AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃಷಭಾವತಿ ಒಡಲಲ್ಲಿ ರಾಶಿ ರಾಶಿ ತ್ಯಾಜ್ಯ: ಬೆಂಗಳೂರಲ್ಲಿ ಕಸದ ಸಮಸ್ಯೆಗೆ ಮುಕ್ತಿ ಎಂದು?

ಗ್ರೇಟರ್​ ಬೆಂಗಳೂರು ಪ್ರಾಧಿಕಾರ ದಂಡ, ಕಸ ಎಸೆಯುವವರ ಮನೆ ಮುಂದೆಯೇ ತ್ಯಾಜ್ಯ ತಂದು ಸುರಿಯುವುದು ಸೇರಿ ಹತ್ತು ಹಲವು ಜಾಗೃತಿ ಕ್ರಮಗಳನ್ನ ಕೈಗೊಂಡರೂ ಬೆಂಗಳೂರಲ್ಲಿ ಮಾತ್ರ ಕಸದ ಸಮಸ್ಯೆಗೆ ಮುಕ್ತಿ ಸಿಗುವಂತೆ ಕಾಣುತ್ತಿಲ್ಲ. ಕುಂಬಳಗೂಡು- ಕಗ್ಗಲಿಪುರ ರಸ್ತೆಯ ಅಕ್ಕಪಕ್ಕದಲ್ಲಿ ರಾಶಿ ರಾಶಿ ಕಸ ಸಂಗ್ರಹವಾಗಿದ್ದು, ವೃಷಭಾವತಿ ನದಿ ಒಡಲನ್ನು ಇವು ಸೇರುತ್ತಿವೆ.

ವೃಷಭಾವತಿ ಒಡಲಲ್ಲಿ ರಾಶಿ ರಾಶಿ ತ್ಯಾಜ್ಯ: ಬೆಂಗಳೂರಲ್ಲಿ ಕಸದ ಸಮಸ್ಯೆಗೆ ಮುಕ್ತಿ ಎಂದು?
ವೃಷಭಾವತಿ ನದಿ ಸೇರುತ್ತಿರುವ ರಾಶಿ ರಾಶಿ ಕಸImage Credit source: Tv9 Kannada
ಪ್ರಶಾಂತ್​ ಬಿ.
| Edited By: |

Updated on:Nov 03, 2025 | 6:35 PM

Share

ಬೆಂಗಳೂರು ದಕ್ಷಿಣ (ರಾಮನಗರ), ನವೆಂಬರ್​ 03: ಸಾಕಷ್ಟು ಕಠಿಣ ಕ್ರಮಗಳ ಬಳಿಕವೂ ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ಕಸದ ಸಮಸ್ಯೆಗೆ ಸದ್ಯಕ್ಕೆ ಮುಕ್ತಿ ಸಿಗುವಂತೆ ಕಾಣುತ್ತಿಲ್ಲ. ದಂಡ, ಕಸ ಎಸೆಯುವವರ ಮನೆ ಮುಂದೆಯೇ ತ್ಯಾಜ್ಯ ತಂದು ಸುರಿಯುವುದು ಸೇರಿ ಹತ್ತು ಹಲವು ಜಾಗೃತಿ ಕ್ರಮಗಳನ್ನ ಗ್ರೇಟರ್​ ಬೆಂಗಳೂರು ಪ್ರಾಧಿಕಾರ ಕೈಗೊಂಡರೂ ಈ ಸಮಸ್ಯೆ ಮಾತ್ರ ಹಾಗೆಯೇ ಉಳಿದುಕೊಂಡಿದೆ. ಎಲ್ಲೆಂದರಲ್ಲಿ ಕಸ ಎಸೆದು ಹೋಗುತ್ತಿರುವ ಕಾರಣ ಜನರು ಮೂಗು ಮುಚ್ಚಿಕೊಂಡು ಓಡಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಡಿಸಿಎಂ ಡಿಕೆ ಶಿವಕುಮಾರ್​ ಬೆಂಗಳೂರನ್ನು ಕಸಮುಕ್ತ ನಗರವನ್ನಾಗಿ ಮಾಡಲು ಪಣತೊಟ್ಟಿದ್ದು, ಈ ಬಗ್ಗೆ ಸ್ವತಃ ಮುತುವರ್ಜಿ ವಹಿಸಿದ್ದಾರೆ. ಹೀಗಿದ್ದರೂ ಕಸದ ವಿಲೇವಾರಿ ಮಾತ್ರ ಸರಿಯಾಗಿ ನಡೆಯುತ್ತಿಲ್ಲ. ಕುಂಬಳಗೂಡು- ಕಗ್ಗಲಿಪುರ ರಸ್ತೆಯ ಅಕ್ಕಪಕ್ಕದಲ್ಲಿ ರಾಶಿ ರಾಶಿ ಕಸ ಸಂಗ್ರಹವಾಗಿದ್ದು, ರಸ್ತೆಬದಿ ಓಡಾಲೂ ಜನ ಅಸಹ್ಯ ಪಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಗಾಳಿ ಬಂದರೆ ಅಕ್ಕ ಪಕ್ಕದ ಏರಿಯಾಗಳ ವರೆಗೆ ದುರ್ವಾಸನೆ ಹರಡುತ್ತಿದೆ.

ಇದನ್ನೂ ಓದಿ: ದಂಡ ವಿಧಿಸಿದ್ರೂ ಬೆಂಗಳೂರಿನಲ್ಲಿ ಕಸ ಎಸೆಯುವುದು ನಿಲ್ಲುತ್ತಿಲ್ಲ: ವಿಲೇವಾರಿಯಲ್ಲೂ ನಿರ್ಲಕ್ಷ್ಯ

ವೃಷಭಾವತಿ ನದಿ ನೀರು ಕಲುಷಿತ

ಇನ್ನು ಇದೇ ರಾಶಿ ರಾಶಿ ಕಸ ಒಂದು ಕಾಲದಲ್ಲಿ ಜೀವ ಸೆಲೆಯಾಗಿದ್ದ ವೃಷಭಾವತಿ ನದಿಯ ಒಡಲನ್ನ ಸೇರುತ್ತಿದ್ದು,ಈಗಾಗಲೇ ನದಿ ನೀರು ಸಂಪೂರ್ಣ ಕಲುಷಿತಗೊಂಡಿದೆ. ಈ ಪರಿಸರದ ಸಮೀಪವೇ ಅಪಾರ್ಟ್​ಮೆಂಟ್​ಗಳಿದ್ದು, ನಿವಾಸಿಗಳು ಪ್ರತಿನಿತ್ಯ ಪರದಾಡಬೇಕಾದ ಸ್ಥಿತಿ ಇದೆ. ಇದೇ ರಸ್ತೆಯಲ್ಲಿ ಪ್ರತಿಷ್ಠಿತ ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳು ಸಂಚರಿಸಬೇಕಿದೆ. ಹೀಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಕಣ್ಣುಮುಚ್ಚಿ ಕುಳಿತಿದ್ದಾರೆ ಎನ್ನುವುದು ಸ್ಥಳೀಯ ನಿವಾಸಿಗಳ ಆರೋಪ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:32 pm, Mon, 3 November 25

Follow Us
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ