AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ ಮುಂದುವರಿದ ಕಳ್ಳರ ಹಾವಳಿ: ತಂತಿ ಬೇಲಿ ಕಳವು

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​ ಹೈವೇಯಲ್ಲಿ ಕಳ್ಳರ ಹಾವಳಿ ಮುಂದುವರೆದಿದ್ದು, ಎನ್​ಹೆಚ್​ಎಐನ ತಿಟ್ಟಮಾರನಹಳ್ಳಿ ಬಳಿ ಅಳವಡಿಸಿದ್ದ 1 ಕಿಲೋ ಮೀಟರ್​ ತಂತಿ ಬೇಲಿಯನ್ನು ಕಳವು ಮಾಡಲಾಗಿದೆ. ಕಬ್ಬಿಣದ ವಿದ್ಯುತ್ ಕಂಬಗಳ ಆ್ಯಂಗ್ಲರ್​ಗಳನ್ನು ಕಿಡಿಗೇಡಿಗಳು ಕದ್ದಿಯುತ್ತಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇನಲ್ಲಿ ಮುಂದುವರಿದ ಕಳ್ಳರ ಹಾವಳಿ: ತಂತಿ ಬೇಲಿ ಕಳವು
ತಂತಿ ಬೇಲಿ ಕಳವು
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ | Edited By: |

Updated on:Aug 16, 2023 | 8:35 PM

Share

ರಾಮನಗರ, ಆಗಸ್ಟ್​ 16: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​ ಹೈವೇಯಲ್ಲಿ (Bengaluru-Mysuru Expressway) ಕಳ್ಳರ ಹಾವಳಿ ಮುಂದುವರೆದಿದ್ದು, ಎನ್​ಹೆಚ್​ಎಐನ ತಿಟ್ಟಮಾರನಹಳ್ಳಿ ಬಳಿ ಅಳವಡಿಸಿದ್ದ 1 ಕಿಲೋ ಮೀಟರ್​ ತಂತಿ ಬೇಲಿಯನ್ನು ಕಳವು ಮಾಡಲಾಗಿದೆ. ಕಬ್ಬಿಣದ ವಿದ್ಯುತ್ ಕಂಬಗಳ ಆ್ಯಂಗ್ಲರ್​ಗಳನ್ನು ಕಿಡಿಗೇಡಿಗಳು ಕದ್ದಿಯುತ್ತಿದ್ದಾರೆ. ತಂತಿಬೇಲಿ ಇಲ್ಲದಿರುವುದರಿಂದ ಹೆದ್ದಾರಿಯಲ್ಲಿ ಅಪಘಾತ ಸಾಧ್ಯತೆಯಿದೆ. ಜನ, ಜಾನುವಾರು ಹೆದ್ದಾರಿ ಪ್ರವೇಶಿಸಿ ಅನಾಹುತ ಆಗುವ ಆತಂಕ ಸೃಷ್ಟಿಯಾಗಿದ್ದು, ಕೂಡಲೇ ತಂತಿಬೇಲಿಯನ್ನು ಅಳವಡಿಸುವಂತೆ ಸ್ಥಳೀಯರು ಒತ್ತಾಯಿಸಿದ್ದರು. ಹೈವೇ ಪೆಟ್ರೋಲಿಂಗ್ ಮೂಲಕ ಕಳ್ಳತನಕ್ಕೆ ಕಡಿವಾಣ ಹಾಕಲು ಮನವಿ ಮಾಡಿದ್ದು, ಈ ಬಗ್ಗೆ ಹೆದ್ದಾರಿ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆಗೆ ಆಗ್ರಹಿಸಲಾಗಿದೆ.

ಮದ್ದೂರು ಮಂಡ್ಯಕ್ಕೆ ಬರುವ ಮಾರ್ಗ ಮಧ್ಯೆ ಸುಮಾರು 20 ಕಡೆ ತಂತಿ ಬೇಲಿಯನ್ನು ಕಳ್ಳತನ ಮಾಡುವ ಮೂಲಕ ಕಳ್ಳರು ತಮ್ಮ ಕೈಚಳಕ ತೋರಿದ್ದರು. ಪದೇ ಪದೇ ತಂತಿ ಬೇಲಿ ಕಳವು ಆಗುತ್ತಿರುವುದರಿಂದ ಪಾದಚಾರಿಗಳು, ಜಾನುವಾರುಗಳು ಹೆದ್ದಾರಿಗೆ ಪ್ರವೇಶಿಸುತ್ತಿವೆ.

ಸಕ್ಕರೆ ಲೋಡ್ ಸಮೇತ ಲಾರಿ ಮಾರಾಟ ಮಾಡುತ್ತಿದ್ದ ಚಾಲಕನ ಬಂಧನ

ಬಾಗಲಕೋಟೆ: ಸಕ್ಕರೆ ಲೋಡ್ ಸಮೇತ ಲಾರಿ ಮಾರಾಟ ಮಾಡುತ್ತಿದ್ದ ಚಾಲಕನನ್ನು ಮುಧೋಳ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಶಿಶುವಿನಾಳದ ವಿಜಯ್ ದಳವಾಯಿ ಬಂಧಿತ. 10.83 ಲಕ್ಷ ಮೌಲ್ಯದ 600 ಚೀಲ ಸಕ್ಕರೆ, 10 ಲಕ್ಷ ಮೌಲ್ಯದ ಲಾರಿ ಜಪ್ತಿ ಮಾಡಲಾಗಿದೆ. ಟ್ರಾನ್ಸ್​​ಪೋರ್ಟ್​​ ಉದ್ಯಮಿ ಸಂತೋಷ್ ನೀರಕೇರಿ ಎನ್ನುವವರಿಗೆ ಲಾರಿ ಸೇರಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ಸಿಸಿ ಟಿವಿ ನಿಷ್ಕ್ರಿಯಗೊಳಿಸಿ ATM ನಲ್ಲಿದ್ದ 14 ಲಕ್ಷ ಹಣ ಲೂಟಿ ಮಾಡಿದ ಖದೀಮರು

ನಿರಾಣಿ ಕಾರ್ಖಾನೆಯಿಂದ ಲೋಡ್​ ಮಾಡಿಕೊಂಡು ಹೋಗಿದ್ದು, ಚಿಕ್ಕಬಳ್ಳಾಪುರದ ವಿಲ್​ಕಾರ್ಟ್ ಕಂಪನಿಗೆ ಅನ್​ಲೋಡ್ ಮಾಡಬೇಕಿತ್ತು. ಆದರೆ ಜೂ.14ರಂದು ಸಕ್ಕರೆ ತುಂಬಿದ್ದ ಲಾರಿ ಸಮೇತ ನಾಪತ್ತೆಯಾಗಿದ್ದ. ಈ ಬಗ್ಗೆ ಮುಧೋಳ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಮಂಡ್ಯ: ಅನುಮಾನ ಎನ್ನುವ ಭೂತಕ್ಕೆ ಹೆಂಡ್ತಿಯನ್ನು ಕೊಂದ ಪತಿ, ಮಗನೊಂದಿಗೆ ಎಸ್ಕೇಪ್

ಮತ್ತೊಂದು ಪ್ರಕರಣದಲ್ಲಿ ಚಿನ್ನ ಕಳ್ಳತನ ಮಾಡಿದ್ದ ಮಹಿಳೆಯನ್ನು ಮುಧೋಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭಾಗವ್ವ ಯರಗುದರಿ ಬಂಧಿತ ಮಹಿಳೆ. 2.54 ಲಕ್ಷ ರೂಪಾಯಿ ಮೌಲ್ಯದ 67 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಆಗಸ್ಟ್ 9ರಂದು ಮುಧೋಳ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:23 pm, Wed, 16 August 23

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್