ಬಿಡದಿ: ತಪಾಸಣೆ ವೇಳೆ ಕಂತೆ ಕಂತೆ‌ ನೋಟು, ಬರೋಬ್ಬರಿ 5.30 ಕೋಟಿ ರೂ. ವಶಕ್ಕೆ

ಲೋಕಸಭಾ ಚುನಾವಣೆ(Lok Sabha Election) ಹಿನ್ನಲೆ ಯಾವುದೇ ಅಕ್ರಮ ನಡೆಯದಂತೆ ಕ್ರಮ ಕೈಗೊಂಡಿರುವ ಚುನಾವಣಾಧಿಕಾರಿಗಳು, ಪ್ರತಿಯೊಂದು ವಾಹನದ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಅದರಂತೆ ರಾಮನಗರ ಜಿಲ್ಲೆಯ ಹೆಜ್ಜಾಲ ಬಳಿಯ ಕಣಮಿಣಕೆ‌ ಟೋಲ್ ಬಳಿ ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5.30 ಕೋಟಿ ರೂ. ನಗದು ಹಣವನ್ನ ವಶಕ್ಕೆ ಪಡೆಯಲಾಗಿದೆ.

ಬಿಡದಿ: ತಪಾಸಣೆ ವೇಳೆ ಕಂತೆ ಕಂತೆ‌ ನೋಟು, ಬರೋಬ್ಬರಿ 5.30 ಕೋಟಿ ರೂ. ವಶಕ್ಕೆ
ಬಿಡದಿ ಬಳಿ ಐದು ಕೋಟಿ ಜಪ್ತಿ
Edited By:

Updated on: Mar 22, 2024 | 4:57 PM

ರಾಮನಗರ, ಮಾ.22: ಜಿಲ್ಲೆಯ ಹೆಜ್ಜಾಲ ಬಳಿಯ ಕಣಮಿಣಕೆ‌ ಟೋಲ್ ಬಳಿ ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5.30 ಕೋಟಿ ರೂ. ನಗದು ಹಣವನ್ನ ವಶಕ್ಕೆ ಪಡೆಯಲಾಗಿದೆ. ಲೋಕಸಭಾ ಚುನಾವಣೆ(Lok Sabha Election) ಹಿನ್ನಲೆ ಯಾವುದೇ ಅಕ್ರಮ ನಡೆಯದಂತೆ ಕ್ರಮ ಕೈಗೊಂಡಿರುವ ಚುನಾವಣಾಧಿಕಾರಿಗಳು, ಪ್ರತಿಯೊಂದು ವಾಹನದ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಅದರಂತೆ ಇಂದು(ಮಾ.22) ತಪಾಸಣೆ ವೇಳೆ ಕಂತೆ ಕಂತೆ‌ ನೋಟು ಪತ್ತೆಯಾಗಿದ್ದು, ಬ್ಯಾಂಕಿಗೆ ಸೇರಿರುವ ಹಣ ಎಂದು ವಾಹನ ಮಾಲೀಕರು ಹೇಳುತ್ತಿದ್ದಾರೆ. ಈ ಕುರಿತು ಸಂಬಂಧಪಟ್ಟ ಬ್ಯಾಂಕ್ ದಾಖಲೆ ಕೇಳಿರುವ ಬಿಡದಿ ಪೊಲಿಸರು, ಸಮರ್ಪಕ ದಾಖಲೆಗಾಗಿ ಕಾಯುತಿದ್ದಾರೆ.

8 ಲಕ್ಷ ರೂ. ಮೌಲ್ಯದ 480 ಮಿಕ್ಸರ್ ವಶಕ್ಕೆ

ಹುಬ್ಬಳ್ಳಿ: ರೈಲ್ವೆ ನಿಲ್ದಾಣದ ಪಾರ್ಸಲ್ ಆಫೀಸ್​ನಲ್ಲಿದ್ದ ಎಂಟು ಲಕ್ಷ ಮೌಲ್ಯದ 480 ಮಿಕ್ಸರ್​ಗಳನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಯಾವುದೇ ದಾಖಲೆ‌ ಇಲ್ಲದೆ 24 ರಟ್ಟಿನ ಬಾಕ್ಸ್​ನಲ್ಲಿ 480 ಮಿಕ್ಸರ್​ಗಳನ್ನು ಇಡಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳಿಂದ ಅನಧಿಕೃತ ಮಿಕ್ಸರ್​ಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಇದು ‌ಲೋಕಸಭೆ ಚುನಾವಣೆ ಹಿನ್ನಲೆ ತರಿಸಿರಬಹುದು ಎನ್ನುವ ಮಾಹಿತಿ ಇದೆ. ಈ ಕುರಿತು ಮಿಕ್ಸರ್ ಸೀಜ್ ಮಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಬೆಂಗಳೂರು ಗ್ರಾಮಾಂತರ ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಚರಣೆ; 7 ಕೋಟಿ ರೂ. ಮೌಲ್ಯದ ಮದ್ಯ ಜಪ್ತಿ

38.50 ಲಕ್ಷ ಮೌಲ್ಯದ 778 ಗ್ರಾಂ ಚಿನ್ನಾಭರಣ ಪೊಲೀಸರ ವಶಕ್ಕೆ

ಧಾರವಾಡ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 38.50 ಲಕ್ಷ ಮೌಲ್ಯದ 778 ಗ್ರಾಂ ಚಿನ್ನಾಭರಣವನ್ನ ಧಾರವಾಡ ಹೊರವಲಯದ ತೇಗೂರು ಚೆಕ್‌ಪೋಸ್ಟ್​ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿಪ್ಪಾಣಿ-ಗಂಗಾವತಿ ಕೆಎಸ್‌ಆರ್‌ಟಿಸಿ ಬಸ್​ನಲ್ಲಿ ಮಹಾರಾಷ್ಟ್ರದ ಕೊಲ್ಲಾಪುರದಿಂದ ಸಿಂಧನೂರು ಕಡೆ ಹೊರಟಿದ್ದ ಪ್ರಕಾಶ ಕುಮಾರ ಎಂಬಾತನ ಬಳಿ ಇತ್ತು. ತಪಾಸಣೆ ವೇಳೆ ಬಿಲ್ ಮತ್ತು ಚಿನ್ನಾಭರಣಗಳಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆ ಚಿನ್ನಾಭರಣವನ್ನ ವಶಕ್ಕೆ ಪಡೆದು, ಈ ಕುರಿತು ಗರಗ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us