AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Eagleton Resort: ವಿಲ್ಲಾದಲ್ಲಿ ವಾಯುಪಡೆ ನಿವೃತ್ತ ಪೈಲಟ್​ ದಂಪತಿ ಹತ್ಯೆ ಪ್ರಕರಣ; ಬಿಹಾರದ ಕೆಲಸಗಾರನ ಅರೆಸ್ಟ್

ತಮಿಳುನಾಡು ಮೂಲದ ರಘುರಾಜನ್, ಏರ್ಪೋರ್ಸ್ನಲ್ಲಿ ಪೈಲಟ್ ಆಗಿ ಕೆಲಸ ಮಾಡ್ತಿದ್ರು. ನಿವೃತ್ತಿ ನಂತರ ಬಿಡದಿಯ ಈಗಲ್ಟನ್ ರೆಸಾರ್ಟ್ನಲ್ಲಿ ವಿಲ್ಲಾ ಖರೀದಿಸಿ, ಐದು ವರ್ಷದಿಂದ ವಾಸವಿದ್ರು. ಆದ್ರೆ, ಸೋಮವಾರ ರಾತ್ರಿ ಸುತ್ತಿಗೆಯಿಂದ ದಂಪತಿಯನ್ನ ಹೊಡೆದು ಆರೋಪಿ ಜೋಗಿಂದರ್ ಕೊಲೆ ಮಾಡಿದ್ದಾನೆ.

Eagleton Resort: ವಿಲ್ಲಾದಲ್ಲಿ ವಾಯುಪಡೆ ನಿವೃತ್ತ ಪೈಲಟ್​ ದಂಪತಿ ಹತ್ಯೆ ಪ್ರಕರಣ; ಬಿಹಾರದ ಕೆಲಸಗಾರನ ಅರೆಸ್ಟ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Feb 09, 2022 | 11:49 AM

Share

ರಾಮನಗರ: ಈಗಲ್ಟನ್ ರೆಸಾರ್ಟ್‌ನ ವಿಲ್ಲಾದಲ್ಲಿ ವೃದ್ಧ ದಂಪತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಿಹಾರ ಮೂಲದ ಆರೋಪಿ ಜೋಗಿಂದರ್ ಸಿಂಗ್ ಎಂಬಾತನನ್ನು ಬಿಡದಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಳೆದ 6 ತಿಂಗಳಿಂದ ವಿಲ್ಲಾದಲ್ಲಿ ಕೆಲಸ ಮಾಡಿಕೊಂಡಿದ್ದ ಜೋಗಿಂದರ್ ಸಿಂಗ್ ಸುತ್ತಿಗೆಯಿಂದ ಹೊಡೆದು ವಾಯುಸೇನೆಯ ನಿವೃತ್ತ ಪೈಲಟ್ ರಘುರಾಜನ್, ಪತ್ನಿ ಆಶಾ ಹತ್ಯೆಗೈದಿದ್ದ. ಬಳಿಕ ರಘುರಾಜನ್ ಅಕೌಂಟ್‌ನಿಂದ ಹಣ ವರ್ಗಾಯಿಸಿಕೊಂಡು ಪರಾರಿಯಾಗಿದ್ದ. ಸದ್ಯ ಪೊಲೀಸರು ಆರೋಪಿ ಜೋಗಿಂದರ್ನನ್ನು ಅರೆಸ್ಟ್ ಮಾಡಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಮತ್ತೋರ್ವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಘಟನೆ ಮಾಹಿತಿ ತಮಿಳುನಾಡು ಮೂಲದ ರಘುರಾಜನ್, ಏರ್ಪೋರ್ಸ್ನಲ್ಲಿ ಪೈಲಟ್ ಆಗಿ ಕೆಲಸ ಮಾಡ್ತಿದ್ರು. ನಿವೃತ್ತಿ ನಂತರ ಬಿಡದಿಯ ಈಗಲ್ಟನ್ ರೆಸಾರ್ಟ್ನಲ್ಲಿ ವಿಲ್ಲಾ ಖರೀದಿಸಿ, ಐದು ವರ್ಷದಿಂದ ವಾಸವಿದ್ರು. ಆದ್ರೆ, ಸೋಮವಾರ ರಾತ್ರಿ ಸುತ್ತಿಗೆಯಿಂದ ದಂಪತಿಯನ್ನ ಹೊಡೆದು ಆರೋಪಿ ಜೋಗಿಂದರ್ ಕೊಲೆ ಮಾಡಿದ್ದಾನೆ. ವೃದ್ಧ ದಂಪತಿಗೆ ಇಬ್ಬರು ಮಕ್ಕಳಿದ್ದು, ದೆಹಲಿಯಲ್ಲಿ ಕೆಲಸ ಮಾಡ್ತಿದ್ದಾರೆ. ಇನ್ನು, ಸೋಮವಾರ ತಡರಾತ್ರಿ ರಘುರಾಜನ್ಗೆ ಪುತ್ರ ಕರೆ ಮಾಡಿದ್ದು, ಫೋನ್ ರಿಸೀವ್ ಮಾಡಿರಲಿಲ್ಲ. ಬಳಿಕ, ಜೋಗಿಂದರ್ಗೆ ಕಾಲ್ ಮಾಡಿದ್ದು ಆತ, ಬೆಂಗಳೂರಿಗೆ ಹೋಗಿದ್ದಾರೆ ಅಂದಿದ್ನಂತೆ ಇದ್ರಿಂದ ಸಂಶಯಗೊಂಡ ಅವರು, ನಿನ್ನೆ ಮಧ್ಯಾಹ್ನ ವಿಲ್ಲಾಗೆ ಹೋಗಿ ಚೆಕ್ ಮಾಡುವಂತೆ ರೆಸಾರ್ಟ್ ಸೆಕ್ಯೂರಿಟಿಗೆ ಹೇಳಿದ್ದಾರೆ. ಸೆಕ್ಯೂರಿಟಿ ವಿಲ್ಲಾ ಒಳಗೆ ಹೋಗಿ ನೋಡಿದಾಗ, ಮೊದಲ ಮಹಡಿಯಲ್ಲಿ ಪತಿ, ಕೆಳ ಮಹಡಿಯಲ್ಲಿ ಪತ್ನಿ ಕೊಲೆಯಾಗಿ ಬಿದಿದ್ರು. ಅದೇ ಹೊತ್ತಿಗೆ ಜೋಗಿಂದರ್, ಆತನ ಅಣ್ಣನ ಜತೆ ವಿಲ್ಲಾದ ಹಿಂಬಾಗಿಲಿನಿಂದ ಎಸ್ಕೇಪ್ ಆಗಿದ್ದ. ಸದ್ಯ ಈಗ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದು ಮತ್ತೋರ್ವ ಆರೋಪಿಗಾಗಿ ಹುಡುಕಾಡುತ್ತಿದ್ದಾರೆ.

ಇದನ್ನೂ ಓದಿ: ದೇಗುಲದಲ್ಲಿ ಬ್ರಾಹ್ಮಣರಿಗೆ ಪಾದಪೂಜೆ ಕೈಬಿಡಿ: ಪುರಾತನ ಆಚರಣೆಗಳು ಕೇರಳಕ್ಕೆ ಅವಮಾನಕರ -ದೇವಸ್ವಂ ಸಚಿವ ಆದೇಶ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್