AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃಷಭಾವತಿ ಒಡಲಲ್ಲಿ ರಾಶಿ ರಾಶಿ ತ್ಯಾಜ್ಯ: ಬೆಂಗಳೂರಲ್ಲಿ ಕಸದ ಸಮಸ್ಯೆಗೆ ಮುಕ್ತಿ ಎಂದು?

ಗ್ರೇಟರ್​ ಬೆಂಗಳೂರು ಪ್ರಾಧಿಕಾರ ದಂಡ, ಕಸ ಎಸೆಯುವವರ ಮನೆ ಮುಂದೆಯೇ ತ್ಯಾಜ್ಯ ತಂದು ಸುರಿಯುವುದು ಸೇರಿ ಹತ್ತು ಹಲವು ಜಾಗೃತಿ ಕ್ರಮಗಳನ್ನ ಕೈಗೊಂಡರೂ ಬೆಂಗಳೂರಲ್ಲಿ ಮಾತ್ರ ಕಸದ ಸಮಸ್ಯೆಗೆ ಮುಕ್ತಿ ಸಿಗುವಂತೆ ಕಾಣುತ್ತಿಲ್ಲ. ಕುಂಬಳಗೂಡು- ಕಗ್ಗಲಿಪುರ ರಸ್ತೆಯ ಅಕ್ಕಪಕ್ಕದಲ್ಲಿ ರಾಶಿ ರಾಶಿ ಕಸ ಸಂಗ್ರಹವಾಗಿದ್ದು, ವೃಷಭಾವತಿ ನದಿ ಒಡಲನ್ನು ಇವು ಸೇರುತ್ತಿವೆ.

ವೃಷಭಾವತಿ ಒಡಲಲ್ಲಿ ರಾಶಿ ರಾಶಿ ತ್ಯಾಜ್ಯ: ಬೆಂಗಳೂರಲ್ಲಿ ಕಸದ ಸಮಸ್ಯೆಗೆ ಮುಕ್ತಿ ಎಂದು?
ವೃಷಭಾವತಿ ನದಿ ಸೇರುತ್ತಿರುವ ರಾಶಿ ರಾಶಿ ಕಸImage Credit source: Tv9 Kannada
ಪ್ರಶಾಂತ್​ ಬಿ.
| Edited By: |

Updated on:Nov 03, 2025 | 6:35 PM

Share

ಬೆಂಗಳೂರು ದಕ್ಷಿಣ (ರಾಮನಗರ), ನವೆಂಬರ್​ 03: ಸಾಕಷ್ಟು ಕಠಿಣ ಕ್ರಮಗಳ ಬಳಿಕವೂ ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ಕಸದ ಸಮಸ್ಯೆಗೆ ಸದ್ಯಕ್ಕೆ ಮುಕ್ತಿ ಸಿಗುವಂತೆ ಕಾಣುತ್ತಿಲ್ಲ. ದಂಡ, ಕಸ ಎಸೆಯುವವರ ಮನೆ ಮುಂದೆಯೇ ತ್ಯಾಜ್ಯ ತಂದು ಸುರಿಯುವುದು ಸೇರಿ ಹತ್ತು ಹಲವು ಜಾಗೃತಿ ಕ್ರಮಗಳನ್ನ ಗ್ರೇಟರ್​ ಬೆಂಗಳೂರು ಪ್ರಾಧಿಕಾರ ಕೈಗೊಂಡರೂ ಈ ಸಮಸ್ಯೆ ಮಾತ್ರ ಹಾಗೆಯೇ ಉಳಿದುಕೊಂಡಿದೆ. ಎಲ್ಲೆಂದರಲ್ಲಿ ಕಸ ಎಸೆದು ಹೋಗುತ್ತಿರುವ ಕಾರಣ ಜನರು ಮೂಗು ಮುಚ್ಚಿಕೊಂಡು ಓಡಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಡಿಸಿಎಂ ಡಿಕೆ ಶಿವಕುಮಾರ್​ ಬೆಂಗಳೂರನ್ನು ಕಸಮುಕ್ತ ನಗರವನ್ನಾಗಿ ಮಾಡಲು ಪಣತೊಟ್ಟಿದ್ದು, ಈ ಬಗ್ಗೆ ಸ್ವತಃ ಮುತುವರ್ಜಿ ವಹಿಸಿದ್ದಾರೆ. ಹೀಗಿದ್ದರೂ ಕಸದ ವಿಲೇವಾರಿ ಮಾತ್ರ ಸರಿಯಾಗಿ ನಡೆಯುತ್ತಿಲ್ಲ. ಕುಂಬಳಗೂಡು- ಕಗ್ಗಲಿಪುರ ರಸ್ತೆಯ ಅಕ್ಕಪಕ್ಕದಲ್ಲಿ ರಾಶಿ ರಾಶಿ ಕಸ ಸಂಗ್ರಹವಾಗಿದ್ದು, ರಸ್ತೆಬದಿ ಓಡಾಲೂ ಜನ ಅಸಹ್ಯ ಪಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಗಾಳಿ ಬಂದರೆ ಅಕ್ಕ ಪಕ್ಕದ ಏರಿಯಾಗಳ ವರೆಗೆ ದುರ್ವಾಸನೆ ಹರಡುತ್ತಿದೆ.

ಇದನ್ನೂ ಓದಿ: ದಂಡ ವಿಧಿಸಿದ್ರೂ ಬೆಂಗಳೂರಿನಲ್ಲಿ ಕಸ ಎಸೆಯುವುದು ನಿಲ್ಲುತ್ತಿಲ್ಲ: ವಿಲೇವಾರಿಯಲ್ಲೂ ನಿರ್ಲಕ್ಷ್ಯ

ವೃಷಭಾವತಿ ನದಿ ನೀರು ಕಲುಷಿತ

ಇನ್ನು ಇದೇ ರಾಶಿ ರಾಶಿ ಕಸ ಒಂದು ಕಾಲದಲ್ಲಿ ಜೀವ ಸೆಲೆಯಾಗಿದ್ದ ವೃಷಭಾವತಿ ನದಿಯ ಒಡಲನ್ನ ಸೇರುತ್ತಿದ್ದು,ಈಗಾಗಲೇ ನದಿ ನೀರು ಸಂಪೂರ್ಣ ಕಲುಷಿತಗೊಂಡಿದೆ. ಈ ಪರಿಸರದ ಸಮೀಪವೇ ಅಪಾರ್ಟ್​ಮೆಂಟ್​ಗಳಿದ್ದು, ನಿವಾಸಿಗಳು ಪ್ರತಿನಿತ್ಯ ಪರದಾಡಬೇಕಾದ ಸ್ಥಿತಿ ಇದೆ. ಇದೇ ರಸ್ತೆಯಲ್ಲಿ ಪ್ರತಿಷ್ಠಿತ ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳು ಸಂಚರಿಸಬೇಕಿದೆ. ಹೀಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಕಣ್ಣುಮುಚ್ಚಿ ಕುಳಿತಿದ್ದಾರೆ ಎನ್ನುವುದು ಸ್ಥಳೀಯ ನಿವಾಸಿಗಳ ಆರೋಪ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:32 pm, Mon, 3 November 25

Follow Us
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್