AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡದಿ: ತಪಾಸಣೆ ವೇಳೆ ಕಂತೆ ಕಂತೆ‌ ನೋಟು, ಬರೋಬ್ಬರಿ 5.30 ಕೋಟಿ ರೂ. ವಶಕ್ಕೆ

ಲೋಕಸಭಾ ಚುನಾವಣೆ(Lok Sabha Election) ಹಿನ್ನಲೆ ಯಾವುದೇ ಅಕ್ರಮ ನಡೆಯದಂತೆ ಕ್ರಮ ಕೈಗೊಂಡಿರುವ ಚುನಾವಣಾಧಿಕಾರಿಗಳು, ಪ್ರತಿಯೊಂದು ವಾಹನದ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಅದರಂತೆ ರಾಮನಗರ ಜಿಲ್ಲೆಯ ಹೆಜ್ಜಾಲ ಬಳಿಯ ಕಣಮಿಣಕೆ‌ ಟೋಲ್ ಬಳಿ ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5.30 ಕೋಟಿ ರೂ. ನಗದು ಹಣವನ್ನ ವಶಕ್ಕೆ ಪಡೆಯಲಾಗಿದೆ.

ಬಿಡದಿ: ತಪಾಸಣೆ ವೇಳೆ ಕಂತೆ ಕಂತೆ‌ ನೋಟು, ಬರೋಬ್ಬರಿ 5.30 ಕೋಟಿ ರೂ. ವಶಕ್ಕೆ
ಬಿಡದಿ ಬಳಿ ಐದು ಕೋಟಿ ಜಪ್ತಿ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Mar 22, 2024 | 4:57 PM

Share

ರಾಮನಗರ, ಮಾ.22: ಜಿಲ್ಲೆಯ ಹೆಜ್ಜಾಲ ಬಳಿಯ ಕಣಮಿಣಕೆ‌ ಟೋಲ್ ಬಳಿ ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5.30 ಕೋಟಿ ರೂ. ನಗದು ಹಣವನ್ನ ವಶಕ್ಕೆ ಪಡೆಯಲಾಗಿದೆ. ಲೋಕಸಭಾ ಚುನಾವಣೆ(Lok Sabha Election) ಹಿನ್ನಲೆ ಯಾವುದೇ ಅಕ್ರಮ ನಡೆಯದಂತೆ ಕ್ರಮ ಕೈಗೊಂಡಿರುವ ಚುನಾವಣಾಧಿಕಾರಿಗಳು, ಪ್ರತಿಯೊಂದು ವಾಹನದ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಅದರಂತೆ ಇಂದು(ಮಾ.22) ತಪಾಸಣೆ ವೇಳೆ ಕಂತೆ ಕಂತೆ‌ ನೋಟು ಪತ್ತೆಯಾಗಿದ್ದು, ಬ್ಯಾಂಕಿಗೆ ಸೇರಿರುವ ಹಣ ಎಂದು ವಾಹನ ಮಾಲೀಕರು ಹೇಳುತ್ತಿದ್ದಾರೆ. ಈ ಕುರಿತು ಸಂಬಂಧಪಟ್ಟ ಬ್ಯಾಂಕ್ ದಾಖಲೆ ಕೇಳಿರುವ ಬಿಡದಿ ಪೊಲಿಸರು, ಸಮರ್ಪಕ ದಾಖಲೆಗಾಗಿ ಕಾಯುತಿದ್ದಾರೆ.

8 ಲಕ್ಷ ರೂ. ಮೌಲ್ಯದ 480 ಮಿಕ್ಸರ್ ವಶಕ್ಕೆ

ಹುಬ್ಬಳ್ಳಿ: ರೈಲ್ವೆ ನಿಲ್ದಾಣದ ಪಾರ್ಸಲ್ ಆಫೀಸ್​ನಲ್ಲಿದ್ದ ಎಂಟು ಲಕ್ಷ ಮೌಲ್ಯದ 480 ಮಿಕ್ಸರ್​ಗಳನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಯಾವುದೇ ದಾಖಲೆ‌ ಇಲ್ಲದೆ 24 ರಟ್ಟಿನ ಬಾಕ್ಸ್​ನಲ್ಲಿ 480 ಮಿಕ್ಸರ್​ಗಳನ್ನು ಇಡಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳಿಂದ ಅನಧಿಕೃತ ಮಿಕ್ಸರ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಇದು ‌ಲೋಕಸಭೆ ಚುನಾವಣೆ ಹಿನ್ನಲೆ ತರಿಸಿರಬಹುದು ಎನ್ನುವ ಮಾಹಿತಿ ಇದೆ. ಈ ಕುರಿತು ಮಿಕ್ಸರ್ ಸೀಜ್ ಮಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಬೆಂಗಳೂರು ಗ್ರಾಮಾಂತರ ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಚರಣೆ; 7 ಕೋಟಿ ರೂ. ಮೌಲ್ಯದ ಮದ್ಯ ಜಪ್ತಿ

38.50 ಲಕ್ಷ ಮೌಲ್ಯದ 778 ಗ್ರಾಂ ಚಿನ್ನಾಭರಣ ಪೊಲೀಸರ ವಶಕ್ಕೆ

ಧಾರವಾಡ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 38.50 ಲಕ್ಷ ಮೌಲ್ಯದ 778 ಗ್ರಾಂ ಚಿನ್ನಾಭರಣವನ್ನ ಧಾರವಾಡ ಹೊರವಲಯದ ತೇಗೂರು ಚೆಕ್‌ಪೋಸ್ಟ್​ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿಪ್ಪಾಣಿ-ಗಂಗಾವತಿ ಕೆಎಸ್‌ಆರ್‌ಟಿಸಿ ಬಸ್​ನಲ್ಲಿ ಮಹಾರಾಷ್ಟ್ರದ ಕೊಲ್ಲಾಪುರದಿಂದ ಸಿಂಧನೂರು ಕಡೆ ಹೊರಟಿದ್ದ ಪ್ರಕಾಶ ಕುಮಾರ ಎಂಬಾತನ ಬಳಿ ಇತ್ತು. ತಪಾಸಣೆ ವೇಳೆ ಬಿಲ್ ಮತ್ತು ಚಿನ್ನಾಭರಣಗಳಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆ ಚಿನ್ನಾಭರಣವನ್ನ ವಶಕ್ಕೆ ಪಡೆದು, ಈ ಕುರಿತು ಗರಗ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್