AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಎಫೆಕ್ಟ್​: ತೆವಳುತ್ತಾ ಸಾಗಿದೆ ದಶಪಥ ಹೆದ್ದಾರಿ ವಿಸ್ತರಣೆ

ರಾಮನಗರ: ಲಾಕ್‌ಡೌನ್ ಕಾರಣಾದಿಂದಾಗಿ ಬೆಂಗಳೂರು-ಮೈಸೂರು ಹೆದ್ದಾರಿ ವಿಸ್ತರಣಾ ಕಾಮಗಾರಿ ಕುಂಟುತ್ತಲೇ ಸಾಗಿದೆ. ಮಧ್ಯಪ್ರದೇಶ ಮೂಲದ ದಿಲೀಪ್‌ ಬಿಲ್ಡ್‌ಕಾನ್‌ ಕಂಪನಿಯು ಬೆಂಗಳೂರು-ಮೈಸೂರು ರಸ್ತೆ ಅಭಿವೃದ್ಧಿ ಕಾಮಗಾರಿಯ ಗುತ್ತಿಗೆ ಪಡೆದಿದೆ. 2019ರಿಂದ ಕಂಪನಿಯು ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ. ದಶಪಥಗಳ ಹೆದ್ದಾರಿ ವಿಸ್ತರಣೆ ಕಾಮಗಾರಿ: ದಶಪಥಗಳ ಹೆದ್ದಾರಿ ವಿಸ್ತರಣೆ ಕಾಮಗಾರಿ ಲಾಕ್‌ಡೌನ್‌ ಘೋಷಣೆಗೆ ಮುನ್ನ ಭರದಿಂದ ಸಾಗಿತ್ತು. ಅದರಲ್ಲೂ ಉತ್ತರ ಭಾರತ ಮೂಲದ ಕಾರ್ಮಿಕರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು. ಯಂತ್ರಗಳೂ ದೊಡ್ಡದಾಗಿ ಸದ್ದು ಮಾಡುತ್ತಿದ್ದವು. ಆದರೆ ಲಾಕ್‌ಡೌನ್‌ ಘೋಷಣೆ ಆದಾಗಿನಿಂದ […]

ಲಾಕ್​ಡೌನ್​ ಎಫೆಕ್ಟ್​: ತೆವಳುತ್ತಾ ಸಾಗಿದೆ ದಶಪಥ ಹೆದ್ದಾರಿ ವಿಸ್ತರಣೆ
ಸಾಧು ಶ್ರೀನಾಥ್​
|

Updated on:May 23, 2020 | 10:29 AM

Share

ರಾಮನಗರ: ಲಾಕ್‌ಡೌನ್ ಕಾರಣಾದಿಂದಾಗಿ ಬೆಂಗಳೂರು-ಮೈಸೂರು ಹೆದ್ದಾರಿ ವಿಸ್ತರಣಾ ಕಾಮಗಾರಿ ಕುಂಟುತ್ತಲೇ ಸಾಗಿದೆ. ಮಧ್ಯಪ್ರದೇಶ ಮೂಲದ ದಿಲೀಪ್‌ ಬಿಲ್ಡ್‌ಕಾನ್‌ ಕಂಪನಿಯು ಬೆಂಗಳೂರು-ಮೈಸೂರು ರಸ್ತೆ ಅಭಿವೃದ್ಧಿ ಕಾಮಗಾರಿಯ ಗುತ್ತಿಗೆ ಪಡೆದಿದೆ. 2019ರಿಂದ ಕಂಪನಿಯು ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ.

ದಶಪಥಗಳ ಹೆದ್ದಾರಿ ವಿಸ್ತರಣೆ ಕಾಮಗಾರಿ: ದಶಪಥಗಳ ಹೆದ್ದಾರಿ ವಿಸ್ತರಣೆ ಕಾಮಗಾರಿ ಲಾಕ್‌ಡೌನ್‌ ಘೋಷಣೆಗೆ ಮುನ್ನ ಭರದಿಂದ ಸಾಗಿತ್ತು. ಅದರಲ್ಲೂ ಉತ್ತರ ಭಾರತ ಮೂಲದ ಕಾರ್ಮಿಕರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು. ಯಂತ್ರಗಳೂ ದೊಡ್ಡದಾಗಿ ಸದ್ದು ಮಾಡುತ್ತಿದ್ದವು. ಆದರೆ ಲಾಕ್‌ಡೌನ್‌ ಘೋಷಣೆ ಆದಾಗಿನಿಂದ ಒಂದು ತಿಂಗಳಿಗೂ ಹೆಚ್ಚು ಕಾಲ ಕಾಮಗಾರಿ ಸಂಪೂರ್ಣ ಸ್ಥಗಿತಗೊಂಡಿತ್ತು. ನಂತರದಲ್ಲಿ ಕೇಂದ್ರ ಸರ್ಕಾರ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಷರತ್ತುಬದ್ಧ ಅನುಮತಿ ನೀಡಿತ್ತು. ಹೀಗಾಗಿ ನಂತರದಲ್ಲಿ ಕಾಮಗಾರಿಗೆ ಮರು ಚಾಲನೆ ದೊರೆತಿದ್ದರೂ ಮೊದಲಿನಷ್ಟು ವೇಗ ಇಲ್ಲದಾಗಿದೆ.

ಊರುಗಳಿಗೆ ಮರಳಿರುವ ಕಾರ್ಮಿಕರು: ಅರ್ಧದಷ್ಟು ಕಾರ್ಮಿಕರು ತಮ್ಮೂರುಗಳಿಗೆ ಮರಳಿದ್ದು, ಇರುವವರನ್ನೇ ಬಳಸಿಕೊಂಡು ಕೆಲಸ ಮಾಡಿಸಲಾಗುತ್ತಿದೆ. ಬೆಂಗಳೂರು-ಮೈಸೂರು ಹೆದ್ದಾರಿಯ ಹಳೆಯ ನಾಲ್ಕು ಪಥದ ರಸ್ತೆಯು ಸುಮಾರು 25ರಿಂದ 30 ಮೀಟರ್‌ ಅಗಲ ಇದ್ದು, ಇದನ್ನು 60 ಮೀಟರ್‌ಗೆ ಹಾಗೂ ಎಲಿವೇಟೆಡ್‌ ಕಾರಿಡಾರ್‌ ಬಳಿ 45 ಮೀಟರ್‌ಗೆ ವಿಸ್ತರಣೆ ಮಾಡಲಾಗುತ್ತಿದೆ.

ಬೆಂಗಳೂರು-ಮೈಸೂರು ನಡುವೆ ಸದ್ಯ 135 ಕಿಲೋ ಮೀಟರ್‌ ಅಂತರವಿದೆ. ಇದರಲ್ಲಿ ಬೆಂಗಳೂರು ಹೊರವಲಯದ ನೈಸ್ ಜಂಕ್ಷನ್‌ ಬಳಿಯ 18ನೇ ಕಿ.ಮೀ. ಮೈಲಿಗಲ್ಲಿನ ಬಳಿ ಪಂಚಮುಖಿ ದೇವಸ್ಥಾನದಿಂದ ರಸ್ತೆ ವಿಸ್ತರಣೆ ಕಾರ್ಯ ಆರಂಭಗೊಂಡು ಮೈಸೂರಿನ ಕೊಲಂಬಿಯಾ ಏಷ್ಯಾ ಜಂಕ್ಷನ್‌ನಲ್ಲಿ ಮುಕ್ತಾಯಗೊಳ್ಳಲಿದೆ. ಒಟ್ಟು 118 ಕಿ.ಮೀ ಉದ್ದಕ್ಕೆ ಹತ್ತು ಪಥಗಳ ರಸ್ತೆ ಬರಲಿದೆ.

ಮೈಸೂರು-ಬೆಂಗಳೂರು ನಡುವೆ ಒಟ್ಟು ಎರಡು ಹಂತದಲ್ಲಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಬೆಂಗಳೂರು ನೈಸ್‌ ಜಂಕ್ಷನ್‌ ರಸ್ತೆ ಸಮೀಪದಿಂದ ಮಂಡ್ಯ ಜಿಲ್ಲೆಯ ನಿಡಘಟ್ಟವರೆಗಿನ ಮೊದಲ ಹಂತದ ಕಾಮಗಾರಿಯು ಭಾಗಶಃ ಮುಗಿದಿದೆ. ಇಲ್ಲಿ ಒಟ್ಟಾರೆ 56.2 ಕಿ.ಮೀ ಉದ್ದದ ರಸ್ತೆಯು ವಿಸ್ತರಣೆ ಆಗುತ್ತಿದೆ. ಇದಕ್ಕಾಗಿ ಸರ್ಕಾರ ರೂ 3,900 ಕೋಟಿ ವೆಚ್ಚ ವ್ಯಯಿಸುತ್ತಿದೆ.

Published On - 7:25 am, Sat, 23 May 20

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್