುತ್ತಿದ್ದಾರೆ. ಒಟ್ಟಾರೆ ಪ್ರೀತಿಯಲ್ಲಿ ಮೋಸ, ವಿವಾಹಕ್ಕೆ ನಿರಾಕರಣೆ ಹಿನ್ನೆಲೆ ಲವರ್​ಗೆ ಭಗ್ನ ಪ್ರೇಯಿಸಿ ಚಾಕುವಿನಿಂದ ಚುಚ್ಚಿ ಇದೀಗ ಪೊಲೀಸರ ಅಥಿತಿಯಾಗಿದ್ದಾಳೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ