AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

112ಗೆ ಕರೆ ಮಾಡಿದ್ದ ಮಹಿಳೆಯನ್ನೇ ಬಲೆಗೆ ಬೀಳಿಸಿಕೊಂಡು ಪೊಲೀಸಪ್ಪನ ಪೋಲಿ ಆಟ

ಈತ ಡಿಎಆರ್ ಪೊಲೀಸ್ ಪೇದೆ. 112 ವಾಹನದ ಚಾಲಕನಾಗಿದ್ದ. ಆದರೆ ರಕ್ಷಣೆ ಕೋರಿ ಮಹಿಳೆಯೊಬ್ಬರು 112ಗೆ ಕರೆ ಮಾಡಿ ದೂರು ಕೊಟ್ಟಿದ್ರು. ದೂರು ಕೊಟ್ಟ ಮಹಿಳೆಯ ರಕ್ಷಣೆಗೆ ನಿಲ್ಲಬೇಕಾದ ಪೊಲೀಸಪ್ಪ, ಆಕೆಯ ನಂಬರ್ ಪಡೆದು ಸಲುಗೆ ಬೆಳಸಿಕೊಂಡು ನಂತರ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದ. ಪೊಲಿ ಆಟವಾಡಿದ ಪೊಲೀಸಪ್ಪನ ವಿರುದ್ಧ ಇದೀಗ ಆತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಕುರಿತ ಕಂಪ್ಲೀಟ್ ರಿಪೋರ್ಟ್ ‌ಇಲ್ಲಿದೆ.

112ಗೆ ಕರೆ ಮಾಡಿದ್ದ ಮಹಿಳೆಯನ್ನೇ ಬಲೆಗೆ ಬೀಳಿಸಿಕೊಂಡು ಪೊಲೀಸಪ್ಪನ ಪೋಲಿ ಆಟ
Putta Swamy
ದಿಲೀಪ್​, ಚೌಡಹಳ್ಳಿ
| Edited By: |

Updated on: Jul 20, 2025 | 1:22 PM

Share

ರಾಮನಗರ, (ಜುಲೈ 20): ಪೊಲೀಸರೆಂದರೆ (Police) ಒಂದು ನಂಬಕೆ ಹಾಗೂ ಧೈರ್ಯ. ಆದರೆ ಅಂತಹ ಹುದ್ದೆಗೆ ಅಪವಾದವೆಂಬಂತೆ ಸಮಸ್ಯೆ ಹೇಳಿಕೊಂಡು ಬಂದ ಮಹಿಳೆಯ ಮೇಲೆಯೇ ಪೊಲೀಸ್ ಪೇದೆ ಆತ್ಯಾಚಾರ ಎಸಗಿರುವ ಗಂಭೀರ ಆರೋಪ ಕೇಳಿಬಂದಿದೆ. ಬೆಂಗಳೂರು ದಕ್ಷಿಣ (ರಾಮನಗರ) (Bengaluru South) ಜಿಲ್ಲೆಯ ಚನ್ನಪಟ್ಟಣ ತಾಲೂಕಿನ 112 ವಾಹನದ ಚಾಲಕನಾಗಿರುವ ಪುಟ್ಟಸ್ವಾಮಿ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಂತ್ರಸ್ತೆ ಮಹಿಳೆ ದೂರು ದಾಖಲಿಸಿದ್ದಾಳೆ. ಇದರ ಬೆನ್ನಲ್ಲೇ  ಪೇದೆ ಪುಟ್ಟಸ್ವಾಮಿಯನ್ನು ಅಮಾನತು ಮಾಡಲಾಗಿದೆ.

ಅದೊಂದು ದಿನ 112ಗೆ ಕರೆ ಬಂದಿತ್ತು. ನಮ್ಮೂರಲ್ಲಿ ಗಲಾಟೆಯಾಗುತ್ತಿದೆ ಬನ್ನಿ ಎಂದು ಎಂ ಕೆ ದೊಡ್ಡಿ ಠಾಣಾ ವ್ಯಾಪ್ತಿಯ ಮಹಿಳೆಯೊಬ್ಬಳು ಕರೆ ಮಾಡಿದ್ದರು. ಮಾಡ್ತಾಳೆ. ಆದರೆ ಆಕೆಯ ಫೋನ್ ನಂಬರ್ ಪಡೆದ ಪೇದೆ ಪುಟ್ಟಸ್ವಾಮಿ, ಆಕೆಯ ಜೊತೆ ಸಲುಗೆ ಬೆಳೆಸಿ ಆನಂತರ ಆಕೆಯ ಮನೆಯಲ್ಲಿಯೇ ನಾಲ್ಕು ಬಾರಿ ಆತ್ಯಾಚಾರ ಎಸಗಿದ್ದಾನೆ. ಕೇವಲ ಅದಷ್ಟೇ ಅಲ್ಲದೆ ಆಕೆಯಿಂದ ನಿರಂತರವಾಗಿ 12 ಲಕ್ಷ ರೂ. ಹಣವನ್ನು ಕೂಡ ಪೀಕಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ.

ಇದನ್ನೂ ಓದಿ: ಪ್ರೀತಿಸುವಂತೆ ಮಹಿಳೆಗೆ ಕಿರುಕುಳ: ಮಾತುಕತೆಗೆ ಕರೆದವರಿಗೆ ಹೀಗಾ ಮಾಡೋದು?

ಸಂತ್ರಸ್ತೆಯಿಂದ ಹಣಪೀಕಿದ ಪೇದೆ ಪುಟ್ಟಸ್ವಾಮಿ ಕಾಲಕ್ರಮೇಣ ಆಕೆಯನ್ನ ಕಡೆಗಣಿಸಲು ಪ್ರಾರಂಭಿಸಿದ್ದಾನೆ. ಬಂಗಾರವನ್ನ ಅಡವಿಟ್ಟು ಕೊಟ್ಟ ಹಣವನ್ನ ವಾಪಸ್ ಕೇಳಿದ್ರೆ ದರ್ಪ ಮೆರೆದಿದ್ದಾನೆ. ಇದರಿಂದಾಗಿ ಆಕೆ ಮನೆಯಲ್ಲೇ ಆತ್ಮಹತ್ಯೆಗೂ ಯತ್ನಿಸಿದ್ದಾಳೆ. ಕೊನೆಗೆ ವಿಧಿ ಇಲ್ಲದೆ ಮಹಿಳೆ ಎಂಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಸಂತ್ರಸ್ತ ಮಹಿಳೆ ದೂರು ನೀಡುತ್ತಿದ್ದಂತೆ ಪೇದೆ ಪುಟ್ಟಸ್ವಾಮಿ ಮೊಬೈಲ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದಾನೆ. ಈ ನಿಟ್ಟಿನಲ್ಲಿ ಎಸ್ ಪಿ ಶ್ರೀನಿವಾಸ್ ಗೌಡ ಅವರು ಪೇದೆ ಪುಟ್ಟಸ್ವಾಮಿಯನ್ನು ಅಮಾನತು ಮಾಡಿದ್ದಾರೆ.

ಇನ್ನು ಆತ್ಯಾಚಾರದ ಪ್ರಕರಣದ ತನಿಖೆಯನ್ನ ಡಿಸಿಆರ್ ಇ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಒಟ್ಟಾರೆ ಮಹಿಳೆಯೊಂದಿಗೆ ಮಾಡಿದೆಲ್ಲ ಮಾಡಿ ಪೊಲೀಸಪ್ಪ ತಲೆಮರೆಸಿಕೊಂಡಿದ್ದಾನೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ