AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃಷಭಾವತಿ ಒಡಲಲ್ಲಿ ರಾಶಿ ರಾಶಿ ತ್ಯಾಜ್ಯ: ಬೆಂಗಳೂರಲ್ಲಿ ಕಸದ ಸಮಸ್ಯೆಗೆ ಮುಕ್ತಿ ಎಂದು?

ಗ್ರೇಟರ್​ ಬೆಂಗಳೂರು ಪ್ರಾಧಿಕಾರ ದಂಡ, ಕಸ ಎಸೆಯುವವರ ಮನೆ ಮುಂದೆಯೇ ತ್ಯಾಜ್ಯ ತಂದು ಸುರಿಯುವುದು ಸೇರಿ ಹತ್ತು ಹಲವು ಜಾಗೃತಿ ಕ್ರಮಗಳನ್ನ ಕೈಗೊಂಡರೂ ಬೆಂಗಳೂರಲ್ಲಿ ಮಾತ್ರ ಕಸದ ಸಮಸ್ಯೆಗೆ ಮುಕ್ತಿ ಸಿಗುವಂತೆ ಕಾಣುತ್ತಿಲ್ಲ. ಕುಂಬಳಗೂಡು- ಕಗ್ಗಲಿಪುರ ರಸ್ತೆಯ ಅಕ್ಕಪಕ್ಕದಲ್ಲಿ ರಾಶಿ ರಾಶಿ ಕಸ ಸಂಗ್ರಹವಾಗಿದ್ದು, ವೃಷಭಾವತಿ ನದಿ ಒಡಲನ್ನು ಇವು ಸೇರುತ್ತಿವೆ.

ವೃಷಭಾವತಿ ಒಡಲಲ್ಲಿ ರಾಶಿ ರಾಶಿ ತ್ಯಾಜ್ಯ: ಬೆಂಗಳೂರಲ್ಲಿ ಕಸದ ಸಮಸ್ಯೆಗೆ ಮುಕ್ತಿ ಎಂದು?
ವೃಷಭಾವತಿ ನದಿ ಸೇರುತ್ತಿರುವ ರಾಶಿ ರಾಶಿ ಕಸImage Credit source: Tv9 Kannada
ಪ್ರಶಾಂತ್​ ಬಿ.
| Edited By: |

Updated on:Nov 03, 2025 | 6:35 PM

Share

ಬೆಂಗಳೂರು ದಕ್ಷಿಣ (ರಾಮನಗರ), ನವೆಂಬರ್​ 03: ಸಾಕಷ್ಟು ಕಠಿಣ ಕ್ರಮಗಳ ಬಳಿಕವೂ ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ಕಸದ ಸಮಸ್ಯೆಗೆ ಸದ್ಯಕ್ಕೆ ಮುಕ್ತಿ ಸಿಗುವಂತೆ ಕಾಣುತ್ತಿಲ್ಲ. ದಂಡ, ಕಸ ಎಸೆಯುವವರ ಮನೆ ಮುಂದೆಯೇ ತ್ಯಾಜ್ಯ ತಂದು ಸುರಿಯುವುದು ಸೇರಿ ಹತ್ತು ಹಲವು ಜಾಗೃತಿ ಕ್ರಮಗಳನ್ನ ಗ್ರೇಟರ್​ ಬೆಂಗಳೂರು ಪ್ರಾಧಿಕಾರ ಕೈಗೊಂಡರೂ ಈ ಸಮಸ್ಯೆ ಮಾತ್ರ ಹಾಗೆಯೇ ಉಳಿದುಕೊಂಡಿದೆ. ಎಲ್ಲೆಂದರಲ್ಲಿ ಕಸ ಎಸೆದು ಹೋಗುತ್ತಿರುವ ಕಾರಣ ಜನರು ಮೂಗು ಮುಚ್ಚಿಕೊಂಡು ಓಡಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಡಿಸಿಎಂ ಡಿಕೆ ಶಿವಕುಮಾರ್​ ಬೆಂಗಳೂರನ್ನು ಕಸಮುಕ್ತ ನಗರವನ್ನಾಗಿ ಮಾಡಲು ಪಣತೊಟ್ಟಿದ್ದು, ಈ ಬಗ್ಗೆ ಸ್ವತಃ ಮುತುವರ್ಜಿ ವಹಿಸಿದ್ದಾರೆ. ಹೀಗಿದ್ದರೂ ಕಸದ ವಿಲೇವಾರಿ ಮಾತ್ರ ಸರಿಯಾಗಿ ನಡೆಯುತ್ತಿಲ್ಲ. ಕುಂಬಳಗೂಡು- ಕಗ್ಗಲಿಪುರ ರಸ್ತೆಯ ಅಕ್ಕಪಕ್ಕದಲ್ಲಿ ರಾಶಿ ರಾಶಿ ಕಸ ಸಂಗ್ರಹವಾಗಿದ್ದು, ರಸ್ತೆಬದಿ ಓಡಾಲೂ ಜನ ಅಸಹ್ಯ ಪಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಗಾಳಿ ಬಂದರೆ ಅಕ್ಕ ಪಕ್ಕದ ಏರಿಯಾಗಳ ವರೆಗೆ ದುರ್ವಾಸನೆ ಹರಡುತ್ತಿದೆ.

ಇದನ್ನೂ ಓದಿ: ದಂಡ ವಿಧಿಸಿದ್ರೂ ಬೆಂಗಳೂರಿನಲ್ಲಿ ಕಸ ಎಸೆಯುವುದು ನಿಲ್ಲುತ್ತಿಲ್ಲ: ವಿಲೇವಾರಿಯಲ್ಲೂ ನಿರ್ಲಕ್ಷ್ಯ

ವೃಷಭಾವತಿ ನದಿ ನೀರು ಕಲುಷಿತ

ಇನ್ನು ಇದೇ ರಾಶಿ ರಾಶಿ ಕಸ ಒಂದು ಕಾಲದಲ್ಲಿ ಜೀವ ಸೆಲೆಯಾಗಿದ್ದ ವೃಷಭಾವತಿ ನದಿಯ ಒಡಲನ್ನ ಸೇರುತ್ತಿದ್ದು,ಈಗಾಗಲೇ ನದಿ ನೀರು ಸಂಪೂರ್ಣ ಕಲುಷಿತಗೊಂಡಿದೆ. ಈ ಪರಿಸರದ ಸಮೀಪವೇ ಅಪಾರ್ಟ್​ಮೆಂಟ್​ಗಳಿದ್ದು, ನಿವಾಸಿಗಳು ಪ್ರತಿನಿತ್ಯ ಪರದಾಡಬೇಕಾದ ಸ್ಥಿತಿ ಇದೆ. ಇದೇ ರಸ್ತೆಯಲ್ಲಿ ಪ್ರತಿಷ್ಠಿತ ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳು ಸಂಚರಿಸಬೇಕಿದೆ. ಹೀಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಕಣ್ಣುಮುಚ್ಚಿ ಕುಳಿತಿದ್ದಾರೆ ಎನ್ನುವುದು ಸ್ಥಳೀಯ ನಿವಾಸಿಗಳ ಆರೋಪ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:32 pm, Mon, 3 November 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್