AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru-Mysore Expressway: ವಾಹನಗಳ ವೇಗಕ್ಕೆ ಬ್ರೇಕ್​​: ನಿಯಮ ಮುರಿದರೆ ದಂಡ ಅಷ್ಟೇ ಅಲ್ಲ, ಡ್ರೈವಿಂಗ್ ಲೈಸೆನ್ಸ್ ರದ್ದು

ಕಳೆದ ಕೆಲ ದಿನಗಳಲ್ಲಿ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಹಾಗಾಗಿ ವಾಹನಗಳ ವೇಗಕ್ಕೆ ಬ್ರೇಕ್​ ಹಾಕಲು ರಾಮನಗರ ಪೊಲೀಸರು ಮುಂದಾಗಿದ್ದಾರೆ. ವೇಗದ ಮಿತಿ ಮೀರಿದರೆ ದಂಡ ಅಷ್ಟೇ ಅಲ್ಲ ಡ್ರೈವಿಂಗ್ ಲೈಸೆನ್ಸ್ ರದ್ದು ಮಾಡುವುದಾಗಿ ಎಡಿಜಿಪಿ ಅಲೋಕ್ ಕುಮಾರ್​ ತಿಳಿಸಿದ್ದಾರೆ.

Bengaluru-Mysore Expressway: ವಾಹನಗಳ ವೇಗಕ್ಕೆ ಬ್ರೇಕ್​​: ನಿಯಮ ಮುರಿದರೆ ದಂಡ ಅಷ್ಟೇ ಅಲ್ಲ, ಡ್ರೈವಿಂಗ್ ಲೈಸೆನ್ಸ್ ರದ್ದು
ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇ (ಸಂಗ್ರಹ ಚಿತ್ರ)
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Jul 05, 2023 | 7:27 PM

Share

ರಾಮನಗರ: ಕಳೆದ ಕೆಲ ದಿನಗಳಲ್ಲಿ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇ (Bengaluru-Mysuru highway) ಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಹಾಗಾಗಿ ವಾಹನಗಳ ವೇಗಕ್ಕೆ ಬ್ರೇಕ್​ ಹಾಕಲು ರಾಮನಗರ ಪೊಲೀಸರು ಮುಂದಾಗಿದ್ದಾರೆ. ರಾಮನಗರದ ಚನ್ನಪಟ್ಟಣ ಬಳಿ ಇಂಟರ್ ಸೆಪ್ಟರ್ ಅಳವಡಿಸಿ ಟ್ರಾಫಿಕ್ ಪೊಲೀಸರು ಸ್ಪೀಡ್ ಚೆಕ್ ಮಾಡುತ್ತಿದ್ದು, ವೇಗದ ಲಿಮಿಟ್ ಕ್ರಾಸ್ ಮಾಡಿದ ವಾಹನ ಸವಾರರಿಗೆ 1000 ರೂ. ದಂಡ ಹಾಕುತ್ತಿದ್ದಾರೆ. ಈ ಮಧ್ಯೆ ಸಾರಿಗೆ ಹಾಗೂ ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಹೆದ್ದಾರಿ ವೀಕ್ಷಣೆ ಮಾಡಿದ್ದು, ರೂಲ್ಸ್ ಬ್ರೇಕ್ ಮಾಡಿದರೆ ದಂಡ ಅಷ್ಟೇ ಅಲ್ಲ ಡ್ರೈವಿಂಗ್ ಲೈಸೆನ್ಸ್ ರದ್ದು ಮಾಡುತ್ತೇವೆ ಎಂದಿದ್ದಾರೆ.

ಹೆದ್ದಾರಿಯಲ್ಲಿ ನಿಮ್ಮ ವೇಗದ ಮಿತಿ ಮೇಲೆ 28 ANPR ಕ್ಯಾಮರಾಗಳು ಕಣ್ಣಿಡಲಿವೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಚರಿಸುವಾಗ ವೇಗದ ಮಿತಿ, ಲೈನ್ ಟ್ರ್ಯಾಕ್, ಸೀಟ್ ಬೆಲ್ಟ್ ಹಾಗೂ ಹೆಲ್ಮೆಟ್​ ಕಡ್ಡಾಯ. ರಾಮನಗರ ಜಿಲ್ಲಾ ವ್ಯಾಪ್ತಿಯ ಅತೀ ಹೆಚ್ಚು ಅಪಘಾತ ಸ್ಥಳಗಳಲ್ಲಿ ಆಗಬೇಕಾದ ಬದಲಾವಣೆ ಬಗ್ಗೆ ಜಿಲ್ಲಾಧಿಕಾರಿ, ಎಸ್ಪಿ ಮತ್ತು ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್​​​ಪ್ರೆಸ್​​ವೇನಲ್ಲಿ ವಾಹನಗಳ ವೇಗಕ್ಕೆ ಬ್ರೇಕ್: ವೇಗ ಮೀತಿ ಮೀರಿದ 44 ವಾಹನಗಳ ಮೇಲೆ ಕೇಸ್​ ಬುಕ್​

ಹೆದ್ದಾರಿ ಮೇಲೆ ಬ್ಯಾರಿಕೇಡ್ ಅಳವಡಿಸಿರುವ ಪೊಲೀಸರು, ಕಾರ್ ವೇಗದ ಮಿತಿ 100, ಬೈಕ್ ವೇಗದ ಮಿತಿ 80 ಹಾಗೂ ಟ್ರಕ್, ಲಾರಿ ಬಸ್ಸಿನ ಮಿತಿ 60 ನಿಗದಿ ಮಾಡಲಾಗಿದೆ. ಕಾರು 101‌ ವೇಗದಲ್ಲಿ ಹೋದರೂ 1000 ರೂ. ದಂಡ ಹಾಕಲಾಗುತ್ತಿದೆ.

ಪೊಲೀಸರ ಕ್ರಮಕ್ಕೆ ವಾಹನ ಚಾಲಕರು ಹಿಡಿಶಾಪ ಹಾಕುತ್ತಿದ್ದು, ಒಂದು ಕಡೆ ಟೋಲ್ ಕಟ್ಟಬೇಕು, ಈಗ ಫೈನ್ ಕಟ್ಟಬೇಕು. ಏನ್ ಹೇಳಬೇಕು ಅಂತ ಗೊತ್ತಾಗುತ್ತಿಲ್ಲ ಎನ್ನುತ್ತಿದ್ದಾರೆ ಚಾಲಕರು.

ಇದು ಹೆದ್ದಾರಿ, ರೇಸಿಂಗ್ ಟ್ರ್ಯಾಕ್ ಅಲ್ಲ: ಸಂಸದ ಪ್ರತಾಪ್ ಸಿಂಹ ಪುನರುಚ್ಚಾರ

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಹೆಚ್ಚಿದ ಅಪಘಾತಗಳ ವಿಚಾರವಾಗಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದು, ಇದು ಹೆದ್ದಾರಿ, ರೇಸಿಂಗ್ ಟ್ರ್ಯಾಕ್ ಅಲ್ಲ. ಹೇಗೇಗೋ ಡ್ರೈವ್ ಮಾಡಬೇಡಿ. ನಿಮ್ಮ ಕಾರಿನ ಸ್ಪೀಡ್ ಲಿಮಿಟ್ ನೋಡಿಕೊಂಡು ಡ್ರೈವ್ ಮಾಡಿ ಎಂದು ಪುನರುಚ್ಚಾರ ಮಾಡಿದ್ದಾರೆ.

ರೋಡ್ ಚೆನ್ನಾಗಿದೆ ಅಂತ ರೇಸ್ ಮಾಡಬೇಡಿ. ಓವರ್ ಸ್ಪೀಡ್‌ನಿಂದ ಅಪಘಾತ ಆಗುತ್ತಿದೆ. ಕಿಯಾ, ನಿಸ್ಸಾನ್ ಕಾರುಗಳಲ್ಲಿ ಬರೀ ಪ್ಲ್ಯಾಸ್ಟಿಕ್ ಇದೆ. ಯದ್ವಾತದ್ವಾ ಸ್ಪೀಡ್‌ನಲ್ಲಿ ಹೋದರೆ ಆಕ್ಸಿಡೆಂಟ್ ಆಗದೆ ಇರುತ್ತಾ ಎಂದು ಪ್ರಶ್ನೆ ಮಾಡಿದರು.

ವಿಶೇಷವಾಗಿ ಮಾರುತಿ ವ್ಯಾನ್ ಡಬ್ಬದವರು ನೋಡಿಕೊಂಡು ಹೋಗಿ. ಗೂಡ್ಸ್ ಗಾಡಿಯವರು ಸೈಡ್‌ನಲ್ಲಿ ಹೋಗಿ. ಮಧ್ಯ ರೋಡ್‌ನಲ್ಲಿ ಹೋಗಿತ್ತಿದ್ದೀರಿ. ಹಿಂದಿನ ಗಾಡಿ ಬಂದು ಹೊಡೆದರೆ ಉಳೀತೀರಾ ಎಂದರು. ರಸ್ತೆ ವಿಭಜಕ ಎತ್ತರಿಸುವುದು, ಸ್ಪೀಡ್ ಲಿಮಿಟ್, ಆ್ಯಂಬುಲೆನ್ಸ್ ಸೇವೆ ಎಲ್ಲವನ್ನೂ 6 ತಿಂಗಳ ಒಳಗೆ ಮಾಡುತ್ತೇವೆ ಅಲ್ಲಿವರೆಗೂ ನಮಗೆ ಸಹಕಾರ ಕೊಡಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: Bengaluru-Mysuru Expressway: ಉದ್ಘಾಟನೆಯಾದಗಿನಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಸಂಭವಿಸಿದ ಅಪಘಾತಗಳೆಷ್ಟು? ಇಲ್ಲಿದೆ ಅಂಕಿ-ಅಂಶ

ಕೆಲ ವಾಹನ ಸವಾರರು ಹೈವೇಗೆ ಇಳಿಯುತ್ತಿದ್ದಂತೆ ಮೈ ಮೇಲೆ ಏನೋ ಬಂದವರಂತೆ ವಾಹನ ಚಲಾಯಿಸುತ್ತಾರೆ. ರಸ್ತೆಯನ್ನು ಅವೈಜ್ಞಾನಿಕವಾಗಿ ನಿರ್ಮಿಸಿರುವುದರಿಂದ ಅಪಘಾತ ಆಗುತ್ತಿವೆ ಎಂದು ದೂರುತ್ತಾರೆ. ರಸ್ತೆಯನ್ನು ವೈಜ್ಞಾನಿಕವಾಗಿ ನಿರ್ಮಿಸಲಾಗಿದೆ. ಹೈವೆಯಲ್ಲಿ ಮನಬಂದಂತೆ ವಾಹನ ಚಲಾಯಿಸುವ ಬದಲು, ವಾಹನದ ವೇಗದ ಮಿತಿಗೆ ತಕ್ಕಂತೆ ವಾಹನ ಚಲಾಯಿಸಿದರೆ ಅಪಘಾತ ಉಂಟಾಗುವುದಿಲ್ಲ.

ಇದರ ನಡುವೆಯೂ ಹೈವೇಯಲ್ಲಿ ಏನಾದರೂ ಸಣ್ಣಪುಟ್ಟ ದೋಷಗಳಿದ್ದರೂ ಅದನ್ನು ಮುಂದಿನ 15 ದಿನದಲ್ಲಿ ಸರಿಪಡಿಸುತ್ತೇವೆ. ಮುಂದಿನ ಆರು ತಿಂಗಳೊಳಗೆ ಯಾವುದೇ ಸಮಸ್ಯೆಗಳು ಇಲ್ಲದಂತೆ ಹೈವೆಯನ್ನು ಸುಸಜ್ಜಿತಗೊಳಿಸುತ್ತೇವೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:06 pm, Wed, 5 July 23

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!