AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋಜು ಮಸ್ತಿಗಾಗಿ ದರೋಡೆಗೆ ಇಳಿದಿದ್ದ ಖತರ್ನಾಕ್​​ ಗ್ಯಾಂಗ್​​ ಅಂದರ್​​: ಟೀಂ ಸಿಕ್ಕಿಬಿದ್ದುದ್ದು ಹೇಗೆ ಗೊತ್ತಾ?

ಅದು 8 ಜನರ ಖತರ್ನಾಕ್​​ ರಾಬರಿ ಗ್ಯಾಂಗ್​​. ನಾಲ್ವರು ಹುಡುಗರು, ನಾಲ್ವರು ಅಪ್ರಾಪ್ತ ಹುಡುಗಿಯರು. ಮೋಜು ಮಸ್ತಿಗಾಗಿ ಸಿಕ್ಕ ಸಿಕ್ಕಲೆಲ್ಲ ಕಳ್ಳತನ, ದರೋಡೆ ಮಾಡೋದೆ ಇವರ ಕಾಯಕವಾಗಿತ್ತು. ಆದ್ರೆ ಆವತ್ತು ಅವರು ಮಾಡಿದ್ದ ಅದೊಂದು ತಪ್ಪು, ಅವರನ್ನೆಲ್ಲ ಕಂಬಿ ಹಿಂದೆ ಕೂರಿಸಿದೆ. ಸುಮಾರು 10 ಪ್ರಕರಣಗಳಲ್ಲಿ ಬೇಕಿದ್ದ ಆರೋಪಿಗಳೀಗ ಪೊಲೀಸರ ಅತಿಥಿಯಾಗಿದ್ದಾರೆ.

ಮೋಜು ಮಸ್ತಿಗಾಗಿ ದರೋಡೆಗೆ ಇಳಿದಿದ್ದ ಖತರ್ನಾಕ್​​ ಗ್ಯಾಂಗ್​​ ಅಂದರ್​​: ಟೀಂ ಸಿಕ್ಕಿಬಿದ್ದುದ್ದು ಹೇಗೆ ಗೊತ್ತಾ?
ಆರೋಪಿಗಳಿಂದ ವಶಪಡಿಸಿಕೊಳ್ಳಲಾದ ವಾಹನಗಳು
ಪ್ರಶಾಂತ್​ ಬಿ.
| Updated By: ಪ್ರಸನ್ನ ಹೆಗಡೆ|

Updated on: Nov 28, 2025 | 4:55 PM

Share

ರಾಮನಗರ, ನವೆಂಬರ್​​ 28: ಅಪ್ರಾಪ್ತ ಬಾಲಕಿಯರನ್ನ ಬಳಸಿಕೊಂಡು ಸಿಕ್ಕ ಸಿಕ್ಕ ಕಡೆ ಕಳ್ಳತನ, ದರೋಡೆ ಮಾಡುತ್ತಿದ್ದ ಖತರ್ನಾಕ್​​ ಗ್ಯಾಂಗೊಂದನ್ನು ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾರು ಚಾಲಕನ ದರೋಡೆ ಕೇಸ್​​ ಬೆನ್ನತ್ತಿದ ಪೊಲೀಸರು ಪ್ರಕರಣ ಸಂಬಂಧ ನಾಲ್ವರು ಅಪ್ರಾಪ್ತ ಬಾಲಕಿಯರು ಸೇರಿ 8 ಜನರ ತಂಡವನ್ನು ಹೆಡೆಮುರಿ ಕಟ್ಟಿದ್ದಾರೆ. ಮೋಜು-ಮಸ್ತಿ ನಡೆಸಲು ಹಣ ಸಂಪಾದಿಸುವ ಉದ್ದೇಶದಿಂದ ಇವರು ಕಳ್ಳತನ, ದರೋಡೆಗೆ ಇಳಿದಿದ್ದರು ಎಂಬುದು ತನಿಖೆ ವೇಳೆ ಗೊತ್ತಾಗಿದೆ.

ಕ್ಯಾಬ್​​ ಚಾಲಕನ ಮೇಲೆ ಅಟ್ಯಾಕ್​​, ಕಾರಿನ ಸಮೇತ ಎಸ್ಕೇಪ್​!

ನವೆಂಬರ್ 18ರ ರಾತ್ರಿ ಬೆಂಗಳೂರಿನ ಕೆ.ಆರ್. ಮಾರುಕಟ್ಟೆ ಬಳಿಯಿಂದ ಆ್ಯಪ್​ವೊಂದರ ಮೂಲಕ ವಿಮಾನ ನಿಲ್ದಾಣಕ್ಕೆ ಆರೋಪಿಗಳು ಕ್ಯಾಬ್​​ ಬುಕ್​ ಮಾಡಿದ್ದರು. ಸ್ಥಲಕ್ಕೆ ಬಂದ ಕ್ಯಾಬ್​​ ಚಾಲಕ ಸ್ವಾಮಿಗೌಡ ನಾಲ್ವರು ಅಪ್ರಾಪ್ತ ಬಾಲಕಿಯರು ಸೇರಿ ಏಂಟು ಜನರನ್ನ ಪಿಕಪ್ ಮಾಡಿದ್ದ. ಈ ವೇಳೆ ಏರ್​​ಪೋರ್ಟ ಬೇಡ. ಹೆಚ್ಚಿಗೆ ಹಣ ಕೊಡುತ್ತೀವಿ, ನಮ್ಮನ್ನು ಬಿಡದಿ ಸಮೀಪ ಡ್ರಾಪ್​​ ಮಾಡುವಂತೆ ಆರೋಪಿಗಳು ಮನವಿ ಮಾಡಿದ್ದರು. ಹೀಗಾಗಿ ಚಾಲಕ ಸ್ವಾಮಿಗೌಡ ಬಿಡದಿ ಸಮೀಪದ ಜೋಗನಪಾಳ್ಯ ಗ್ರಾಮದ ಬಳಿ ಬರುತ್ತಿದ್ದಂತೆ ಕಾರು ನಿಲ್ಲಿಸುವಂತೆ ಗ್ಯಾಂಗ್​​ ಸೂಚಿಸಿತ್ತು. ಈ ವೇಳೆ ಚಾಲಕನ ಮೇಲೆ ರಾಡ್​ನಿಂದ ಆರೋಪಿಗಳು ದಾಳಿ ನಡೆಸಿದ್ದರು. ಅಲ್ಲದೆ ಕಾರು ಸಮೇತ ಸ್ಥಳದಿಂದ ಪರಾರಿಯಾಗಿದ್ದರು. ಘಟನೆ ಬಗ್ಗೆ ಚಾಲಕ ಸ್ವಾಮಿಗೌಡ ಬಿಡದಿ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದರು.

ಇದನ್ನೂ ಓದಿ: ಗೋವು ಸಾಗಿಸುತ್ತಿದ್ದ ಲಾರಿ ತಡೆದಿದ್ದಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ಹಲ್ಲೆ

ಕ್ಯಾಬ್​​ ಚಾಲಕನ ದೂರು ಆಧರಿಸಿ ತನಿಖೆ ನಡೆಸಿರುವ ಪೊಲೀಸರು GPS ಆಧಾರದ ಮೇಲೆ ಚಿತ್ರದುರ್ಗದ ಬಳಿ ನಾಲ್ವರು ಬಾಲಕಿಯರು ಸೇರಿ ಎಂಟು ಜನರನ್ನ ಬಂಧಿಸಿದ್ದಾರೆ. ಮೈಸೂರು ಮೂಲದ ಸದ್ದಾಂ, ಕಬೀರ್, ಯಶವಂತ್, ಶಿವಪ್ರಸಾದ್ ಬಂಧಿತ ಆರೋಪಿಗಳು. ಮೋಜುಮಸ್ತಿಗಾಗಿ ಈ ನಾಲ್ವರು, ಬಾಲಕರಿಯನ್ನ ಜೊತೆಗೆ ಸೇರಿಸಿಕೊಂಡು ದರೋಡೆ, ಕಳ್ಳತನ ಮಾಡುತ್ತಿದ್ದರು. ಆರೋಪಿಗಳು ಬಿಡದಿ, ಕನಕಪುರ, ಚನ್ನಪಟ್ಟಣ, ಮಳವಳ್ಳಿ, ಶಿವಮೊಗ್ಗ, ಶ್ರೀರಂಗಪಟ್ಟಣದಲ್ಲಿ ತಮ್ಮ ಕೈಚಳಕ ತೋರಿರುವುದು ಕೂಡ ತನಿಖೆ ವೇಳೆ ಬೆಳಕಿಗೆ ಬಂದಿದೆ. ಬಂಧಿತರಿಂದ 16 ಲಕ್ಷ ರೂ. ಮೌಲ್ಯದ 3 ಕಾರು, 6 ದ್ವಿಚಕ್ರ ವಾಹನ, 1 ಆಟೋ ಹಾಗೂ ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರಗಳನ್ನ ವಶಕ್ಕೆ ಪಡೆಯಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ. 

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ