AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Eagleton Resort: ವಿಲ್ಲಾದಲ್ಲಿ ವಾಯುಪಡೆ ನಿವೃತ್ತ ಪೈಲಟ್​ ದಂಪತಿ ಹತ್ಯೆ ಪ್ರಕರಣ; ಬಿಹಾರದ ಕೆಲಸಗಾರನ ಅರೆಸ್ಟ್

ತಮಿಳುನಾಡು ಮೂಲದ ರಘುರಾಜನ್, ಏರ್ಪೋರ್ಸ್ನಲ್ಲಿ ಪೈಲಟ್ ಆಗಿ ಕೆಲಸ ಮಾಡ್ತಿದ್ರು. ನಿವೃತ್ತಿ ನಂತರ ಬಿಡದಿಯ ಈಗಲ್ಟನ್ ರೆಸಾರ್ಟ್ನಲ್ಲಿ ವಿಲ್ಲಾ ಖರೀದಿಸಿ, ಐದು ವರ್ಷದಿಂದ ವಾಸವಿದ್ರು. ಆದ್ರೆ, ಸೋಮವಾರ ರಾತ್ರಿ ಸುತ್ತಿಗೆಯಿಂದ ದಂಪತಿಯನ್ನ ಹೊಡೆದು ಆರೋಪಿ ಜೋಗಿಂದರ್ ಕೊಲೆ ಮಾಡಿದ್ದಾನೆ.

Eagleton Resort: ವಿಲ್ಲಾದಲ್ಲಿ ವಾಯುಪಡೆ ನಿವೃತ್ತ ಪೈಲಟ್​ ದಂಪತಿ ಹತ್ಯೆ ಪ್ರಕರಣ; ಬಿಹಾರದ ಕೆಲಸಗಾರನ ಅರೆಸ್ಟ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Feb 09, 2022 | 11:49 AM

Share

ರಾಮನಗರ: ಈಗಲ್ಟನ್ ರೆಸಾರ್ಟ್‌ನ ವಿಲ್ಲಾದಲ್ಲಿ ವೃದ್ಧ ದಂಪತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಿಹಾರ ಮೂಲದ ಆರೋಪಿ ಜೋಗಿಂದರ್ ಸಿಂಗ್ ಎಂಬಾತನನ್ನು ಬಿಡದಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಳೆದ 6 ತಿಂಗಳಿಂದ ವಿಲ್ಲಾದಲ್ಲಿ ಕೆಲಸ ಮಾಡಿಕೊಂಡಿದ್ದ ಜೋಗಿಂದರ್ ಸಿಂಗ್ ಸುತ್ತಿಗೆಯಿಂದ ಹೊಡೆದು ವಾಯುಸೇನೆಯ ನಿವೃತ್ತ ಪೈಲಟ್ ರಘುರಾಜನ್, ಪತ್ನಿ ಆಶಾ ಹತ್ಯೆಗೈದಿದ್ದ. ಬಳಿಕ ರಘುರಾಜನ್ ಅಕೌಂಟ್‌ನಿಂದ ಹಣ ವರ್ಗಾಯಿಸಿಕೊಂಡು ಪರಾರಿಯಾಗಿದ್ದ. ಸದ್ಯ ಪೊಲೀಸರು ಆರೋಪಿ ಜೋಗಿಂದರ್ನನ್ನು ಅರೆಸ್ಟ್ ಮಾಡಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಮತ್ತೋರ್ವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಘಟನೆ ಮಾಹಿತಿ ತಮಿಳುನಾಡು ಮೂಲದ ರಘುರಾಜನ್, ಏರ್ಪೋರ್ಸ್ನಲ್ಲಿ ಪೈಲಟ್ ಆಗಿ ಕೆಲಸ ಮಾಡ್ತಿದ್ರು. ನಿವೃತ್ತಿ ನಂತರ ಬಿಡದಿಯ ಈಗಲ್ಟನ್ ರೆಸಾರ್ಟ್ನಲ್ಲಿ ವಿಲ್ಲಾ ಖರೀದಿಸಿ, ಐದು ವರ್ಷದಿಂದ ವಾಸವಿದ್ರು. ಆದ್ರೆ, ಸೋಮವಾರ ರಾತ್ರಿ ಸುತ್ತಿಗೆಯಿಂದ ದಂಪತಿಯನ್ನ ಹೊಡೆದು ಆರೋಪಿ ಜೋಗಿಂದರ್ ಕೊಲೆ ಮಾಡಿದ್ದಾನೆ. ವೃದ್ಧ ದಂಪತಿಗೆ ಇಬ್ಬರು ಮಕ್ಕಳಿದ್ದು, ದೆಹಲಿಯಲ್ಲಿ ಕೆಲಸ ಮಾಡ್ತಿದ್ದಾರೆ. ಇನ್ನು, ಸೋಮವಾರ ತಡರಾತ್ರಿ ರಘುರಾಜನ್ಗೆ ಪುತ್ರ ಕರೆ ಮಾಡಿದ್ದು, ಫೋನ್ ರಿಸೀವ್ ಮಾಡಿರಲಿಲ್ಲ. ಬಳಿಕ, ಜೋಗಿಂದರ್ಗೆ ಕಾಲ್ ಮಾಡಿದ್ದು ಆತ, ಬೆಂಗಳೂರಿಗೆ ಹೋಗಿದ್ದಾರೆ ಅಂದಿದ್ನಂತೆ ಇದ್ರಿಂದ ಸಂಶಯಗೊಂಡ ಅವರು, ನಿನ್ನೆ ಮಧ್ಯಾಹ್ನ ವಿಲ್ಲಾಗೆ ಹೋಗಿ ಚೆಕ್ ಮಾಡುವಂತೆ ರೆಸಾರ್ಟ್ ಸೆಕ್ಯೂರಿಟಿಗೆ ಹೇಳಿದ್ದಾರೆ. ಸೆಕ್ಯೂರಿಟಿ ವಿಲ್ಲಾ ಒಳಗೆ ಹೋಗಿ ನೋಡಿದಾಗ, ಮೊದಲ ಮಹಡಿಯಲ್ಲಿ ಪತಿ, ಕೆಳ ಮಹಡಿಯಲ್ಲಿ ಪತ್ನಿ ಕೊಲೆಯಾಗಿ ಬಿದಿದ್ರು. ಅದೇ ಹೊತ್ತಿಗೆ ಜೋಗಿಂದರ್, ಆತನ ಅಣ್ಣನ ಜತೆ ವಿಲ್ಲಾದ ಹಿಂಬಾಗಿಲಿನಿಂದ ಎಸ್ಕೇಪ್ ಆಗಿದ್ದ. ಸದ್ಯ ಈಗ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದು ಮತ್ತೋರ್ವ ಆರೋಪಿಗಾಗಿ ಹುಡುಕಾಡುತ್ತಿದ್ದಾರೆ.

ಇದನ್ನೂ ಓದಿ: ದೇಗುಲದಲ್ಲಿ ಬ್ರಾಹ್ಮಣರಿಗೆ ಪಾದಪೂಜೆ ಕೈಬಿಡಿ: ಪುರಾತನ ಆಚರಣೆಗಳು ಕೇರಳಕ್ಕೆ ಅವಮಾನಕರ -ದೇವಸ್ವಂ ಸಚಿವ ಆದೇಶ

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!