AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ರೈತನಿಗೆ ಉಪಯೋಗವಿಲ್ಲದ ಈ ಬಂದ್ ಯಾಕೆ? ರಸ್ತೆಗೆ ಸೌತೆಕಾಯಿ ಬಿಸಾಡಿ ಕಣ್ಣೀರಿಟ್ಟ ರೈತ

ರಾಮನಗರದಲ್ಲಿ ರೈತ ಕಣ್ಣೀರಾಕಿದ್ದು 400 ರೂಪಾಯಿಗೆ ಸೇಲ್ ಆಗುತ್ತಿದ್ದ ಸೌತೆಕಾಯಿ ಮೂಟೆಯನ್ನು 50 ರೂಗೆ ಕೊಡುತ್ತೀನಿ ಅಂದರೂ ಯಾರು ಖರೀದಿಸುತ್ತಿಲ್ಲ. ಬೆಂಗಳೂರು ಬಂದ್​ನಿಂದಾಗಿ ಜನರಿಲ್ಲ. ಬೇಡಿಕೆ ಕುಸಿದಿದೆ ಎಂದು ರೈತ ಅಳಲು ತೋಡಿಕೊಂಡಿದ್ದಾರೆ. ರಾಮನಗರದ ಐಜೂರು ಸರ್ಕಲ್ ಬಳಿ ಜಯ ಕರ್ನಾಟಕ ಧರಣಿ ನಡೆಸುತ್ತಿದೆ. ತಮಿಳುನಾಡು ಸಿಎಂ ಸ್ಟಾಲಿನ್ ವಿರುದ್ಧ ಘೋಷಣೆ ಕೂಗಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಧರಣಿ ನಡೆಸಿದ್ದಾರೆ.

ರಾಮನಗರ: ರೈತನಿಗೆ ಉಪಯೋಗವಿಲ್ಲದ ಈ ಬಂದ್ ಯಾಕೆ? ರಸ್ತೆಗೆ ಸೌತೆಕಾಯಿ ಬಿಸಾಡಿ ಕಣ್ಣೀರಿಟ್ಟ ರೈತ
ರೈತ ಶ್ರೀಧರ್
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: ಆಯೇಷಾ ಬಾನು|

Updated on: Sep 26, 2023 | 11:10 AM

Share

ರಾಮನಗರ, ಸೆ.26: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದಕ್ಕೆ ಖಂಡನೆ (Cauvery Water Dispute) ವ್ಯಕ್ತಪಡಿಸಿ ರಾಮನಗರದ (Ramanagara) ಐಜೂರು ಸರ್ಕಲ್ ಬಳಿ ಜಯ ಕರ್ನಾಟಕ ಧರಣಿ ನಡೆಸುತ್ತಿದೆ. ತಮಿಳುನಾಡು ಸಿಎಂ ಸ್ಟಾಲಿನ್ (MK Stalin) ವಿರುದ್ಧ ಘೋಷಣೆ ಕೂಗಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಧರಣಿ ನಡೆಸಿದ್ದಾರೆ. ಹಾಗೂ ಸಿಎಂ ಸ್ಟಾಲಿನ್ ಭಾವಚಿತ್ರ ಇಟ್ಟು ಮೌನಾಚರಣೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ. ಇನ್ನು ಮತ್ತೊಂದೆಡೆ ರೈತನಿಗೆ ಉಪಯೋಗವಿಲ್ಲದ ಬಂದ್ ಯಾಕೆ? ಎಂದು ರೈತನೋರ್ವ ಅಳಲು ತೋಡಿಕೊಂಡಿದ್ದಾರೆ. ಬೆಂಗಳೂರು ಬಂದ್ ಕಾರಣ ಜನರಿಲ್ಲ. ಬೇಡಿಕೆ ಕುಸಿದಿದೆ ಎಂದು ತಲೆ ಮೇಲೆ ಕೈ ಇಟ್ಟು ಕೂತಿದ್ದಾರೆ.

ತಮಿಳುನಾಡು ಸಿಎಂ ಸ್ಟಾಲಿನ್‌ ಭಾವ ಚಿತ್ರವಿಟ್ಟು ಮೌನಾಚರಣೆ

ಐಜೂರು ಸರ್ಕಲ್ ಬಳಿ ತಮಿಳುನಾಡು ಸಿಎಂ ಸ್ಟಾಲಿನ್ ವಿರುದ್ಧ ಧರಣಿ ನಡೆಸಲಾಗುತ್ತಿದೆ. ದೇಶದ ಪಾಲಿಗೆ ಸ್ಟಾಲಿನ್ ಸತ್ತೋದ ಎಂದು ಊದಿನ ಕಡ್ಡಿ ಹಚ್ಚಿ, ಭಾವ ಚಿತ್ರಕ್ಕೆ ಹೂವಿನ ಹಾರ ಹಾಕಿ ಮೌನಾಚರಣೆ ಮಾಡಿ ಸ್ಟಾಲಿನ್‌ ಮತ್ತೆ ಹುಟ್ಟಿ ಬರಬೇಡ ಎಂದು ಘೋಷಣೆ ಕೂಗಿ ಆಕ್ರೋಶ ಹೊರ ಹಾಕಲಾಗಿದೆ. ಕಾವೇರಿ ವಿಚಾರವಾಗಿ ತಮಿಳುನಾಡು ನಡೆದುಕೊಂಡ ರೀತಿಗೆ ಜಯ ಕರ್ನಾಟಕ ಸಂಘಟನೆ ವಿರೋಧ ಹೊರ ಹಾಕಿದೆ.

ರೈತನಿಗೆ ಉಪಯೋಗಿಲ್ಲದ ಬಂದ್ ಯಾಕೆ ಬೇಕು?

ಇನ್ನು ಮತ್ತೊಂದೆಡೆ ರಾಮನಗರದಲ್ಲಿ ರೈತ ಕಣ್ಣೀರಾಕಿದ್ದು 400 ರೂಪಾಯಿಗೆ ಸೇಲ್ ಆಗುತ್ತಿದ್ದ ಸೌತೆಕಾಯಿ ಮೂಟೆಯನ್ನು 50 ರೂಗೆ ಕೊಡುತ್ತೀನಿ ಅಂದರೂ ಯಾರು ಖರೀದಿಸುತ್ತಿಲ್ಲ. ಬೆಂಗಳೂರು ಬಂದ್​ನಿಂದಾಗಿ ಜನರಿಲ್ಲ. ಬೇಡಿಕೆ ಕುಸಿದಿದೆ ಎಂದು ರೈತ ಅಳಲು ತೋಡಿಕೊಂಡಿದ್ದಾರೆ. ಐವತ್ತು ರೂಪಾಯಿಗೆ ಒಂದು ಮೂಟೆ ಅಂದ್ರೂ ಯಾರು ಸೌತೆಕಾಯಿ ಖರೀದಿಸುತ್ತಿಲ್ಲ. ಮಾರಾಟಕ್ಕಾಗಿ ನೂರಾರು ಮೂಟೆ ಸೌತೆಕಾಯಿ ತಂದಿದ್ದೆ. ಜನರಿಲ್ಲದೆ ಮಾರಾಟವಾಗುತ್ತಿಲ್ಲ ಎಂದು ರೈತ ಶ್ರೀಧರ್ ಕಂಗಾಲಾಗಿದ್ದಾರೆ. ತನಗೆ ನ್ಯಾಯ ದೊರಕಿಸುವಂತೆ ಕೋರಿ ಕಣ್ಣೀರಿಟ್ಟಿದ್ದಾರೆ. ಇನ್ನು ಜನರಿಲ್ಲದೆ ರಾಮನಗರ ಎಪಿಎಂಪಿ ಖಾಲಿ ಖಾಲಿಯಾಗಿದೆ.

ಇದನ್ನೂ ಓದಿ: ಬೆಂಗಳೂರು ಬಂದ್: ಬಸ್ ಇದ್ದರೂ, ಪ್ರಯಾಣಿಕರಿಲ್ಲದೆ ಬಿಕೋ ಎನುತಿದೆ ಮೆಜೆಸ್ಟಿಕ್

ಸೌತೆಕಾಯಿ ರಸ್ತೆಗೆ ಬಿಸಾಡಿ ಆಕ್ರೋಶ

ಇನ್ನು ಬೆಂಗಳೂರು ಬಂದ್, ಪ್ರತಿಭಟನೆ ಹಿನ್ನೆಲೆ ಬೇಡಿಕೆ‌ ಕುಸಿದಿರುವ ಕಾರಣ ರೈತ ಶ್ರೀಧರ್ ಮೂಟೆಯಿಂದ ಸೌತೆಕಾಯಿ ನೆಲಕ್ಕೆ ಬಿಸಾಡಿ ಆಕ್ರೋಶ ಹೊರ ಹಾಕಿದರು. ಬಂದ್ ಮಾಡಿ ಕೂತ್ರೆ ನಮ್ ಸಂಸಾರ ನಡೆಯೋದು ಹೇಗೆ? ನಾವೇನು ಅನ್ನ ತಿನಬೇಕಾ,‌ ಮಣ್ಣು ತಿನಬೇಕಾ? ಬಂದ್ ಕಾರಣ ಜನನೇ ಇಲ್ಲ. ಬೆಂಗಳೂರು ಬಂದ್ ಮಾಡಿ ಕೂತ್ರೆ ನಮ್ಮ ಗತಿ ಏನು ಅಂತ‌ ಆಕ್ರೋಶ ಹೊರ ಹಾಕಿದ್ದಾರೆ.

ರಾಮನಗರಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ