AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃಷಭಾವತಿ ಒಡಲಲ್ಲಿ ರಾಶಿ ರಾಶಿ ತ್ಯಾಜ್ಯ: ಬೆಂಗಳೂರಲ್ಲಿ ಕಸದ ಸಮಸ್ಯೆಗೆ ಮುಕ್ತಿ ಎಂದು?

ಗ್ರೇಟರ್​ ಬೆಂಗಳೂರು ಪ್ರಾಧಿಕಾರ ದಂಡ, ಕಸ ಎಸೆಯುವವರ ಮನೆ ಮುಂದೆಯೇ ತ್ಯಾಜ್ಯ ತಂದು ಸುರಿಯುವುದು ಸೇರಿ ಹತ್ತು ಹಲವು ಜಾಗೃತಿ ಕ್ರಮಗಳನ್ನ ಕೈಗೊಂಡರೂ ಬೆಂಗಳೂರಲ್ಲಿ ಮಾತ್ರ ಕಸದ ಸಮಸ್ಯೆಗೆ ಮುಕ್ತಿ ಸಿಗುವಂತೆ ಕಾಣುತ್ತಿಲ್ಲ. ಕುಂಬಳಗೂಡು- ಕಗ್ಗಲಿಪುರ ರಸ್ತೆಯ ಅಕ್ಕಪಕ್ಕದಲ್ಲಿ ರಾಶಿ ರಾಶಿ ಕಸ ಸಂಗ್ರಹವಾಗಿದ್ದು, ವೃಷಭಾವತಿ ನದಿ ಒಡಲನ್ನು ಇವು ಸೇರುತ್ತಿವೆ.

ವೃಷಭಾವತಿ ಒಡಲಲ್ಲಿ ರಾಶಿ ರಾಶಿ ತ್ಯಾಜ್ಯ: ಬೆಂಗಳೂರಲ್ಲಿ ಕಸದ ಸಮಸ್ಯೆಗೆ ಮುಕ್ತಿ ಎಂದು?
ವೃಷಭಾವತಿ ನದಿ ಸೇರುತ್ತಿರುವ ರಾಶಿ ರಾಶಿ ಕಸImage Credit source: Tv9 Kannada
ಪ್ರಶಾಂತ್​ ಬಿ.
| Edited By: |

Updated on:Nov 03, 2025 | 6:35 PM

Share

ಬೆಂಗಳೂರು ದಕ್ಷಿಣ (ರಾಮನಗರ), ನವೆಂಬರ್​ 03: ಸಾಕಷ್ಟು ಕಠಿಣ ಕ್ರಮಗಳ ಬಳಿಕವೂ ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ಕಸದ ಸಮಸ್ಯೆಗೆ ಸದ್ಯಕ್ಕೆ ಮುಕ್ತಿ ಸಿಗುವಂತೆ ಕಾಣುತ್ತಿಲ್ಲ. ದಂಡ, ಕಸ ಎಸೆಯುವವರ ಮನೆ ಮುಂದೆಯೇ ತ್ಯಾಜ್ಯ ತಂದು ಸುರಿಯುವುದು ಸೇರಿ ಹತ್ತು ಹಲವು ಜಾಗೃತಿ ಕ್ರಮಗಳನ್ನ ಗ್ರೇಟರ್​ ಬೆಂಗಳೂರು ಪ್ರಾಧಿಕಾರ ಕೈಗೊಂಡರೂ ಈ ಸಮಸ್ಯೆ ಮಾತ್ರ ಹಾಗೆಯೇ ಉಳಿದುಕೊಂಡಿದೆ. ಎಲ್ಲೆಂದರಲ್ಲಿ ಕಸ ಎಸೆದು ಹೋಗುತ್ತಿರುವ ಕಾರಣ ಜನರು ಮೂಗು ಮುಚ್ಚಿಕೊಂಡು ಓಡಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಡಿಸಿಎಂ ಡಿಕೆ ಶಿವಕುಮಾರ್​ ಬೆಂಗಳೂರನ್ನು ಕಸಮುಕ್ತ ನಗರವನ್ನಾಗಿ ಮಾಡಲು ಪಣತೊಟ್ಟಿದ್ದು, ಈ ಬಗ್ಗೆ ಸ್ವತಃ ಮುತುವರ್ಜಿ ವಹಿಸಿದ್ದಾರೆ. ಹೀಗಿದ್ದರೂ ಕಸದ ವಿಲೇವಾರಿ ಮಾತ್ರ ಸರಿಯಾಗಿ ನಡೆಯುತ್ತಿಲ್ಲ. ಕುಂಬಳಗೂಡು- ಕಗ್ಗಲಿಪುರ ರಸ್ತೆಯ ಅಕ್ಕಪಕ್ಕದಲ್ಲಿ ರಾಶಿ ರಾಶಿ ಕಸ ಸಂಗ್ರಹವಾಗಿದ್ದು, ರಸ್ತೆಬದಿ ಓಡಾಲೂ ಜನ ಅಸಹ್ಯ ಪಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಗಾಳಿ ಬಂದರೆ ಅಕ್ಕ ಪಕ್ಕದ ಏರಿಯಾಗಳ ವರೆಗೆ ದುರ್ವಾಸನೆ ಹರಡುತ್ತಿದೆ.

ಇದನ್ನೂ ಓದಿ: ದಂಡ ವಿಧಿಸಿದ್ರೂ ಬೆಂಗಳೂರಿನಲ್ಲಿ ಕಸ ಎಸೆಯುವುದು ನಿಲ್ಲುತ್ತಿಲ್ಲ: ವಿಲೇವಾರಿಯಲ್ಲೂ ನಿರ್ಲಕ್ಷ್ಯ

ವೃಷಭಾವತಿ ನದಿ ನೀರು ಕಲುಷಿತ

ಇನ್ನು ಇದೇ ರಾಶಿ ರಾಶಿ ಕಸ ಒಂದು ಕಾಲದಲ್ಲಿ ಜೀವ ಸೆಲೆಯಾಗಿದ್ದ ವೃಷಭಾವತಿ ನದಿಯ ಒಡಲನ್ನ ಸೇರುತ್ತಿದ್ದು,ಈಗಾಗಲೇ ನದಿ ನೀರು ಸಂಪೂರ್ಣ ಕಲುಷಿತಗೊಂಡಿದೆ. ಈ ಪರಿಸರದ ಸಮೀಪವೇ ಅಪಾರ್ಟ್​ಮೆಂಟ್​ಗಳಿದ್ದು, ನಿವಾಸಿಗಳು ಪ್ರತಿನಿತ್ಯ ಪರದಾಡಬೇಕಾದ ಸ್ಥಿತಿ ಇದೆ. ಇದೇ ರಸ್ತೆಯಲ್ಲಿ ಪ್ರತಿಷ್ಠಿತ ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳು ಸಂಚರಿಸಬೇಕಿದೆ. ಹೀಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಕಣ್ಣುಮುಚ್ಚಿ ಕುಳಿತಿದ್ದಾರೆ ಎನ್ನುವುದು ಸ್ಥಳೀಯ ನಿವಾಸಿಗಳ ಆರೋಪ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:32 pm, Mon, 3 November 25

ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ